ಬೆಂಗಳೂರು: ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ (ಚಾರ್ಜ್ ಶೀಟ್) ಸಲ್ಲಿಸಿದ್ದಾರೆ.
ಆರೋಪಿ ನಟ ದರ್ಶನ್, ಅವರ ಆಪ್ತೆ ಪವಿತ್ರಾ ಗೌಡ ಸೇರಿದಂತೆ 17 ಮಂದಿಯ ವಿರುದ್ಧ 3,991 ಪುಟಗಳ ಪ್ರಾಥಮಿಕ ದೋಷಾರೋಪ ಪಟ್ಟಿಯ ಮುದ್ರಿತ ಪ್ರತಿಯನ್ನು ತನಿಖಾ ತಂಡವು ನ್ಯಾಯಾಲಯಕ್ಕೆ ಸಲ್ಲಿಸಿದೆ.
ಮೂವರು ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ, ಎಂಟು ವರದಿಗಳು, 231ಕ್ಕೂ ಹೆಚ್ಚು ಸಾಕ್ಷ್ಯಾಧಾರಗಳ ಹೇಳಿಕೆಯ ಸಹಿತ ಇದುವರೆಗಿನ ತನಿಖಾ ಮಾಹಿತಿಯನ್ನು ದೋಷಾರೋಪ ಪಟ್ಟಿ ಒಳಗೊಂಡಿದೆ ಎಂದು ತಿಳಿದುಬಂದಿದೆ.
ದರ್ಶನ್ 2ನೇ ಆರೋಪಿ: ಎಫ್ ಐಆರ್ ನಲ್ಲಿ ಇರುವಂತೆಯೇ ಚಾರ್ಜ್ ಶೀಟ್ ನಲ್ಲೂ ನಟ ದರ್ಶನ್ ಅವರನ್ನು ಎರಡನೇ ಆರೋಪಿ ಎಂದೇ ಉಲ್ಲೇಖಿಸಲಾಗಿದೆ. ಪವಿತ್ರಾ ಗೌಡ ಮೊದಲ ಆರೋಪಿಯಾಗಿಯೇ ಉಳಿದಿದ್ದಾರೆ. ಉಳಿದ ಹದಿನೈದು ಆರೋಪಿಗಳ ಪಾತ್ರವನ್ನು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.
ತನಿಖೆ ಇನ್ನೂ ಬಾಕಿಯಿದ್ದು, ಇದು ಪ್ರಾಥಮಿಕ ದೋಷಾರೋಪ ಪಟ್ಟಿ. ತನಿಖೆ ಪೂರ್ಣಗೊಂಡ ಬಳಿಕ ಮತ್ತೊಂದು ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…