ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ನಟ ದರ್ಶನ್ ಪವಿತ್ರಾ ಗೌಡ ವಿನಯ್ ಸೇರಿದಂತೆ ಹಲವರ ಪೊಲೀಸ್ ಕಸ್ಟಡಿ ಅವಧಿ ಇಂದು ಮುಕ್ತಾಯಗೊಳ್ಳಲಿದೆ.
ಜೂನ್ 11ರಂದು ಆರೋಪಿಗಳನ್ನು ಬಂಧಿಸಲಾಗಿದ್ದು, ಈವರೆಗೆ ಪೊಲೀಸರು ವಿವಿಧ ರೀತಿಯಲ್ಲಿ ವಿಚಾರಣೆ ನಡೆಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಇಂದಿಗೆ 17 ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಹೀಗಾಗಿ, ಜೂನ್ 20ರ ಮಧ್ಯಾಹ್ನದ ನಂತರ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಕೇಸ್ಗೆ ಸಂಬಂಧಿಸಿದಂತೆ ಜೂನ್ 11ರ ಮುಂಜಾನೆ ದರ್ಶನ್ ಅವರನ್ನು ಮೈಸೂರಿನ ರಾಡಿಸನ್ ಬ್ಲೂ ಹೋಟೆಲ್ನಲ್ಲಿ ಬಂಧಿಸಲಾಯಿತು. ಆ ಬಳಿಕ ಪವಿತ್ರಾ ಗೌಡ ಸೇರಿ ಹಲವರ ಬಂಧನ ಆಗಿತ್ತು. ಅನುಮಾನ ಇರುವ ಎಲ್ಲರನ್ನೂ ಪೊಲೀಸರು ಬಂಧಿಸಿದರು. 2ನೇ ಬಾರಿಗೆ ಪೊಲೀಸ್ ಕಸ್ಟಡಿ ಅಂತ್ಯ ಆಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯದ ಎದುರು ಆರೋಪಿಗಳನ್ನು ಪೊಲೀಸರು ಹಾಜರುಪಡಿಸಲಿದ್ದಾರೆ.
ಈಗಾಗಲೇ ದರ್ಶನ್ ಮತ್ತವರ ಗ್ಯಾಂಗ್ನ ಆರೋಪಿಗಳನ್ನ ಪೊಲೀಸರು ವಿವಿಧ ಆಯಾಮಗಳಲ್ಲಿ ವಿಚಾರಣೆ ನಡೆಸಿದ್ದಾರೆ. ಸ್ಥಳ ಮಹಜರು ನಡೆಸಿ, ಮಹತ್ವದ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ, ಸ್ವಇಚ್ಚಾ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಹೀಗಾಗಿ ಮತ್ತೆ ಡಿ ಗ್ಯಾಂಗ್ ನ ಪೊಲೀಸ್ ಕಸ್ಟಡಿಗೆ ಕೇಳದಿರಲು ತೀರ್ಮಾನಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಮನವಿ ಮಾಡಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…
ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…
ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…
ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್ನ ಚಿರಾಗ್ ನಗರದ ಗೌಸಿಯಾ ಚಾಲ್ನಲ್ಲಿ ಬುಧವಾರ…
ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…