ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದರ್ಶನ್ ತೂಗುದೀಪ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರ ವಿಚಾರಣೆ ಎದುರಿಸುತ್ತಿದ್ದಾರೆ. ಇಂದಿಗೆ ದರ್ಶನ್ ಬಂಧನವಾಗಿ ಎಂಟು ದಿನವಾಗಿದೆ. ಇಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಠಾಣೆಗೆ ಭೇಟಿ ನೀಡಿದ್ದಾರೆ.
ಕಳೆದ ಮಂಗಳವಾರ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾಗಿತ್ತು, ಪತ್ನಿ ವಿಜಯಲಕ್ಷ್ಮಿ ಅವರು, ದರ್ಶನ್ ಪರವಾಗಿ ವಕೀಲರನ್ನು ನೇಮಿಸಿ, ಪತಿಗಾಗಿ ಹೋರಾಟ ನಡೆಸುತ್ತಿದ್ದರು, ಅಂತಿಮವಾಗಿ ಇಂದು ಪೊಲೀಸರ ಮುಂದೆ ಹೇಳಿಕೆ ನೀಡಲಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ನಡೆದ ಬಳಿಕ ವಿಜಯಲಕ್ಷ್ಮಿ ವಾಸವಿರುವ ಅಪಾರ್ಟ್ಮೆಂಟ್ಗೆ ದರ್ಶನ್ ಹೋಗಿದ್ದರು. ಅಲ್ಲಿ ತಮ್ಮ ಬಟ್ಟೆಗಳನ್ನು ಬದಲಿಸಿದ್ದರು. ಶೂಗಳನ್ನು ಸಹ ಅಲ್ಲಿಯೇ ಬಿಟ್ಟಿದ್ದರು. ಅದೇ ಕಾರಣಕ್ಕೆ ವಿಜಯಲಕ್ಷ್ಮಿ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಕರೆದಿದ್ದರು ಎನ್ನಲಾಗುತ್ತಿದೆ.
ದರ್ಶನ್ಗೆ ಬಟ್ಟೆ ಸೇರಿದಂತೆ ಕೆಲವು ಅಗತ್ಯ ವಸ್ತುಗಳನ್ನು ಸಹ ವಿಜಯಲಕ್ಷ್ಮಿ ತಂದಿದ್ದಾರೆ ಎಂಬ ಮಾಹಿತಿಯೂ ಇದೆ. ದರ್ಶನ್ ಬಂಧನ ಆದಾಗಿನಿಂದಲೂ ವಿಜಯಲಕ್ಷ್ಮಿ ಅವರು ಬೇರೊಬ್ಬರಿಂದ ದರ್ಶನ್ಗೆ ಬೇಕಾದ ಬಟ್ಟೆ ಮತ್ತು ಕೆಲ ಅಗತ್ಯ ವಸ್ತುಗಳನ್ನು ಕಳಿಸುತ್ತಿದ್ದರು ಎನ್ನಲಾಗುತ್ತಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…