ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದರ್ಶನ್ ತೂಗುದೀಪ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರ ವಿಚಾರಣೆ ಎದುರಿಸುತ್ತಿದ್ದಾರೆ. ಇಂದಿಗೆ ದರ್ಶನ್ ಬಂಧನವಾಗಿ ಎಂಟು ದಿನವಾಗಿದೆ. ಇಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಠಾಣೆಗೆ ಭೇಟಿ ನೀಡಿದ್ದಾರೆ.
ಕಳೆದ ಮಂಗಳವಾರ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾಗಿತ್ತು, ಪತ್ನಿ ವಿಜಯಲಕ್ಷ್ಮಿ ಅವರು, ದರ್ಶನ್ ಪರವಾಗಿ ವಕೀಲರನ್ನು ನೇಮಿಸಿ, ಪತಿಗಾಗಿ ಹೋರಾಟ ನಡೆಸುತ್ತಿದ್ದರು, ಅಂತಿಮವಾಗಿ ಇಂದು ಪೊಲೀಸರ ಮುಂದೆ ಹೇಳಿಕೆ ನೀಡಲಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ನಡೆದ ಬಳಿಕ ವಿಜಯಲಕ್ಷ್ಮಿ ವಾಸವಿರುವ ಅಪಾರ್ಟ್ಮೆಂಟ್ಗೆ ದರ್ಶನ್ ಹೋಗಿದ್ದರು. ಅಲ್ಲಿ ತಮ್ಮ ಬಟ್ಟೆಗಳನ್ನು ಬದಲಿಸಿದ್ದರು. ಶೂಗಳನ್ನು ಸಹ ಅಲ್ಲಿಯೇ ಬಿಟ್ಟಿದ್ದರು. ಅದೇ ಕಾರಣಕ್ಕೆ ವಿಜಯಲಕ್ಷ್ಮಿ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಕರೆದಿದ್ದರು ಎನ್ನಲಾಗುತ್ತಿದೆ.
ದರ್ಶನ್ಗೆ ಬಟ್ಟೆ ಸೇರಿದಂತೆ ಕೆಲವು ಅಗತ್ಯ ವಸ್ತುಗಳನ್ನು ಸಹ ವಿಜಯಲಕ್ಷ್ಮಿ ತಂದಿದ್ದಾರೆ ಎಂಬ ಮಾಹಿತಿಯೂ ಇದೆ. ದರ್ಶನ್ ಬಂಧನ ಆದಾಗಿನಿಂದಲೂ ವಿಜಯಲಕ್ಷ್ಮಿ ಅವರು ಬೇರೊಬ್ಬರಿಂದ ದರ್ಶನ್ಗೆ ಬೇಕಾದ ಬಟ್ಟೆ ಮತ್ತು ಕೆಲ ಅಗತ್ಯ ವಸ್ತುಗಳನ್ನು ಕಳಿಸುತ್ತಿದ್ದರು ಎನ್ನಲಾಗುತ್ತಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…