ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ದರ್ಶನ್ರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ದರ್ಶನ್, ಪವಿತ್ರಾ ಗೌಡ, ಲಕ್ಷ್ಮಣ್ ಗೌಡ, ಪ್ರದೋಶ್, ಅನುಕುಮಾರ್, ನಾಗರಾಜು, ಲಕ್ಷ್ಮಣ್, ಜಗದೀಶ್ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜುಲೈ 11 ರಂದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದರು. ಪ್ರಸ್ತುತ ಅವರು ಅನಾರೋಗ್ಯದ ಕಾರಣ ನೀಡಿ ಹೈಕೋರ್ಟ್ನಿಂದ ಮಧ್ಯಂತರ ಜಾಮೀನು ಪಡೆದಿದ್ದಾರೆ. ಈಗ ಅವರಿಗೆ ಜಾಮೀನು ಮಂಜೂರಾಗಿದ್ದು, ತಾತ್ಕಾಲಿಕ ನಿರಾಳತೆ ದೊರಕಿದೆ.
ದರ್ಶನ್ ಪರ ವಾದ ಮಂಡಿಸಿದ್ದ ಸಿವಿ ನಾಗೇಶ್ ಅವರು, ದರ್ಶನ್ ಅವರದ್ದು ರೇಣುಕಾ ಸ್ವಾಮಿ ಕೊಲೆಯಲ್ಲಿ ಪಾತ್ರವಿಲ್ಲ ಎಂದು ವಾದಿಸಿದ್ದರು. ಪೊಲೀಸರು ಕೆಲವು ಉತ್ಪ್ರೇಕ್ಷಿತ ಆರೋಪಗಳನ್ನು ದರ್ಶನ್ ವಿರುದ್ಧ ಮಾಡಿದ್ದಾರೆ ಎಂದು ವಾದಿಸಿದ್ದರು. ದರ್ಶನ್ ಪರ ವಕೀಲರ ವಾದವನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಅವರು ದರ್ಶನ್ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…