Featured

ರೈತರದ್ದು ನಮ್ಮದು ಬ್ಲಡ್ ರಿಲೇಶನ್ ; ಕೃಷಿ ಇಲಾಖೆ ರಾಯಭಾರಿಯಾಗಿ ಅಧಿಕಾರ ಸ್ವೀಕರಿಸಿದ ನಟ ದರ್ಶನ್ -Vishwanews24

ರೈತರದ್ದು ನಮ್ಮದು ಬ್ಲಡ್ ರಿಲೇಶನ್ ; ಕೃಷಿ ಇಲಾಖೆ ರಾಯಭಾರಿಯಾಗಿ ಅಧಿಕಾರ ಸ್ವೀಕರಿಸಿದ ನಟ ದರ್ಶನ್ -Vishwanews24

ಬೆಂಗಳೂರು: ರೈತರದ್ದು ನಮ್ಮದು ಭಾವನಾತ್ಮಕ ಬ್ಲಡ್ ರಿಲೇಶನ್  ಎಂದು ಕೃಷಿ ಇಲಾಖೆ ರಾಯಭಾರಿಯಾಗಿ ಅಧಿಕಾರ ಸ್ವೀಕರಿಸಿದ ನಟ ದರ್ಶನ್ ಹೇಳಿದ್ದಾರೆ.

ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸನ್ಮಾನ ಮಾಡುವ ಮೂಲಕ ಕೃಷಿ ಇಲಾಖೆ ರಾಯಭಾರಿಯಾಗಿ ನಟ ದರ್ಶನ್ ಅವರನ್ನು ಅಧಿಕೃತವಾಗಿ ಘೋಷಣೆ ಮಾಡಿದರು. ಈ ವೇಳೆ ಮಾತನಾಡಿದ ಡಿ ಬಾಸ್, ಎಲ್ಲರೂ ರೈತರದ್ದು ನಮ್ಮದು ಭಾವನಾತ್ಮಕ ಸಂಬಂಧ ಎನ್ನುತ್ತಾರೆ. ಆದರೆ ಅದು ಕೇವಲ ಭಾವನಾತ್ಮಕವಲ್ಲ, ಬ್ಲಡ್ ರಿಲೇಶನ್ ಆಗಿದೆ. ಅವರು ಆಹಾರ ನೀಡಿದರೇನೆ ನಮ್ಮ ಮೈಯ್ಯಲ್ಲಿ ರಕ್ತ. ಇಲ್ಲವಾದರೆ ನಮ್ಮ ಮೈಯ್ಯಲ್ಲಿ ರಕ್ತ ಇರುವುದಿಲ್ಲ ಎಂದರು.

ಏಕ್ ಔರ್ ನರೇನ್ : ತೆರೆಯ ಮೇಲೆ ಬರಲಿದೆ ಪ್ರಧಾನಿ ನರೇಂದ್ರ ಮೋದಿಯವರ ಜೀವನಚರಿತ್ರೆ ಆಧಾರಿತ ಸಿನಿಮಾ -Vishwanews24

ರೈತರಿಗೆ ಏನೇನು ಒಳ್ಳೆಯದು ಮಾಡಬಹುದೋ ಅದೆಲ್ಲವನ್ನೂ ಮಾಡುತ್ತೇನೆ. ನಾವು ದೊಡ್ಡದೇನು ಮಾಡುತ್ತಿಲ್ಲ. ಸರ್ಕಾರದಿಂದ ರೈತರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಜಾಹೀರಾತಿನ ಮೂಲಕ ಹೇಳುತ್ತೇನೆ ಅಷ್ಟೇ ಎಂದು ತಿಳಿಸಿದರು.

ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ದರ್ಶನ್ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಕೃಷಿ ಇಲಾಖೆ ರಾಯಭಾರಿ ಆಗಿದ್ದಾರೆ. ಅದಕ್ಕೆ ಸಮಸ್ತ ನಾಡಿನ ಪರವಾಗಿ ಅಭಿನಂದಿಸುತ್ತೇನೆ. ದರ್ಶನ್ ಕಾರ್ಯಕ್ರಮವನ್ನು ವಿಧಾನಸೌಧದ ಹೊರಭಾಗ ಮಾಡಿದ್ದರೆ 50 ಸಾವಿರಕ್ಕೂ ಅಧಿಕ ಜನ ಸೇರುತ್ತಿದ್ದರು. ಅವರ ಅಭಿಮಾನಿ ಬಳಗ ದೊಡ್ಡದಿದೆ. ಇದರಿಂದ ಕೃಷಿ ಇಲಾಖೆಗೂ ಬಲ ಬಂದಿದೆ ಎಂದು ತಿಳಿಸಿದರು.

ಮಂಗಳೂರು : ನವಜಾತ ಶಿಶುಗಳ ಮಾರಾಟ ಜಾಲ : ಮಂಗಳೂರು ಪೊಲೀಸರಿಂದ ಆರೋಪಿಯ ಬಂಧನ -Vishwanews24

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

2 days ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

2 days ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

2 days ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

2 days ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

2 days ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

2 days ago