ಬೆಂಗಳೂರು: ರೈತರದ್ದು ನಮ್ಮದು ಭಾವನಾತ್ಮಕ ಬ್ಲಡ್ ರಿಲೇಶನ್ ಎಂದು ಕೃಷಿ ಇಲಾಖೆ ರಾಯಭಾರಿಯಾಗಿ ಅಧಿಕಾರ ಸ್ವೀಕರಿಸಿದ ನಟ ದರ್ಶನ್ ಹೇಳಿದ್ದಾರೆ.
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸನ್ಮಾನ ಮಾಡುವ ಮೂಲಕ ಕೃಷಿ ಇಲಾಖೆ ರಾಯಭಾರಿಯಾಗಿ ನಟ ದರ್ಶನ್ ಅವರನ್ನು ಅಧಿಕೃತವಾಗಿ ಘೋಷಣೆ ಮಾಡಿದರು. ಈ ವೇಳೆ ಮಾತನಾಡಿದ ಡಿ ಬಾಸ್, ಎಲ್ಲರೂ ರೈತರದ್ದು ನಮ್ಮದು ಭಾವನಾತ್ಮಕ ಸಂಬಂಧ ಎನ್ನುತ್ತಾರೆ. ಆದರೆ ಅದು ಕೇವಲ ಭಾವನಾತ್ಮಕವಲ್ಲ, ಬ್ಲಡ್ ರಿಲೇಶನ್ ಆಗಿದೆ. ಅವರು ಆಹಾರ ನೀಡಿದರೇನೆ ನಮ್ಮ ಮೈಯ್ಯಲ್ಲಿ ರಕ್ತ. ಇಲ್ಲವಾದರೆ ನಮ್ಮ ಮೈಯ್ಯಲ್ಲಿ ರಕ್ತ ಇರುವುದಿಲ್ಲ ಎಂದರು.
ಏಕ್ ಔರ್ ನರೇನ್ : ತೆರೆಯ ಮೇಲೆ ಬರಲಿದೆ ಪ್ರಧಾನಿ ನರೇಂದ್ರ ಮೋದಿಯವರ ಜೀವನಚರಿತ್ರೆ ಆಧಾರಿತ ಸಿನಿಮಾ -Vishwanews24
ರೈತರಿಗೆ ಏನೇನು ಒಳ್ಳೆಯದು ಮಾಡಬಹುದೋ ಅದೆಲ್ಲವನ್ನೂ ಮಾಡುತ್ತೇನೆ. ನಾವು ದೊಡ್ಡದೇನು ಮಾಡುತ್ತಿಲ್ಲ. ಸರ್ಕಾರದಿಂದ ರೈತರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಜಾಹೀರಾತಿನ ಮೂಲಕ ಹೇಳುತ್ತೇನೆ ಅಷ್ಟೇ ಎಂದು ತಿಳಿಸಿದರು.
ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ದರ್ಶನ್ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಕೃಷಿ ಇಲಾಖೆ ರಾಯಭಾರಿ ಆಗಿದ್ದಾರೆ. ಅದಕ್ಕೆ ಸಮಸ್ತ ನಾಡಿನ ಪರವಾಗಿ ಅಭಿನಂದಿಸುತ್ತೇನೆ. ದರ್ಶನ್ ಕಾರ್ಯಕ್ರಮವನ್ನು ವಿಧಾನಸೌಧದ ಹೊರಭಾಗ ಮಾಡಿದ್ದರೆ 50 ಸಾವಿರಕ್ಕೂ ಅಧಿಕ ಜನ ಸೇರುತ್ತಿದ್ದರು. ಅವರ ಅಭಿಮಾನಿ ಬಳಗ ದೊಡ್ಡದಿದೆ. ಇದರಿಂದ ಕೃಷಿ ಇಲಾಖೆಗೂ ಬಲ ಬಂದಿದೆ ಎಂದು ತಿಳಿಸಿದರು.
ಮಂಗಳೂರು : ನವಜಾತ ಶಿಶುಗಳ ಮಾರಾಟ ಜಾಲ : ಮಂಗಳೂರು ಪೊಲೀಸರಿಂದ ಆರೋಪಿಯ ಬಂಧನ -Vishwanews24
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…