ಮೈಸೂರು, (Vishwanews24) : ”ರೈತರನ್ನೇ ದಾರಿ ತಪ್ಪಿಸಿದವರು, ಕೆಎಸ್ಆರ್ಟಿಸಿ ನೌಕರರನ್ನು ಬಿಡುತ್ತಾರಾ” ಎಂದು ಸಂಸದ ಪ್ರತಾಪ್ ಸಿಂಹ ಅವರು ಹೇಳಿದ್ದಾರೆ.
ಸಾರಿಗೆ ನೌಕರರ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದ್ದು ಈ ಹಿನ್ನೆಲೆ ಸಂಸದ ಪ್ರಯಾಪ್ಸಿಂಹ ಅವರು ಮೈಸೂರು ಕೇಂದ್ರಿಯ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರ್ಯಾಯ ಬಸ್ ಸೇವೆಯ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ”ರೈತರನ್ನೇ ದಾರಿ ತಪ್ಪಿಸಿದವರನ್ನು ನಮ್ಮ ನಾಯಕ ಎಂದು ಹೇಳಿದರೆ, ಕೆಎಸ್ಆರ್ಟಿಸಿ ನೌಕರರು ದಾರಿ ತಪ್ಪದೇ ಇರುತ್ತಾರಾ? ಕೆಎಸ್ಆರ್ಟಿಸಿ ನೌಕರರು ಆತನನ್ನು ತಮ್ಮ ನಾಯಕ ಎಂದು ಒಪ್ಪಿಕೊಂಡಿರುವುದೇ ತಪ್ಪು” ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ದ ವಾಗ್ದಾಳಿ ನಡೆಸಿದರು.
ಕುಮಾರಸ್ವಾಮಿ ಅವರು ಇರೋದೇ ಕಪ್ಪು , ಹಾಗಾಗಿ ಅವರನ್ನು ಕರಿಯ ಎಂದು ಕರೆದೆ.. : ಜಮೀರ್ ಅಹ್ಮದ್ -Vishwanews24
”ಪ್ರೊ| ನಂಜುಂಡಸ್ವಾಮಿ, ಕೆ. ಎಸ್. ಪುಟ್ಟಣ್ಣಯ್ಯ ಅವರು ಇದ್ದಾಗ ರೈತ ಮುಖಂಡರು ಹಾಗೂ ಅವರ ಹೋರಾಟದ ಬಗ್ಗೆ ನನಗೆ ಗೌರವವಿತ್ತು. ಆದರೆ ಅವರಿಬ್ಬರು ನಿಧನ ಹೊಂದಿದ್ದ ಬಳಿಕ ಈಗ ಅವರಂತವರು ಯಾರೂ ರೈತ ಮುಖಂಡರು ಇಲ್ಲ. ಈಗ ಇರುವವರು ಬರೀ ಹೋರಾಟಗಾರರು” ಎಂದು ಹೇಳಿದರು.
”ಕೆಎಸ್ಆರ್ಟಿಸಿ ನೌಕರರು ಹೀಗೆ ಸಂಕಷ್ಟದ ಸಂದರ್ಭದಲ್ಲಿ ಹೋರಾಟ ನಡೆಸುವಾಗ ನಾವು ಈ ವಿಭಾಗವನ್ನೂ ಕೂಡಾ ಖಾಸಗೀಕರಣ ಮಾಡುವ ಚಿಂತನೆ ನಡೆಸಬೇಕಾಗುತ್ತದೆ. ಈಗಾಗಲೇ ನಾವು ಎಲ್ಲಾ ವಿಭಾಗಗಳಲ್ಲಿ ಖಾಸಗೀಕರಣದ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ” ಎಂದು ಕೂಡಾ ಅವರು ತಿಳಿಸಿದರು.
”ನಿಮ್ಮ ಮೇಲೆ ಇಟ್ಟಿರುವ ಪ್ರೀತಿ ಮುಷ್ಕರ ಮಾಡುವ ಮೂಲಕ ಕಳೆದುಕೊಳ್ಳಬೇಡಿ. ಜನರೇ ಎಲ್ಲಾ ವಿಭಾಗ ಖಾಸಗೀಕರಣ ಮಾಡಬೇಕು ಎಂದು ಒತ್ತಾಯಿಸುವಂತೆ ಮಾಡಬೇಡಿ. ಸರ್ಕಾರ ಎಸ್ಮಾ ಜಾರಿ ಮಾಡಬೇಕಾದ ಸ್ಥಿತಿಯನ್ನು ಕೂಡಾ ತಂದೊಡ್ಡಬೇಡಿ” ಎಂದು ಮನವಿ ಮಾಡಿದರು.
ಬೆಳ್ತಂಗಡಿ : ಯುವತಿಗೆ ಚೂರಿ ಇರಿತ ; ಆರೋಪಿಯ ಬಂಧನ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…