ರೈತರಿಗಾಗಿ ಬೆಳೆಸಾಲಮನ್ನಾ ಸಹಾಯವಾಣಿ’ ಆರಂಭಿಸಿದ ಕುಮಾರಸ್ವಾಮಿ -Vishwanews24
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬೆಳೆ ಸಾಲಮನ್ನಾ ಸಹಾಯವಾಣಿಯನ್ನು ಆರಂಭಿಸಿದ್ದು, ರೈತರು ಕರೆ ಮಾಡಿ ಉಪಯೋಗ ಪಡೆದುಕೊಳ್ಳುವಂತೆ ಟ್ವೀಟ್ ಮಾಡಿದ್ದಾರೆ.
ಸೋಮವಾರ ಬೆಳಿಗ್ಗೆ ಟ್ವೀಟ್ ಮಾಡಿದ್ದ ಎಚ್ ಡಿ ಕುಮಾರಸ್ವಾಮಿ, ಪ್ರತಿ ದಿನ ನೂರಾರು ರೈತರು ತಮ್ಮ ಬೆಳೆಸಾಲಮನ್ನಾ ವಿಚಾರವಾಗಿ ಮಾಹಿತಿ ಪಡೆಯಲು ನನ್ನ ಮನೆಗೆ ಬರುತ್ತಿದ್ದಾರೆ. ದೂರದೂರಿನಿಂದ ಬರುವ ರೈತರಿಗೆ ಕಷ್ಟವಾಗಬಾರದೆಂದು ನಾನು ರೈತರ ‘ಬೆಳೆ ಸಾಲಮನ್ನಾ ಸಹಾಯವಾಣಿ’ ಆರಂಭಿಸಿದ್ದೇನೆ. ರೈತರು ತಮ್ಮ ಮನೆಯಿಂದಲೇ 9164305868 ನಂಬರ್ ಗೆ ಬೆಳಗ್ಗೆ 10 ರಿಂದ 5 ರವರೆಗೆ ಕರೆ ಮಾಡಿ ಸಾಲಮನ್ನಾದ ವಿವರ ಪಡೆಯಬಹುದು ಎಂದು ಬರೆದುಕೊಂಡಿದ್ದಾರೆ.
ಪ್ರತಿ ದಿನ ನೂರಾರು ರೈತರು ತಮ್ಮ ಬೆಳೆಸಾಲಮನ್ನಾ ವಿಚಾರವಾಗಿ ಮಾಹಿತಿ ಪಡೆಯಲು ನನ್ನ ಮನೆಗೆ ಬರುತ್ತಿದ್ದಾರೆ. ದೂರದೂರಿನಿಂದ ಬರುವ ರೈತರಿಗೆ ಕಷ್ಟವಾಗಬಾರದೆಂದು ನಾನು ರೈತರ 'ಬೆಳೆಸಾಲಮನ್ನಾ ಸಹಾಯವಾಣಿ' ಆರಂಭಿಸಿದ್ದೇನೆ. ರೈತರು ತಮ್ಮ ಮನೆಯಿಂದಲೇ 9164305868 ನಂಬರ್ ಗೆ ಬೆಳಗ್ಗೆ 10 ರಿಂದ 5 ರವರೆಗೆ ಕರೆ ಮಾಡಿ ಸಾಲಮನ್ನಾದ ವಿವರ ಪಡೆಯಬಹುದು
— H D Kumaraswamy (@hd_kumaraswamy) November 4, 2019
ಇದೀಗ ಸಾಲಮನ್ನಾಕ್ಕೆ ಸಂಬಂಧಪಟ್ಟಂತೆ ಟ್ವೀಟ್ ಒಂದನ್ನು ಮಾಡಿರುವ ಕುಮಾರಸ್ವಾಮಿಯವರು ರೈತರಿಗಾಗಿ ಸಹಾಯವಾಣಿ ನಂಬರ್ ನೀಡಿದ್ದಾರೆ.
