ಬೆಂಗಳೂರು: ಹಿರೆಕೆರೂರಿನ ಕಾಂಗ್ರೆಸ್ ಶಾಸಕ ಬಿ.ಸಿ.ಪಾಟೀಲ್ ಅವರು ಇಂದು ತನ್ನ ಒಂದು ತಿಂಗಳ ಸಂಬಳವಾದ 25 ಸಾವಿರ ರೂ.ಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬ ಶಾಸಕ ಹಾಗೂ ವಿಧಾನಪರಿಷತ್ ಸದಸ್ಯರು ತಮ್ಮ 1 ತಿಂಗಳ ಸಂಬಳವನ್ನು ಈ ರೈತರ ಸಾಲ ಮನ್ನಾ ಆಗಲು ಬಿಟ್ಟು ಕೊಡಬೇಕು ಅಂತ ಮನವಿ ಮಾಡಿಕೊಂಡರು.
ಇಂದು ನಾನು ನನ್ನ 1 ತಿಂಗಳ ಸಂಬಳ 25 ಸಾವಿರ ರೂ.ವನ್ನು ರೈತರ ಸಾಲ ಮನ್ನಾ ಮಾಡಿದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೊಡುತ್ತಿದ್ದೇನೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೊಟ್ಟಲ್ಲಿ ರಾಜ್ಯದ ಅಭಿವೃದ್ಧಿ ಮುಂದೆ ಹೋಗುತ್ತೆ ಎನ್ನುವ ದೃಷ್ಟಿಯಿಂದ ಸರ್ಕಾರಿ ನೌಕರರು, ಶಾಸಕರು ಕೂಡ ತಮ್ಮ ಸಂಬಳವನ್ನು ಪರಿಹಾರ ನಿಧಿಗೆ ನೀಡಬೇಕು ಎಂದು ಈ ವೇಳೆ ವಿನಂತಿ ಮಾಡಿಕೊಂಡರು.
ಒಟ್ಟಿನಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿದೂಗಿಸಲು ಸಹಕಾರ ನೀಡುವ ಮೂಲಕ ಸರ್ಕಾರಿ ಅಧಿಕಾರಿಗಳು ಇದಕ್ಕೆ ತಮ್ಮ ತಿಂಗಳ ವೇತನ ನೀಡಲಿ ಅಂತ ಅವರು ತಿಳಿಸಿದ್ರು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…