ನವದೆಹಲಿ: ನಕಲಿ, ಕಳಪೆ ಕೀಟನಾಶಕ ಮಾರಿದರೆ ಗರಿಷ್ಠ 5 ವರ್ಷ ಜೈಲು ಶಿಕ್ಷೆ ವಿಧಿಸುವ ‘ಕೀಟನಾಶಕ ನಿರ್ವಹಣಾ ಮಸೂದೆ -2020’ಕ್ಕೆ ಕೇಂದ್ರ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ.
ನಕಲಿ ಕೀಟನಾಶಕ ಬಳಸಿ ನಷ್ಟ ಉಂಟಾದಲ್ಲಿ ರೈತರಿಗೆ ಪರಿಹಾರ ನೀಡುವ ಮಸೂದೆಯನ್ನು ಬಜೆಟ್ ಅಧಿವೇಶನದ ಎರಡನೇ ಅವಧಿಯಲ್ಲಿ ಮಂಡಿಸುವುದಕ್ಕೆ ಕ್ಯಾಬಿನೆಟ್ ಬುಧವಾರ ಒಪ್ಪಿಗೆ ನೀಡಿತು.
ಕೀಟನಾಶಕ ಕಾಯ್ದೆ -1968ರ ಜಾಗವನ್ನು ಈ ಮಸೂದೆ ತುಂಬಲಿದೆ. ಪ್ರಸ್ತಾವಿತ ಮಸೂದೆಯಲ್ಲಿ ರೈತರ ಹಾದಿ ತಪ್ಪಿಸಿ ಮೋಸ ಆಗದೇ ಇರಲು ಕೀಟನಾಶಕಗಳ ಜಾಹೀರಾತುಗಳ ಮೇಲೂ ನಿಗಾ ವಹಿಸಲಿದೆ.
ಮಸೂದೆಯಲ್ಲಿ ಏನಿದೆ?
ಕೀಟನಾಶಕಗಳಿಗೆ ನಿರ್ಧಿಷ್ಟ ಬೆಲೆಯನ್ನು ನಿಗದಿ ಪಡಿಸಲು ಪ್ರಾಧಿಕಾರ ರಚನೆ ಮಾಡಲಾಗುತ್ತದೆ. ಎಲ್ಲ ಕೀಟನಾಶಕ ಕಂಪನಿಗಳು ಹೊಸ ಕಾಯ್ದೆಯಡಿ ಕಡ್ಡಾಯವಾಗಿ ನೋಂದಣಿಯಾಗಬೇಕು. ಕಳಪೆ ಅಥವಾ ನಕಲಿ ಕೀಟನಾಶಕಗಳಿಂದ ರೈತರಿಗೆ ಮೋಸವಾದರೆ ಪರಿಹಾರ ನೀಡಲಾಗುತ್ತದೆ. ಕಂಪನಿಗಳ ಮೇಲೆ ಹಾಕಲಾದ ದಂಡ ಸಂಗ್ರಹಿಸಲು ಕೇಂದ್ರೀಯ ನಿಧಿಯನ್ನು ಸ್ಥಾಪಿಸಲಾಗುತ್ತದೆ. ಸಂಗ್ರಹಗೊಂಡ ಹಣದಿಂದ ರೈತರಿಗೆ ಪರಿಹಾರ ನೀಡಲಾಗುತ್ತದೆ.
ಶಿಕ್ಷೆ ಏನು?
ಷರತ್ತು, ನಿಯಮಗಳನ್ನು ಉಲ್ಲಂಘಿಸಿದರೆ ಕನಿಷ್ಠ 25 ಸಾವಿರ ರೂಪಾಯಿಯಿಂದ ಗರಿಷ್ಠ 50 ಲಕ್ಷ ರೂಪಾಯಿ ತನಕ ದಂಡವನ್ನೂ ಮತ್ತು ಗರಿಷ್ಠ 5 ವರ್ಷ ಜೈಲು ಶಿಕ್ಷೆಯನ್ನೂ ವಿಧಿಸುವ ಅಂಶವನ್ನು ಮಸೂದೆಯಲ್ಲಿ ಸೇರಿಸಲಾಗಿದೆ.
ಪರಿಸರ, ಅರಣ್ಯ, ಹವಾಮಾನ ಬದಲಾವಣೆ ಖಾತೆಯ ಸಚಿವ ಪ್ರಕಾಶ್ ಜಾವಡೇಕರ್ ಪ್ರತಿಕ್ರಿಯಿಸಿ, ರೈತರ ಅಭಿವೃದ್ಧಿ ನಮ್ಮ ಸರ್ಕಾರದ ಪ್ರಾಥಮಿಕ ಆಧ್ಯತೆಯಾಗಿದ್ದು, ಯಾವುದೇ ರೀತಿಯಲ್ಲೂ ಕೃಷಿಕರಿಗೆ ವಂಚನೆ ಆಗಬಾರದು. ಈ ನಿಟ್ಟಿನಲ್ಲಿ ಕೀಟನಾಶಕ ಕಂಪನಿಗಳ ಮೋಸವನ್ನು ತಪ್ಪಿಸಲು ಈ ಮಸೂದೆಯನ್ನು ಮಂಡಿಸಲಾಗುತ್ತಿದೆ. ಕೃಷಿಕರಿಗೆ ಕೀಟನಾಶಕಗಳ ಬಲ ಮತ್ತು ದೌರ್ಬಲ್ಯಗಳ ಬಗ್ಗೆ ವಿವರ ನೀಡಿ ಅದರ ಅಪಾಯದ ಕುರಿತು ಮಾಹಿತಿ ನೀಡಲಾಗುತ್ತದೆ. ಅಷ್ಟೇ ಅಲ್ಲದೇ ಕೀಟನಾಶಕಕ್ಕೆ ಪರ್ಯಾಯ ಯಾವುದು ಎಂಬ ಮಾಹಿತಿಯೂ ಸಾರ್ವಜನಿಕವಾಗಿ ಡಿಜಿಟಲ್ ಮಾದರಿಯಲ್ಲಿ ಎಲ್ಲ ಭಾಷೆಗಳಲ್ಲಿ ಲಭ್ಯವಿರುತ್ತದೆ. ಇದನ್ನು ನೋಡಿಕೊಂಡು ರೈತರು ತಮ್ಮ ಬೆಳೆಗೆ ಯಾವ ಕೀಟನಾಶಕ ಉತ್ತಮ ಎಂಬ ನಿರ್ಧಾರಕ್ಕೆ ಬರಬಹುದು ಎಂದು ಅವರು ತಿಳಿಸಿದರು.
ರೈತರಿಗೆ ಮೋಸ ಮಾಡುವ ಕಂಪನಿಗಳಿಗೆ ದಂಡ ವಿಧಿಸುವುದು ಈ ಮಸೂದೆಯ ವಿಶೇಷ ಅಂಶವಾಗಿದೆ. ತಯಾರಕರು ಮತ್ತು ಡೀಲರ್ ಗಳಿಂದ ದಂಡವನ್ನು ಸಂಗ್ರಹಿಸಿ ಕೇಂದ್ರೀಯ ನಿಧಿಯ ಮೂಲಕ ರೈತರಿಗೆ ಪರಿಹಾರ ನೀಡಲಾಗುವುದು. ಕೀಟನಾಶಕಗಳ ಬಲ ಮತ್ತು ದೌರ್ಬಲ್ಯಗಳ ವಿವರವನ್ನು ಕೃಷಿಕರು ಡೀಲರ್ ಬಳಿಯಿಂದ ಪಡೆಯಬಹುದು ಎಂದು ಅವರು ವಿವರಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…