ನವದೆಹಲಿ: ನಕಲಿ, ಕಳಪೆ ಕೀಟನಾಶಕ ಮಾರಿದರೆ ಗರಿಷ್ಠ 5 ವರ್ಷ ಜೈಲು ಶಿಕ್ಷೆ ವಿಧಿಸುವ ‘ಕೀಟನಾಶಕ ನಿರ್ವಹಣಾ ಮಸೂದೆ -2020’ಕ್ಕೆ ಕೇಂದ್ರ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ.
ನಕಲಿ ಕೀಟನಾಶಕ ಬಳಸಿ ನಷ್ಟ ಉಂಟಾದಲ್ಲಿ ರೈತರಿಗೆ ಪರಿಹಾರ ನೀಡುವ ಮಸೂದೆಯನ್ನು ಬಜೆಟ್ ಅಧಿವೇಶನದ ಎರಡನೇ ಅವಧಿಯಲ್ಲಿ ಮಂಡಿಸುವುದಕ್ಕೆ ಕ್ಯಾಬಿನೆಟ್ ಬುಧವಾರ ಒಪ್ಪಿಗೆ ನೀಡಿತು.
ಕೀಟನಾಶಕ ಕಾಯ್ದೆ -1968ರ ಜಾಗವನ್ನು ಈ ಮಸೂದೆ ತುಂಬಲಿದೆ. ಪ್ರಸ್ತಾವಿತ ಮಸೂದೆಯಲ್ಲಿ ರೈತರ ಹಾದಿ ತಪ್ಪಿಸಿ ಮೋಸ ಆಗದೇ ಇರಲು ಕೀಟನಾಶಕಗಳ ಜಾಹೀರಾತುಗಳ ಮೇಲೂ ನಿಗಾ ವಹಿಸಲಿದೆ.
ಮಸೂದೆಯಲ್ಲಿ ಏನಿದೆ?
ಕೀಟನಾಶಕಗಳಿಗೆ ನಿರ್ಧಿಷ್ಟ ಬೆಲೆಯನ್ನು ನಿಗದಿ ಪಡಿಸಲು ಪ್ರಾಧಿಕಾರ ರಚನೆ ಮಾಡಲಾಗುತ್ತದೆ. ಎಲ್ಲ ಕೀಟನಾಶಕ ಕಂಪನಿಗಳು ಹೊಸ ಕಾಯ್ದೆಯಡಿ ಕಡ್ಡಾಯವಾಗಿ ನೋಂದಣಿಯಾಗಬೇಕು. ಕಳಪೆ ಅಥವಾ ನಕಲಿ ಕೀಟನಾಶಕಗಳಿಂದ ರೈತರಿಗೆ ಮೋಸವಾದರೆ ಪರಿಹಾರ ನೀಡಲಾಗುತ್ತದೆ. ಕಂಪನಿಗಳ ಮೇಲೆ ಹಾಕಲಾದ ದಂಡ ಸಂಗ್ರಹಿಸಲು ಕೇಂದ್ರೀಯ ನಿಧಿಯನ್ನು ಸ್ಥಾಪಿಸಲಾಗುತ್ತದೆ. ಸಂಗ್ರಹಗೊಂಡ ಹಣದಿಂದ ರೈತರಿಗೆ ಪರಿಹಾರ ನೀಡಲಾಗುತ್ತದೆ.
ಶಿಕ್ಷೆ ಏನು?
ಷರತ್ತು, ನಿಯಮಗಳನ್ನು ಉಲ್ಲಂಘಿಸಿದರೆ ಕನಿಷ್ಠ 25 ಸಾವಿರ ರೂಪಾಯಿಯಿಂದ ಗರಿಷ್ಠ 50 ಲಕ್ಷ ರೂಪಾಯಿ ತನಕ ದಂಡವನ್ನೂ ಮತ್ತು ಗರಿಷ್ಠ 5 ವರ್ಷ ಜೈಲು ಶಿಕ್ಷೆಯನ್ನೂ ವಿಧಿಸುವ ಅಂಶವನ್ನು ಮಸೂದೆಯಲ್ಲಿ ಸೇರಿಸಲಾಗಿದೆ.
ಪರಿಸರ, ಅರಣ್ಯ, ಹವಾಮಾನ ಬದಲಾವಣೆ ಖಾತೆಯ ಸಚಿವ ಪ್ರಕಾಶ್ ಜಾವಡೇಕರ್ ಪ್ರತಿಕ್ರಿಯಿಸಿ, ರೈತರ ಅಭಿವೃದ್ಧಿ ನಮ್ಮ ಸರ್ಕಾರದ ಪ್ರಾಥಮಿಕ ಆಧ್ಯತೆಯಾಗಿದ್ದು, ಯಾವುದೇ ರೀತಿಯಲ್ಲೂ ಕೃಷಿಕರಿಗೆ ವಂಚನೆ ಆಗಬಾರದು. ಈ ನಿಟ್ಟಿನಲ್ಲಿ ಕೀಟನಾಶಕ ಕಂಪನಿಗಳ ಮೋಸವನ್ನು ತಪ್ಪಿಸಲು ಈ ಮಸೂದೆಯನ್ನು ಮಂಡಿಸಲಾಗುತ್ತಿದೆ. ಕೃಷಿಕರಿಗೆ ಕೀಟನಾಶಕಗಳ ಬಲ ಮತ್ತು ದೌರ್ಬಲ್ಯಗಳ ಬಗ್ಗೆ ವಿವರ ನೀಡಿ ಅದರ ಅಪಾಯದ ಕುರಿತು ಮಾಹಿತಿ ನೀಡಲಾಗುತ್ತದೆ. ಅಷ್ಟೇ ಅಲ್ಲದೇ ಕೀಟನಾಶಕಕ್ಕೆ ಪರ್ಯಾಯ ಯಾವುದು ಎಂಬ ಮಾಹಿತಿಯೂ ಸಾರ್ವಜನಿಕವಾಗಿ ಡಿಜಿಟಲ್ ಮಾದರಿಯಲ್ಲಿ ಎಲ್ಲ ಭಾಷೆಗಳಲ್ಲಿ ಲಭ್ಯವಿರುತ್ತದೆ. ಇದನ್ನು ನೋಡಿಕೊಂಡು ರೈತರು ತಮ್ಮ ಬೆಳೆಗೆ ಯಾವ ಕೀಟನಾಶಕ ಉತ್ತಮ ಎಂಬ ನಿರ್ಧಾರಕ್ಕೆ ಬರಬಹುದು ಎಂದು ಅವರು ತಿಳಿಸಿದರು.
ರೈತರಿಗೆ ಮೋಸ ಮಾಡುವ ಕಂಪನಿಗಳಿಗೆ ದಂಡ ವಿಧಿಸುವುದು ಈ ಮಸೂದೆಯ ವಿಶೇಷ ಅಂಶವಾಗಿದೆ. ತಯಾರಕರು ಮತ್ತು ಡೀಲರ್ ಗಳಿಂದ ದಂಡವನ್ನು ಸಂಗ್ರಹಿಸಿ ಕೇಂದ್ರೀಯ ನಿಧಿಯ ಮೂಲಕ ರೈತರಿಗೆ ಪರಿಹಾರ ನೀಡಲಾಗುವುದು. ಕೀಟನಾಶಕಗಳ ಬಲ ಮತ್ತು ದೌರ್ಬಲ್ಯಗಳ ವಿವರವನ್ನು ಕೃಷಿಕರು ಡೀಲರ್ ಬಳಿಯಿಂದ ಪಡೆಯಬಹುದು ಎಂದು ಅವರು ವಿವರಿಸಿದರು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…