ರೈತರಿಗೆ ಶುಭ ಸುದ್ದಿ : ನಕಲಿ, ಕಳಪೆ ಕೀಟನಾಶಕ ಮಾರಿದರೆ 5 ವರ್ಷ ಜೈಲು ಶಿಕ್ಷೆ – ನಕಲಿ ಕೀಟನಾಶಕ ಬಳಸಿ ರೈತರಿಗೆ ನಷ್ಟವಾದರೆ ಕಂಪನಿಗಳಿಂದಲೇ ಪರಿಹಾರ -Vishwanews24

ನವದೆಹಲಿ: ನಕಲಿ, ಕಳಪೆ ಕೀಟನಾಶಕ ಮಾರಿದರೆ ಗರಿಷ್ಠ 5 ವರ್ಷ ಜೈಲು ಶಿಕ್ಷೆ ವಿಧಿಸುವ ‘ಕೀಟನಾಶಕ ನಿರ್ವಹಣಾ ಮಸೂದೆ -2020’ಕ್ಕೆ ಕೇಂದ್ರ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ.

ನಕಲಿ ಕೀಟನಾಶಕ ಬಳಸಿ ನಷ್ಟ ಉಂಟಾದಲ್ಲಿ ರೈತರಿಗೆ ಪರಿಹಾರ ನೀಡುವ ಮಸೂದೆಯನ್ನು ಬಜೆಟ್ ಅಧಿವೇಶನದ ಎರಡನೇ ಅವಧಿಯಲ್ಲಿ ಮಂಡಿಸುವುದಕ್ಕೆ ಕ್ಯಾಬಿನೆಟ್ ಬುಧವಾರ ಒಪ್ಪಿಗೆ ನೀಡಿತು.

 

ಕೀಟನಾಶಕ ಕಾಯ್ದೆ -1968ರ ಜಾಗವನ್ನು ಈ ಮಸೂದೆ ತುಂಬಲಿದೆ. ಪ್ರಸ್ತಾವಿತ ಮಸೂದೆಯಲ್ಲಿ ರೈತರ ಹಾದಿ ತಪ್ಪಿಸಿ ಮೋಸ ಆಗದೇ ಇರಲು ಕೀಟನಾಶಕಗಳ ಜಾಹೀರಾತುಗಳ ಮೇಲೂ ನಿಗಾ ವಹಿಸಲಿದೆ.

ಮಸೂದೆಯಲ್ಲಿ ಏನಿದೆ?
ಕೀಟನಾಶಕಗಳಿಗೆ ನಿರ್ಧಿಷ್ಟ ಬೆಲೆಯನ್ನು ನಿಗದಿ ಪಡಿಸಲು ಪ್ರಾಧಿಕಾರ ರಚನೆ ಮಾಡಲಾಗುತ್ತದೆ. ಎಲ್ಲ ಕೀಟನಾಶಕ ಕಂಪನಿಗಳು ಹೊಸ ಕಾಯ್ದೆಯಡಿ ಕಡ್ಡಾಯವಾಗಿ ನೋಂದಣಿಯಾಗಬೇಕು. ಕಳಪೆ ಅಥವಾ ನಕಲಿ ಕೀಟನಾಶಕಗಳಿಂದ ರೈತರಿಗೆ ಮೋಸವಾದರೆ ಪರಿಹಾರ ನೀಡಲಾಗುತ್ತದೆ. ಕಂಪನಿಗಳ ಮೇಲೆ ಹಾಕಲಾದ ದಂಡ ಸಂಗ್ರಹಿಸಲು ಕೇಂದ್ರೀಯ ನಿಧಿಯನ್ನು ಸ್ಥಾಪಿಸಲಾಗುತ್ತದೆ. ಸಂಗ್ರಹಗೊಂಡ ಹಣದಿಂದ ರೈತರಿಗೆ ಪರಿಹಾರ ನೀಡಲಾಗುತ್ತದೆ.

 

ಶಿಕ್ಷೆ ಏನು?
ಷರತ್ತು, ನಿಯಮಗಳನ್ನು ಉಲ್ಲಂಘಿಸಿದರೆ ಕನಿಷ್ಠ 25 ಸಾವಿರ ರೂಪಾಯಿಯಿಂದ ಗರಿಷ್ಠ 50 ಲಕ್ಷ ರೂಪಾಯಿ ತನಕ ದಂಡವನ್ನೂ ಮತ್ತು ಗರಿಷ್ಠ 5 ವರ್ಷ ಜೈಲು ಶಿಕ್ಷೆಯನ್ನೂ ವಿಧಿಸುವ ಅಂಶವನ್ನು ಮಸೂದೆಯಲ್ಲಿ ಸೇರಿಸಲಾಗಿದೆ.

ಪರಿಸರ, ಅರಣ್ಯ, ಹವಾಮಾನ ಬದಲಾವಣೆ ಖಾತೆಯ ಸಚಿವ ಪ್ರಕಾಶ್ ಜಾವಡೇಕರ್ ಪ್ರತಿಕ್ರಿಯಿಸಿ, ರೈತರ ಅಭಿವೃದ್ಧಿ ನಮ್ಮ ಸರ್ಕಾರದ ಪ್ರಾಥಮಿಕ ಆಧ್ಯತೆಯಾಗಿದ್ದು, ಯಾವುದೇ ರೀತಿಯಲ್ಲೂ ಕೃಷಿಕರಿಗೆ ವಂಚನೆ ಆಗಬಾರದು. ಈ ನಿಟ್ಟಿನಲ್ಲಿ ಕೀಟನಾಶಕ ಕಂಪನಿಗಳ ಮೋಸವನ್ನು ತಪ್ಪಿಸಲು ಈ ಮಸೂದೆಯನ್ನು ಮಂಡಿಸಲಾಗುತ್ತಿದೆ. ಕೃಷಿಕರಿಗೆ ಕೀಟನಾಶಕಗಳ ಬಲ ಮತ್ತು ದೌರ್ಬಲ್ಯಗಳ ಬಗ್ಗೆ ವಿವರ ನೀಡಿ ಅದರ ಅಪಾಯದ ಕುರಿತು ಮಾಹಿತಿ ನೀಡಲಾಗುತ್ತದೆ. ಅಷ್ಟೇ ಅಲ್ಲದೇ ಕೀಟನಾಶಕಕ್ಕೆ ಪರ್ಯಾಯ ಯಾವುದು ಎಂಬ ಮಾಹಿತಿಯೂ ಸಾರ್ವಜನಿಕವಾಗಿ ಡಿಜಿಟಲ್ ಮಾದರಿಯಲ್ಲಿ ಎಲ್ಲ ಭಾಷೆಗಳಲ್ಲಿ ಲಭ್ಯವಿರುತ್ತದೆ. ಇದನ್ನು ನೋಡಿಕೊಂಡು ರೈತರು ತಮ್ಮ ಬೆಳೆಗೆ ಯಾವ ಕೀಟನಾಶಕ ಉತ್ತಮ ಎಂಬ ನಿರ್ಧಾರಕ್ಕೆ ಬರಬಹುದು ಎಂದು ಅವರು ತಿಳಿಸಿದರು.

 

ರೈತರಿಗೆ ಮೋಸ ಮಾಡುವ ಕಂಪನಿಗಳಿಗೆ ದಂಡ ವಿಧಿಸುವುದು ಈ ಮಸೂದೆಯ ವಿಶೇಷ ಅಂಶವಾಗಿದೆ. ತಯಾರಕರು ಮತ್ತು ಡೀಲರ್ ಗಳಿಂದ ದಂಡವನ್ನು ಸಂಗ್ರಹಿಸಿ ಕೇಂದ್ರೀಯ ನಿಧಿಯ ಮೂಲಕ ರೈತರಿಗೆ ಪರಿಹಾರ ನೀಡಲಾಗುವುದು. ಕೀಟನಾಶಕಗಳ ಬಲ ಮತ್ತು ದೌರ್ಬಲ್ಯಗಳ ವಿವರವನ್ನು ಕೃಷಿಕರು ಡೀಲರ್ ಬಳಿಯಿಂದ ಪಡೆಯಬಹುದು ಎಂದು ಅವರು ವಿವರಿಸಿದರು.

Vishwa News 24

Recent Posts

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

2 days ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

2 days ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

2 days ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

2 days ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

2 days ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

2 days ago