ಬೆಂಗಳೂರು: ರಾಜ್ಯದಲ್ಲಿ ಕಂದಾಯ ಪಾವತಿಸದ ಕಾರಣಕ್ಕೆ ಸರ್ಕಾರಿ ಪಡ, ಬೀಳು ಎಂದು ದಾಖಲಿಸಿರುವ ರೈತರ ಜಮೀನುಗಳನ್ನು ಸಕ್ರಮಗೊಳಿಸಲು ಮತ್ತೊಮ್ಮೆ ಅರ್ಜಿ ಆಹ್ವಾನಿಸಲಾಗುತ್ತಿದೆ. ಈ ಮೂಲಕ ಸರ್ಕಾರಿ ಜಮೀನು ಮಾಡುತ್ತಿದ್ದು, ಸಕ್ರಮಕ್ಕೆ ನಿರೀಕ್ಷೆಯಲ್ಲಿದ್ದಂತ ರೈತರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ.
ಈ ಕುರಿತಂತೆ ವಿಧಾನಸಭೆಯಲ್ಲಿ ಕಾನೂನು ಸಚಿವ ಜೆಸಿ ಮಾಧುಸ್ವಾಮಿ, ಕಾಂಗ್ರೆಸ್ ಸದಸ್ಯ ಡಾ.ಯತೀಂದ್ರ ಸಿದ್ಧರಾಮಯ್ಯ ಕೇಳಿದಂತ ಪ್ರಶ್ನೆಗೆ ಉತ್ತರಿಸಿದ್ದು, ಕಂದಾಯ ಪಾವತಿಸದ ಕಾರಣಕ್ಕೆ ಸರ್ಕಾರಿ ಪಡ, ಬೀಳು ಎಂದು ದಾಖಲಿಸಿರುವ ರೈತರ ಜಮೀನುಗಳನ್ನು ಸಕ್ರಮಗೊಳಿಸಲು ಮತ್ತೊಮ್ಮೆ ಅರ್ಜಿ ಆಹ್ವಾನಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ಪರಿಶೀಲಿಸಲಾಗುವುದು ಎಂದರು.
ರಾಜ್ಯದಲ್ಲಿ ಕಂದಾಯ ಪಾವತಿಸದ ಕಾರಣ ಪಹಣಿಗಳಲ್ಲಿ ಬೀಳು ಎಂದು ದಾಖಲು ಮಾಡಿದ್ದ ರೈತರ ಜಮೀನುಗಳನ್ನು ಸಕ್ರಮಗೊಳಿಸಲು ಅರ್ಜಿ ಕರೆದಿದ್ದ ಅವಧಿಯಲ್ಲಿ, ಸಾಕಷ್ಟು ರೈತರಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ. ಹಾಗಾಗೀ ಪುನಹ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕೆಂದು ಕಾಂಗ್ರೆಸ್ ಸದಸ್ಯ ಡಾ.ಯತೀಂದ್ರ ಸಿದ್ಧರಾಮಯ್ಯ ಸರ್ಕಾರದ ಗಮನ ಸೆಳೆದರು.
ಇದಕ್ಕೆ ಉತ್ತರಿಸಿದಂತ ಸಚಿವ ಮಾಧುಸ್ವಾಮಿ, ಸಕ್ರಮಗೊಳಿಸಲು 2014ರಲ್ಲಿ ಅರ್ಜಿ ಕರೆಯಲಾಗಿದ್ದು. ಜಿಲ್ಲಾಧಿಕಾರಿಗಳು, ಈಗ ಅರ್ಜಿ ಪರಿಶೀಲಿಸಿ ಇತ್ಯರ್ಥಪಡಿಸುತ್ತಾ ಬಂದಿದ್ದಾರೆ. ರೈತರ ಅನುಕೂಲಕ್ಕಾಗಿ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…