ಮೈಸೂರು(Vishwanews24):ರಾಜ್ಯದಲ್ಲಿ ಭೀಕರ ಬರಗಾಲ ತಾಂಡವಾಡುತ್ತಿದೆ. ಇದರ ಜೊತೆಗೆ ಕುಡಿಯುವ ನೀರಿಗಾಗಿ ಹಾಹಾಕಾರ ಆಗುವ ಸಾಧ್ಯತೆ ಇದೆ. ಹೀಗಿರುವಾಗ ರೈತರು ಮುಂದಿನ ಭವಿಷ್ಯದ ಬಗ್ಗೆ ಯೋಚನೆ ಮಾಡುವ ಪರಿಸ್ಥಿತಿ ಒದಗಿ ಬಂದಿದೆ. ಹೀಗಾಗಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಕೊಡುತ್ತಿದ್ದ ಹಣ ಈಗಿನ ಸರ್ಕಾರ ನಿಲ್ಲಿಸಿರುವುದು ಖಂಡನೀಯ. ಕೂಡಲೇ ಈ ಯೋಜನೆ ಮರು ಜಾರಿ ಮಾಡಬೇಕು ಎಂದು ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.
ಸುತ್ತೂರು ಜಾತ್ರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಿ.ಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ಪ್ರತಿ ರೈತರಿಗೆ ಕೇಂದ್ರ ಸರ್ಕಾರ 6 ಸಾವಿರ ನೀಡಿದರೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ 4 ಸಾವಿರ ಸೇರಿಸಿ ಒಟ್ಟು 10 ಸಾವಿರ ಕೊಡುತ್ತಿತ್ತು. ಇಂದಿನ ರಾಜ್ಯ ಸರ್ಕಾರ ಅದನ್ನು ನಿಲ್ಲಿಸಿ ಬಿಟ್ಟಿದೆ. ರೈತರಿಗೆ ಸಂಕಷ್ಟದ ಸಂದರ್ಭದಲ್ಲಿ ಪ್ರೋತ್ಸಾಹ ಧನ ನೀಡಬೇಕು’ ಎಂದು ಒತ್ತಾಯಿಸಿದರು.
ಮಠ ಮಾನ್ಯಗಳು ಗ್ರಾಮೀಣ ಭಾಗದ ಜನರಿಗೆ ನೀಡುತ್ತಿರುವ ಶಿಕ್ಷಣ, ಅನ್ನ,ಆರೋಗ್ಯ ನೀಡುತ್ತ ಸರ್ಕಾರದ ಮೇಲಿನ ಜವಾಬ್ದಾರಿಯನ್ನ ಕಡಿಮೆ ಮಾಡುತ್ತಿವೆ.ನಾನು ಮುಖ್ಯಮಂತ್ರಿಯಾಗಿದ್ದಾಗ ಮಠ ಮಾನ್ಯಗಳಿಗೆ ಸಾಕಷ್ಟು ಅನುದಾನ ನೀಡಿದ್ದೆ. ಪ್ರಧಾನಿ ಮೋದಿ ಅವರು ಒಂದು ಮಹತ್ತರ ನಿರ್ಧಾರ ಮಾಡಿದ್ದಾರೆ. 1 ಕೆ.ಜಿ ಅಕ್ಕಿಗೆ 29 ರೂ ನಂತೆ ಜನ ಸಾಮಾನ್ಯರಿಗೆ ನೀಡಲು ಮುಂದಾಗಿದ್ದಾರೆ. ಇಂದು 1ಕೆಜಿ ಅಕ್ಕಿಗೆ 50 ರಿಂದ 60 ರೂ ಆಗಿದೆ. ಜನರಿಗೆ ಕಡಿಮೆ ಬೆಲೆಯಲ್ಲಿ ಭಾರತ್ ರೈಸ್ ಎಂಬ ಬ್ರಾಂಡ್ ಅಡಿ ನೀಡಲು ನಿರ್ಧಾರ ಮಾಡಿದ್ದಾರೆ ಇದು ಒಳ್ಳೆಯ ಯೋಜನೆ ಎಂದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…