ಮೈಸೂರು(Vishwanews24):ರಾಜ್ಯದಲ್ಲಿ ಭೀಕರ ಬರಗಾಲ ತಾಂಡವಾಡುತ್ತಿದೆ. ಇದರ ಜೊತೆಗೆ ಕುಡಿಯುವ ನೀರಿಗಾಗಿ ಹಾಹಾಕಾರ ಆಗುವ ಸಾಧ್ಯತೆ ಇದೆ. ಹೀಗಿರುವಾಗ ರೈತರು ಮುಂದಿನ ಭವಿಷ್ಯದ ಬಗ್ಗೆ ಯೋಚನೆ ಮಾಡುವ ಪರಿಸ್ಥಿತಿ ಒದಗಿ ಬಂದಿದೆ. ಹೀಗಾಗಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಕೊಡುತ್ತಿದ್ದ ಹಣ ಈಗಿನ ಸರ್ಕಾರ ನಿಲ್ಲಿಸಿರುವುದು ಖಂಡನೀಯ. ಕೂಡಲೇ ಈ ಯೋಜನೆ ಮರು ಜಾರಿ ಮಾಡಬೇಕು ಎಂದು ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.
ಸುತ್ತೂರು ಜಾತ್ರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಿ.ಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ಪ್ರತಿ ರೈತರಿಗೆ ಕೇಂದ್ರ ಸರ್ಕಾರ 6 ಸಾವಿರ ನೀಡಿದರೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ 4 ಸಾವಿರ ಸೇರಿಸಿ ಒಟ್ಟು 10 ಸಾವಿರ ಕೊಡುತ್ತಿತ್ತು. ಇಂದಿನ ರಾಜ್ಯ ಸರ್ಕಾರ ಅದನ್ನು ನಿಲ್ಲಿಸಿ ಬಿಟ್ಟಿದೆ. ರೈತರಿಗೆ ಸಂಕಷ್ಟದ ಸಂದರ್ಭದಲ್ಲಿ ಪ್ರೋತ್ಸಾಹ ಧನ ನೀಡಬೇಕು’ ಎಂದು ಒತ್ತಾಯಿಸಿದರು.
ಮಠ ಮಾನ್ಯಗಳು ಗ್ರಾಮೀಣ ಭಾಗದ ಜನರಿಗೆ ನೀಡುತ್ತಿರುವ ಶಿಕ್ಷಣ, ಅನ್ನ,ಆರೋಗ್ಯ ನೀಡುತ್ತ ಸರ್ಕಾರದ ಮೇಲಿನ ಜವಾಬ್ದಾರಿಯನ್ನ ಕಡಿಮೆ ಮಾಡುತ್ತಿವೆ.ನಾನು ಮುಖ್ಯಮಂತ್ರಿಯಾಗಿದ್ದಾಗ ಮಠ ಮಾನ್ಯಗಳಿಗೆ ಸಾಕಷ್ಟು ಅನುದಾನ ನೀಡಿದ್ದೆ. ಪ್ರಧಾನಿ ಮೋದಿ ಅವರು ಒಂದು ಮಹತ್ತರ ನಿರ್ಧಾರ ಮಾಡಿದ್ದಾರೆ. 1 ಕೆ.ಜಿ ಅಕ್ಕಿಗೆ 29 ರೂ ನಂತೆ ಜನ ಸಾಮಾನ್ಯರಿಗೆ ನೀಡಲು ಮುಂದಾಗಿದ್ದಾರೆ. ಇಂದು 1ಕೆಜಿ ಅಕ್ಕಿಗೆ 50 ರಿಂದ 60 ರೂ ಆಗಿದೆ. ಜನರಿಗೆ ಕಡಿಮೆ ಬೆಲೆಯಲ್ಲಿ ಭಾರತ್ ರೈಸ್ ಎಂಬ ಬ್ರಾಂಡ್ ಅಡಿ ನೀಡಲು ನಿರ್ಧಾರ ಮಾಡಿದ್ದಾರೆ ಇದು ಒಳ್ಳೆಯ ಯೋಜನೆ ಎಂದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…