ಮಂಡ್ಯ,: ರಾಜ್ಯದ ರೈತ ವರ್ಗಕ್ಕೆ ಆತ್ಮಸ್ಥೈರ್ಯ ನೀಡುವ ಉದ್ದೇಶದಿಂದ ಸಿ.ಎಂ ಎಚ್.ಡಿ ಕುಮಾರಸ್ವಾಮಿ ಸ್ವತಃ ತಾವೇ ಗದ್ದೆಗಿಳಿದು ನಾಟಿ ಕಾರ್ಯ ಮಾಡಿ ಜನರ ಮನ ಗೆದ್ದಿದ್ದಾರೆ.
ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ರೈತಾಪಿ ವರ್ಗಕ್ಕೆ ಆತ್ಮಸ್ಥೈರ್ಯ ನೀಡುವ ಉದ್ದೇಶದಿಂದ ಸಿಎಂ ಎಚ್. ಡಿ ಕುಮಾರಸ್ವಾಮಿ ಈ ಕಾರ್ಯ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರದ ಐದೂವರೆ ಎಕರೆ ಜಮೀನಿನಲ್ಲಿ 100 ಗಂಡಸರು ಹಾಗೂ 50 ಹೆಂಗಸರು ಭತ್ತ ನಾಟಿ ಮಾಡುವ ಮೂಲಕ ಸಿಎಂಗೆ ಸಾಥ್ ನೀಡಿದ್ದಾರೆ.
ಸಿಎಂ ಎಚ್.ಡಿ ಕುಮಾರಸ್ವಾಮಿ ಸ್ವತಃ ತಾವೇ ಗದ್ದೆಗಿಳಿದು ನಾಟಿ ಕಾರ್ಯ ಮಾಡುವ ಮೂಲಕ ತಾವು ಮಣ್ಣಿನ ಮಗ ಎಂಬುದನ್ನು ಸಾಬೀತು ಮಾಡಿದ್ದಾರೆ. ಸುಮಾರು ಎರಡು ಗಂಟೆಗಳ ಕಾಲ ಮುಖ್ಯಮಂತ್ರಿ ಸ್ಥಾನವನ್ನು ಬದಿಗಿಟ್ಟು ಗದ್ದೆಗಿಳಿದು ಭತ್ತನಾಟಿ ಮಾಡಿರುವ ಸಿಎಂ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
ಈ ವೇಳೆ ಮಾತನಾಡಿದ ಅವರು, ಈ ಬಾರಿ ತಾಯಿ ಚಾಮುಂಡಿ ನಮ್ಮ ಮೇಲೆ ದಯೆ ತೋರಿದ್ದಾರೆ. ಯಾವುದೇ ಕಾರಣಕ್ಕೂ ರೈತರು ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಗೌರಿ-ಗಣೇಶ ಹಬ್ಬದೊಳಗೆ ರೈತರಿಗೆ ಸಿಹಿ ಸುದ್ದಿ ನೀಡುತ್ತೇನೆ. ಕೇವಲ 37 ಕ್ಷೇತ್ರಗಳಲ್ಲಿ ಗೆದ್ದಿದ್ದರೂ ಸಹ ನಾನು ಸಿಎಂ ಆಗಿದ್ದೇನೆ. ರೈತರನ್ನು ನಾನು ಕೈ ಬಿಡುವುದಿಲ್ಲ. ನನಗೆ ನಗರ ಬೇರೆ ಅಲ್ಲ, ಗ್ರಾಮೀಣ ಪ್ರದೇಶ ಬೇರೆ ಅಲ್ಲ. ರೈತರಿಗೆ ಮುಂದಿನ ದಿನಗಳಲ್ಲಿ ಸಿಹಿ ಸುದ್ದಿ ನೀಡುತ್ತೇನೆ ಎಂದು ಭರವಸೆ ನೀಡಿದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…