ಬೆಂಗಳೂರು: ಸಾಲ ಮನ್ನಾ ವಿಷಯದಲ್ಲಿ ಪ್ರತಿಪಕ್ಷ ಹಾಗೂ ಮಾಧ್ಯಮಗಳು ತಪ್ಪು ಮಾಹಿತಿ ನೀಡಿ ರೈತರನ್ನು ಆತ್ಮಹತ್ಯೆಗೆ ಪ್ರೇರೆಪಿಸಬೇಡಿ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಕೃಷ್ಣಾದಲ್ಲಿ ಜನತಾ ದರ್ಶನ ನಡೆಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು 34 ಸಾವಿರ ಕೋಟಿ ಸಾಲ ಮನ್ನಾ ಮಾಡಿರುವುದು ದರೋಡೆಕೋರರಿಗಲ್ಲ. ನನ್ನ ಮನೆಗೂ ತೆಗೆದುಕೊಂಡು ಹೋಗುತ್ತಿಲ್ಲ. ಬಿಜೆಪಿಯವರಿಗೆ ಮಾತನಾಡಲು ನಾಲಿಗೆ ಮೇಲೆ ಹಿಡಿತ ಇರಬೇಕು ಎಂದು ಖಾರವಾಗಿ
ಮಾತನಾಡಿದ್ದಾರೆ.
ಬಜೆಟ್ನಲ್ಲಿ ಉತ್ತರ ಕರ್ನಾಟಕ, ಹಳೆ ಮೈಸೂರು ಎಂದು ಯಾವುದೇ ತಾರತಮ್ಯ ಮಾಡಿಲ್ಲ. ನಾನು ಒಂದು ಜಾತಿಗೆ ಸೇರಿದ ಮುಖ್ಯಮಂತ್ರಿಯಲ್ಲ. ನಾನು ಅನ್ನದಾತರ ಮುಖ್ಯಮಂತ್ರಿ.ಮಾಧ್ಯಮಗಳು ಸರ್ಕಾರವನ್ನು ಟೀಕೆ ಮಾಡಲಿ.ಯಾವ ರೈತರೂ ಆತ್ಮಹತ್ಯೆ ಮಾಡಿಕೊಳ್ಳುವುದು ಬೇಡ ಎಂದು ಮನವಿ ಮಾಡಿದರು.
ನಾನು ವೈಯಕ್ತಿಕ ಆಸೆ ಆಕಾಂಕ್ಷೆ ಇಟ್ಟುಕೊಂಡು ಯೋಜನೆ ರೂಪಿಸುತ್ತಿಲ್ಲ. ನಾನು ಎಲ್ಲಿಯೂ ಓಡಿ ಹೋಗುವುದಿಲ್ಲ. ಸಾಲ ಮನ್ನಾ ಬಗ್ಗೆ ಸದನದಲ್ಲಿ ಚರ್ಚಿಸಲು ಸಿದ್ದವಿದ್ದೇನೆ. ಇಂಧನ ದರ ಏರಿಕೆಯ ಬಗ್ಗೆ ಸಂಪುಟದಲ್ಲಿಯೇ ಚರ್ಚಿಸಿ ತೀರ್ಮಾನ ಮಾಡಲಾಗಿದೆ. ರೈತರಿಗಾಗಿ ಹತ್ತು ಪೈಸೆ ಕೊಡಲು ಜನರಿಗೆ ಕಷ್ಟವೇ ಎಂದು ಪ್ರಶ್ನಿಸಿದರು.
ಸಿದ್ದರಾಮಯ್ಯ ಸರ್ಕಾರದ ಯಾವ ಯೋಜನೆಗಳನ್ನೂ ನಿಲ್ಲಿಸುವುದಿಲ್ಲ. ಬಿಜೆಪಿಯವರು ನನ್ನ ಹೆಸರು ಕೆಡಿಸಬೇಕೆಂದು ಅಂದುಕೊಂಡಿದ್ದರೆ ಅದು ಸಾಧ್ಯವಿಲ್ಲ ಎಂದು ಹೇಳಿದರು
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…