Featured

ರೈತರ ಪಂಪ್‍ಸೇಟ್‍ಗೆ ಟ್ರಾನ್ಸ್​ಫಾರ್ಮರ್ ಗಳ ಬದಲಾವಣೆಯನ್ನು 24 ಗಂಟೆಯೊಳಗೆ ಮಾಡಲೇಬೇಕು: ಸುನಿಲ್ ಕುಮಾರ್ -Vishwanews24

ರೈತರ ಪಂಪ್‍ಸೇಟ್‍ಗೆ ಟ್ರಾನ್ಸ್​ಫಾರ್ಮರ್ ಗಳ ಬದಲಾವಣೆಯನ್ನು 24 ಗಂಟೆಯೊಳಗೆ ಮಾಡಲೇಬೇಕು: ಸುನಿಲ್ ಕುಮಾರ್ -Vishwanews24

ಕಲಬುರಗಿ: ಗ್ರಾಮೀಣ ಭಾಗದಲ್ಲಿ ದುರಸ್ತಿಗೊಳಗಾದ ವಿದ್ಯುತ್ ಟ್ರಾನ್ಸ್​ಫಾರ್ಮರ್(ಪರಿವರ್ತಕ)ಗಳ ಬದಲಾವಣೆಯನ್ನು 24 ಗಂಟೆಯೊಳಗೆ ಮಾಡಲೇಬೇಕು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಜೆಸ್ಕಾಂ ಕಚೇರಿಯ ಸಮ್ಮೇಳನ ಸಭಾಂಗಣದಲ್ಲಿ ಜೆಸ್ಕಾಂ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಯಾವುದೇ ಕಾರಣವಿಲ್ಲದೇ ಟ್ರಾನ್ಸ್​ಫಾರ್ಮರ್ ಬದಲಾವಣೆ ಪ್ರಕ್ರಿಯೆಯಲ್ಲಿ ವಿಳಂಬ ಮಾಡಬಾರದು ಎಂದು ತಾಕೀತು ಮಾಡಿದರು. ಟ್ರಾನ್ಸ್​ಫಾರ್ಮರ್ ಬದಲಾವಣೆ ಸಂಬಂಧ ರೈತರಲ್ಲಿ ಕೆಲ ಸಿಬ್ಬಂದಿ ಹಣದ ಬೇಡಿಕೆ ಇಡುತ್ತಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಮುಂದಿನ ದಿನಗಳಲ್ಲಿ ಯಾರಾದರೂ ಇಂತಹ ಬೇಡಿಕೆ ಇಟ್ಟಲ್ಲಿ, ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿ, ಇಂತಹ ಪ್ರಕರಣಗಳ ಕೈಬಿಡುವಂತೆ ಯಾರಾದರೂ ಪ್ರಭಾವಿ ವ್ಯಕ್ತಿಗಳ ಮೂಲಕ ನನ್ನ ಮೇಲೆ ಒತ್ತಡ ಹೇರಲು ಮುಂದಾದರೆ ನಾನು ಯಾವುದಕ್ಕೂ ಜಗ್ಗುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಗಂಗಾ ಕಲ್ಯಾಣ ಯೋಜನೆಯಡಿ ನೋಂದಾಯಿತ ಫಲಾನುಭವಿ ರೈತರ ಪಂಪ್‍ಸೇಟ್‍ಗಳಿಗೆ ಯಾವುದೇ ವಿಳಂಬವಿಲ್ಲದೇ 30 ದಿನಗಳಲ್ಲಿ ವಿದ್ಯುತ್ ಪೂರೈಸಬೇಕು. ಇತ್ತೀಚೆಗೆ ತೋಟದ ಮನೆಗಳು ಹೆಚ್ಚಾಗುತ್ತಿದ್ದು, ಆದರೆ ಈ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವುದು ಸವಾಲಾಗಿದೆ. ಪುಟ್ಟ-ಪುಟ್ಟ ಮಕ್ಕಳು, ಜಾನುವಾರುಗಳು ಇಂತಹ ಮನೆಗಳಲಿದ್ದು, ರಾತ್ರಿ ವೇಳೆ ಕತ್ತಲೆಯಲ್ಲಿ ದಿನದೂಡಬೇಕಾಗಿದೆ. ಇಂತಹ ತೋಟದ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ವೈಜ್ಞಾನಿಕವಾಗಿ ಕ್ರಮಕೈಗೊಳ್ಳಬೇಕು. ಮೊದಲು ಜಿಲ್ಲೆಯಲ್ಲಿ ತೋಟದ ಮನೆಗಳು ಎಷ್ಟು ಇವೆ ಎಂಬುವುದನ್ನು ಸಮೀಕ್ಷೆ ಮಾಡಬೇಕು. ಬಳಿಕ ಯಾವ ವಿಧಾನದ ಮೂಲಕ ಈ ತೋಟದ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬಹುದು ಎಂಬುದರ ಬಗ್ಗೆ ಮೂರು ತಿಂಗಳಲ್ಲಿ ಯೋಜನೆ ರೂಪಿಸುವಂತೆ ಜೆಸ್ಕಾಂ ಅಧಿಕಾರಿಗಳಿಗೆ ಸಚಿವರು ಸಲಹೆ ನೀಡಿದರು.

ನಿರಂತರವಾಗಿ 7 ತಾಸು ರೈತರ ಪಂಪ್‍ಸೇಟ್‍ಗಳಿಗೆ ವಿದ್ಯುತ್ ಪೂರೈಕೆಯಾಗಬೇಕು. ವಿದ್ಯುತ್ ಪೂರೈಕೆ ಕೇವಲ ದಾಖಲೆಗಳಲ್ಲಿರಬಾರದು, ಅದು ಕಾರ್ಯರೂಪದಲ್ಲಿರಬೇಕು. ಈ ಸಂಬಂಧ ಅಧಿವೇಶನ ಸಂದರ್ಭದಲ್ಲಿ ಎಲ್ಲಾ ಶಾಸಕರ ಸಭೆ ಕರೆದು ಚರ್ಚಿಸುವುದಾಗಿ ತಿಳಿಸಿದ ಅವರು, ಸಭೆಯಲ್ಲಿ ಶಾಸಕರು ಜಿಲ್ಲೆಯ ವಿದ್ಯುತ್ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದರೆ, ಅಂತಹ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವುದಾಗಿ ತಿಳಿಸಿದರು. ಜೆಸ್ಕಾಂ ಗ್ರಾಹಕರ ಸಹಾಯವಾಣಿ-1912ಗೆ ಬರುವ ದೂರು ಕರೆಗಳಿಗೆ ಪೂರಕವಾಗಿ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಕೇವಲ ತಾಂತ್ರಿಕ ಕಾರಣ ನೀಡಿ, ಗ್ರಾಹಕರ ಸಮಸ್ಯೆಗಳನ್ನು ಬಗೆಹರಿಸುತ್ತಿಲ್ಲ ಎಂದು ಖಾರವಾಗಿ ಹೇಳಿದ ಸಚಿವರು, ಈ ಸಂಬಂಧ ತಮಗೆ ನಿತ್ಯ ಕರೆಗಳು ಬರುತ್ತಿದ್ದು, ಮುಂದಿನ ದಿನಗಳಲ್ಲಿ ಇಂತಹ ಕರೆಗಳು ಬಾರದಂತೆ ನೋಡಿಕೊಳ್ಳಿ ಎಂದರು.

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

2 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

2 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

2 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

3 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

3 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

3 hours ago