Featured

ರೈತರ ಪ್ರತಿಭಟನೆ ಬಗ್ಗೆ ಚರ್ಚೆಗೆ ಆಗ್ರಹ : ಪ್ರತಿಪಕ್ಷಗಳ ಪಕ್ಷಗಳಾದ ಕಾಂಗ್ರೆಸ್‌, ಟಿಎಂಸಿ ಮತ್ತು ಡಿಎಂಕೆ ಸದಸ್ಯರ ಸಭಾತ್ಯಾಗ -Vishwanews24

ರೈತರ ಪ್ರತಿಭಟನೆ ಬಗ್ಗೆ ಚರ್ಚೆಗೆ ಆಗ್ರಹ : ಪ್ರತಿಪಕ್ಷಗಳ ಪಕ್ಷಗಳಾದ ಕಾಂಗ್ರೆಸ್‌, ಟಿಎಂಸಿ ಮತ್ತು ಡಿಎಂಕೆ ಸದಸ್ಯರ ಸಭಾತ್ಯಾಗ -Vishwanews24

ನವದೆಹಲಿ: ವಿರೋಧ ಪಕ್ಷಗಳಾದ ಕಾಂಗ್ರೆಸ್‌, ಟಿಎಂಸಿ ಮತ್ತು ಡಿಎಂಕೆ ಪಕ್ಷಗಳ ಸದಸ್ಯರು ಮಂಗಳವಾರ ರಾಜ್ಯಸಭೆ ಕಲಾಪ ಬಹಿಷ್ಕರಿಸಿ ಸಭಾತ್ಯಾಗ ಮಾಡಿದರು.

ರಾಜ್ಯಸಭೆಯ ಇಂದಿನ ಕಾರ್ಯಕ್ರಮಪಟ್ಟಿಯನ್ನು ರದ್ದುಗೊಳಿಸಿ, ಕೃಷಿ ಕಾಯ್ದೆಗಳ ವಿರುದ್ಧ ಕಳೆದ ಎರಡು ತಿಂಗಳಿನಿಂದ ರೈತರು ನಡೆಸುತ್ತಿರುವ ಪ್ರತಿಭಟನೆ ಕುರಿತಾಗಿ ಚರ್ಚೆ ನಡೆಸಲು ಅವಕಾಶ ನೀಡಬೇಕು ಎಂದು ವಿರೋಧ ಪಕ್ಷಗಳು ಒತ್ತಾಯಿಸಿವೆ. ಆದರೆ ಸಭಾಧ್ಯಕ್ಷರಾದ ಎಂ.ವೆಂಕಯ್ಯನಾಯ್ಡು ಅವರು ಇದಕ್ಕೆ ಅನುಮತಿ ನೀಡಲಿಲ್ಲ.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌, ಟಿಎಂಸಿ ಮತ್ತು ಡಿಎಂಕೆ ಪಕ್ಷಗಳ ಸದಸ್ಯರು ಕಲಾಪದಿಂದ ಹೊರ ನಡೆದರು.

ಬೆಳ್ತಂಗಡಿ : ವಯೋ ವೃದ್ಧ ತಾಯಿಯನ್ನು ರಸ್ತೆಯಲ್ಲೇ ಬಿಟ್ಟು ಹೋಗಿರುವ ಮನೆ ಮಂದಿ -Vishwanews24

267ರ ನಿಯಮದ ಪ್ರಕಾರ ದಿನದ ವ್ಯವಹಾರಗಳನ್ನು ರದ್ದುಗೊಳಿಸಿ, ರೈತರ ಪ್ರತಿಭಟನೆಯ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡಬೇಕು ಎಂದು ವಿರೋಧ ಪಕ್ಷಗಳು ನೋಟಿಸ್‌ ನೀಡಿದ್ದವು.

‘ನನಗೆ ಹಲವು ವಿರೋಧ ಪಕ್ಷಗಳ ನಾಯಕರಿಂದ ಈ ಸಂಬಂಧ ನೋಟಿಸ್‌ ಸಿಕ್ಕಿದೆ. ಆದರೆ ಸಂಸತ್ತಿನ ಉಭಯ ಸದನಗಳನ್ನುದ್ಧೇಶಿಸಿ ರಾಷ್ಟ್ರಪತಿಗಳು ಮಾಡಿದ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆ ವೇಳೆ ಈ ವಿಷಯವನ್ನು ಪ್ರಸ್ತಾಪಿಸಬಹುದು’ ಎಂದು ಸಭಾಧ್ಯಕ್ಷರು ಹೇಳಿದರು.

‘ಲೋಕಸಭೆಯಲ್ಲಿ ನಿಲುವಳಿಯ ಕುರಿತಂತೆ ಮಂಗಳವಾರ ಚರ್ಚೆ ಪ್ರಾರಂಭವಾಗಲಿದೆ. ರಾಜ್ಯಸಭೆಯಲ್ಲಿ ಬುಧವಾರ ಈ ಸಂಬಂಧ ಚರ್ಚೆ ನಡೆಸಲಿದೆ’ ಎಂದು ಅವರು ಹೇಳಿದರು.

‘ಕೃಷಿ ಕಾಯ್ದೆಗಳ ಕುರಿತಂತೆ ರೈತರು ಮತ್ತು ಸರ್ಕಾರದ ನಡುವೆ ಹಲವು ಸುತ್ತಿನ ಚರ್ಚೆಗಳು ನಡೆದಿವೆ. ಇದು ಬಹಳ ಮಹತ್ವಪೂರ್ಣ ವಿಷಯ. ಹಾಗಾಗಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆ ವೇಳೆ ಈ ವಿಷಯವನ್ನು ಪ್ರಸ್ತಾಪಿಸಬಹುದು’ ಎಂದು ವೆಂಕಯ್ಯನಾಯ್ಡು ಅವರು ತಿಳಿಸಿದರು. ಪ್ರತಿಪಕ್ಷಗಳ ಸದಸ್ಯರು ಇದನ್ನು ಒಪ್ಪದೆ ಸಭಾತ್ಯಾಗ ಮಾಡಿದರು.

ವಿಧಾನಪರಿಷತ್‌ ಕಲಾಪದಲ್ಲಿ ಸದಸ್ಯರ ಮೊಬೈಲ್ ಬಳಕೆ ನಿಷೇಧ -Vishwanews24

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

16 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

19 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

20 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

20 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

20 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

20 hours ago