Featured

ರೈತರ ಪ್ರತಿಭಟನೆ ಬಗ್ಗೆ ಚರ್ಚೆಗೆ ಆಗ್ರಹ : ಪ್ರತಿಪಕ್ಷಗಳ ಪಕ್ಷಗಳಾದ ಕಾಂಗ್ರೆಸ್‌, ಟಿಎಂಸಿ ಮತ್ತು ಡಿಎಂಕೆ ಸದಸ್ಯರ ಸಭಾತ್ಯಾಗ -Vishwanews24

ರೈತರ ಪ್ರತಿಭಟನೆ ಬಗ್ಗೆ ಚರ್ಚೆಗೆ ಆಗ್ರಹ : ಪ್ರತಿಪಕ್ಷಗಳ ಪಕ್ಷಗಳಾದ ಕಾಂಗ್ರೆಸ್‌, ಟಿಎಂಸಿ ಮತ್ತು ಡಿಎಂಕೆ ಸದಸ್ಯರ ಸಭಾತ್ಯಾಗ -Vishwanews24

ನವದೆಹಲಿ: ವಿರೋಧ ಪಕ್ಷಗಳಾದ ಕಾಂಗ್ರೆಸ್‌, ಟಿಎಂಸಿ ಮತ್ತು ಡಿಎಂಕೆ ಪಕ್ಷಗಳ ಸದಸ್ಯರು ಮಂಗಳವಾರ ರಾಜ್ಯಸಭೆ ಕಲಾಪ ಬಹಿಷ್ಕರಿಸಿ ಸಭಾತ್ಯಾಗ ಮಾಡಿದರು.

ರಾಜ್ಯಸಭೆಯ ಇಂದಿನ ಕಾರ್ಯಕ್ರಮಪಟ್ಟಿಯನ್ನು ರದ್ದುಗೊಳಿಸಿ, ಕೃಷಿ ಕಾಯ್ದೆಗಳ ವಿರುದ್ಧ ಕಳೆದ ಎರಡು ತಿಂಗಳಿನಿಂದ ರೈತರು ನಡೆಸುತ್ತಿರುವ ಪ್ರತಿಭಟನೆ ಕುರಿತಾಗಿ ಚರ್ಚೆ ನಡೆಸಲು ಅವಕಾಶ ನೀಡಬೇಕು ಎಂದು ವಿರೋಧ ಪಕ್ಷಗಳು ಒತ್ತಾಯಿಸಿವೆ. ಆದರೆ ಸಭಾಧ್ಯಕ್ಷರಾದ ಎಂ.ವೆಂಕಯ್ಯನಾಯ್ಡು ಅವರು ಇದಕ್ಕೆ ಅನುಮತಿ ನೀಡಲಿಲ್ಲ.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌, ಟಿಎಂಸಿ ಮತ್ತು ಡಿಎಂಕೆ ಪಕ್ಷಗಳ ಸದಸ್ಯರು ಕಲಾಪದಿಂದ ಹೊರ ನಡೆದರು.

ಬೆಳ್ತಂಗಡಿ : ವಯೋ ವೃದ್ಧ ತಾಯಿಯನ್ನು ರಸ್ತೆಯಲ್ಲೇ ಬಿಟ್ಟು ಹೋಗಿರುವ ಮನೆ ಮಂದಿ -Vishwanews24

267ರ ನಿಯಮದ ಪ್ರಕಾರ ದಿನದ ವ್ಯವಹಾರಗಳನ್ನು ರದ್ದುಗೊಳಿಸಿ, ರೈತರ ಪ್ರತಿಭಟನೆಯ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡಬೇಕು ಎಂದು ವಿರೋಧ ಪಕ್ಷಗಳು ನೋಟಿಸ್‌ ನೀಡಿದ್ದವು.

‘ನನಗೆ ಹಲವು ವಿರೋಧ ಪಕ್ಷಗಳ ನಾಯಕರಿಂದ ಈ ಸಂಬಂಧ ನೋಟಿಸ್‌ ಸಿಕ್ಕಿದೆ. ಆದರೆ ಸಂಸತ್ತಿನ ಉಭಯ ಸದನಗಳನ್ನುದ್ಧೇಶಿಸಿ ರಾಷ್ಟ್ರಪತಿಗಳು ಮಾಡಿದ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆ ವೇಳೆ ಈ ವಿಷಯವನ್ನು ಪ್ರಸ್ತಾಪಿಸಬಹುದು’ ಎಂದು ಸಭಾಧ್ಯಕ್ಷರು ಹೇಳಿದರು.

‘ಲೋಕಸಭೆಯಲ್ಲಿ ನಿಲುವಳಿಯ ಕುರಿತಂತೆ ಮಂಗಳವಾರ ಚರ್ಚೆ ಪ್ರಾರಂಭವಾಗಲಿದೆ. ರಾಜ್ಯಸಭೆಯಲ್ಲಿ ಬುಧವಾರ ಈ ಸಂಬಂಧ ಚರ್ಚೆ ನಡೆಸಲಿದೆ’ ಎಂದು ಅವರು ಹೇಳಿದರು.

‘ಕೃಷಿ ಕಾಯ್ದೆಗಳ ಕುರಿತಂತೆ ರೈತರು ಮತ್ತು ಸರ್ಕಾರದ ನಡುವೆ ಹಲವು ಸುತ್ತಿನ ಚರ್ಚೆಗಳು ನಡೆದಿವೆ. ಇದು ಬಹಳ ಮಹತ್ವಪೂರ್ಣ ವಿಷಯ. ಹಾಗಾಗಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆ ವೇಳೆ ಈ ವಿಷಯವನ್ನು ಪ್ರಸ್ತಾಪಿಸಬಹುದು’ ಎಂದು ವೆಂಕಯ್ಯನಾಯ್ಡು ಅವರು ತಿಳಿಸಿದರು. ಪ್ರತಿಪಕ್ಷಗಳ ಸದಸ್ಯರು ಇದನ್ನು ಒಪ್ಪದೆ ಸಭಾತ್ಯಾಗ ಮಾಡಿದರು.

ವಿಧಾನಪರಿಷತ್‌ ಕಲಾಪದಲ್ಲಿ ಸದಸ್ಯರ ಮೊಬೈಲ್ ಬಳಕೆ ನಿಷೇಧ -Vishwanews24

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

6 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

6 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

6 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

7 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

7 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

8 hours ago