Featured

ರೈತರ ಪ್ರತಿಭಟನೆ ಬಗ್ಗೆ ಚರ್ಚೆಗೆ ಆಗ್ರಹ : ಪ್ರತಿಪಕ್ಷಗಳ ಪಕ್ಷಗಳಾದ ಕಾಂಗ್ರೆಸ್‌, ಟಿಎಂಸಿ ಮತ್ತು ಡಿಎಂಕೆ ಸದಸ್ಯರ ಸಭಾತ್ಯಾಗ -Vishwanews24

ರೈತರ ಪ್ರತಿಭಟನೆ ಬಗ್ಗೆ ಚರ್ಚೆಗೆ ಆಗ್ರಹ : ಪ್ರತಿಪಕ್ಷಗಳ ಪಕ್ಷಗಳಾದ ಕಾಂಗ್ರೆಸ್‌, ಟಿಎಂಸಿ ಮತ್ತು ಡಿಎಂಕೆ ಸದಸ್ಯರ ಸಭಾತ್ಯಾಗ -Vishwanews24

ನವದೆಹಲಿ: ವಿರೋಧ ಪಕ್ಷಗಳಾದ ಕಾಂಗ್ರೆಸ್‌, ಟಿಎಂಸಿ ಮತ್ತು ಡಿಎಂಕೆ ಪಕ್ಷಗಳ ಸದಸ್ಯರು ಮಂಗಳವಾರ ರಾಜ್ಯಸಭೆ ಕಲಾಪ ಬಹಿಷ್ಕರಿಸಿ ಸಭಾತ್ಯಾಗ ಮಾಡಿದರು.

ರಾಜ್ಯಸಭೆಯ ಇಂದಿನ ಕಾರ್ಯಕ್ರಮಪಟ್ಟಿಯನ್ನು ರದ್ದುಗೊಳಿಸಿ, ಕೃಷಿ ಕಾಯ್ದೆಗಳ ವಿರುದ್ಧ ಕಳೆದ ಎರಡು ತಿಂಗಳಿನಿಂದ ರೈತರು ನಡೆಸುತ್ತಿರುವ ಪ್ರತಿಭಟನೆ ಕುರಿತಾಗಿ ಚರ್ಚೆ ನಡೆಸಲು ಅವಕಾಶ ನೀಡಬೇಕು ಎಂದು ವಿರೋಧ ಪಕ್ಷಗಳು ಒತ್ತಾಯಿಸಿವೆ. ಆದರೆ ಸಭಾಧ್ಯಕ್ಷರಾದ ಎಂ.ವೆಂಕಯ್ಯನಾಯ್ಡು ಅವರು ಇದಕ್ಕೆ ಅನುಮತಿ ನೀಡಲಿಲ್ಲ.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌, ಟಿಎಂಸಿ ಮತ್ತು ಡಿಎಂಕೆ ಪಕ್ಷಗಳ ಸದಸ್ಯರು ಕಲಾಪದಿಂದ ಹೊರ ನಡೆದರು.

ಬೆಳ್ತಂಗಡಿ : ವಯೋ ವೃದ್ಧ ತಾಯಿಯನ್ನು ರಸ್ತೆಯಲ್ಲೇ ಬಿಟ್ಟು ಹೋಗಿರುವ ಮನೆ ಮಂದಿ -Vishwanews24

267ರ ನಿಯಮದ ಪ್ರಕಾರ ದಿನದ ವ್ಯವಹಾರಗಳನ್ನು ರದ್ದುಗೊಳಿಸಿ, ರೈತರ ಪ್ರತಿಭಟನೆಯ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡಬೇಕು ಎಂದು ವಿರೋಧ ಪಕ್ಷಗಳು ನೋಟಿಸ್‌ ನೀಡಿದ್ದವು.

‘ನನಗೆ ಹಲವು ವಿರೋಧ ಪಕ್ಷಗಳ ನಾಯಕರಿಂದ ಈ ಸಂಬಂಧ ನೋಟಿಸ್‌ ಸಿಕ್ಕಿದೆ. ಆದರೆ ಸಂಸತ್ತಿನ ಉಭಯ ಸದನಗಳನ್ನುದ್ಧೇಶಿಸಿ ರಾಷ್ಟ್ರಪತಿಗಳು ಮಾಡಿದ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆ ವೇಳೆ ಈ ವಿಷಯವನ್ನು ಪ್ರಸ್ತಾಪಿಸಬಹುದು’ ಎಂದು ಸಭಾಧ್ಯಕ್ಷರು ಹೇಳಿದರು.

‘ಲೋಕಸಭೆಯಲ್ಲಿ ನಿಲುವಳಿಯ ಕುರಿತಂತೆ ಮಂಗಳವಾರ ಚರ್ಚೆ ಪ್ರಾರಂಭವಾಗಲಿದೆ. ರಾಜ್ಯಸಭೆಯಲ್ಲಿ ಬುಧವಾರ ಈ ಸಂಬಂಧ ಚರ್ಚೆ ನಡೆಸಲಿದೆ’ ಎಂದು ಅವರು ಹೇಳಿದರು.

‘ಕೃಷಿ ಕಾಯ್ದೆಗಳ ಕುರಿತಂತೆ ರೈತರು ಮತ್ತು ಸರ್ಕಾರದ ನಡುವೆ ಹಲವು ಸುತ್ತಿನ ಚರ್ಚೆಗಳು ನಡೆದಿವೆ. ಇದು ಬಹಳ ಮಹತ್ವಪೂರ್ಣ ವಿಷಯ. ಹಾಗಾಗಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆ ವೇಳೆ ಈ ವಿಷಯವನ್ನು ಪ್ರಸ್ತಾಪಿಸಬಹುದು’ ಎಂದು ವೆಂಕಯ್ಯನಾಯ್ಡು ಅವರು ತಿಳಿಸಿದರು. ಪ್ರತಿಪಕ್ಷಗಳ ಸದಸ್ಯರು ಇದನ್ನು ಒಪ್ಪದೆ ಸಭಾತ್ಯಾಗ ಮಾಡಿದರು.

ವಿಧಾನಪರಿಷತ್‌ ಕಲಾಪದಲ್ಲಿ ಸದಸ್ಯರ ಮೊಬೈಲ್ ಬಳಕೆ ನಿಷೇಧ -Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

4 hours ago

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು – vishwanews24

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…

7 hours ago

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ – vishwanews24

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…

7 hours ago

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…

9 hours ago

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ – vishwanews24

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…

9 hours ago

ಪಾಟ್ನಾ: ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ – vishwanews24

ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…

12 hours ago