Featured

ರೈತರ ಪ್ರತಿಭಟನೆ ಬೆಂಬಲಿಸಿ ಕಾಂಗ್ರೆಸ್‌ ವತಿಯಿಂದ ಜ. 20 ರಂದು ರಾಜಭವನ ಚಲೋ ನಡೆಸಲಾಗುವುದು : ಸಿದ್ದರಾಮಯ್ಯ -Vishwanews24

ರೈತರ ಪ್ರತಿಭಟನೆ ಬೆಂಬಲಿಸಿ ಕಾಂಗ್ರೆಸ್‌ ವತಿಯಿಂದ ಜ. 20 ರಂದು ರಾಜಭವನ ಚಲೋ ನಡೆಸಲಾಗುವುದು : ಸಿದ್ದರಾಮಯ್ಯ -Vishwanews24

ಹುಬ್ಬಳ್ಳಿ,: “ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ಉದ್ದೇಶಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಕಾಂಗ್ರೆಸ್‌ ವತಿಯಿಂದ ಜ. 20 ರಂದು ರಾಜಭವನ ಚಲೋ ನಡೆಸಲಾಗುವುದು” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಬ್‌ ಕಾ ಸಾಥ್‌‌‌ ಸಬ್‌ ಕಾ ವಿಕಾಸ್‌ ಎಂದು ಹೇಳಿ ಕೇಂದ್ರ ಸರ್ಕಾರ ಯಾಮಾರಿಸಿದೆ. ಪ್ರಧಾನಿ ಮೋದಿ ಹೇಳುವುದು ಒಂದು ಮಾಡುವುದು ಇನ್ನೊಂದು” ಎಂದರು.

ರಾಜ್ಯ ಸರ್ಕಾರದ ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಈ ಬಗ್ಗೆ ಇನ್ನೂ ಕೂಡಾ ಸ್ಪಷ್ಟತೆ ಇಲ್ಲ. ಸಿಎಂ ಬಿಎಸ್‌ವೈ ಅವರು ಸಿಹಿ ಸುದ್ದಿ ನೀಡುತ್ತೇವೆ ಎಂದಿದ್ದಾರೆ. ಆದರೆ, ಈ ಬಗ್ಗೆ ಹೈಕಮಾಂಡ್‌ ಏನು ಹೇಳಿದೆಯೋ?” ಎಂದು ಕೇಳಿದರು.

“ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಕೆಳಕ್ಕಿಳಿಸುತ್ತೇವೆ ಎಂದು ನನಗೆ ಆರ್‌ಎಸ್‌ಎಸ್‌ನವರೇ ತಿಳಿಸಿದ್ದಾರೆ. ನನಗೆ ಆರ್‌‌ಎಸ್‌‌ಎಸ್‌ ಸೇರಿದಂತೆ ಉಳಿದ ಪಕ್ಷಗಳಲ್ಲೂ ಕೂಡಾ ಮಿತ್ರರಿದ್ದಾರೆ” ಎಂದು ಹೇಳಿದರು.

“ಬಿಜೆಪಿ ಶೇ 30 ಪರ್ಸಟ್ ಸರ್ಕಾರ. ಹಣ ನೀಡದೇ ಯಾವುದೇ ಕಡತ ಕೂಡಾ ವಿಲೇವಾರಿಯಾಗುವುದಿಲ್ಲ. ಅಲ್ಲದೇ, ಎನ್‌‌ಒಸಿ ಹಾಗೂ ಯೋಜನೆಗಳಿಗೆ ಅನುಮೋದನೆ ದೊರಕುವುದಿಲ್ಲ. ಕಾಂಗ್ರೆಸ್‌ ಸರ್ಕಾರ ಇದ್ದ ಸಂದರ್ಭ ಯಾವುದಾದರೂ ಹಗರಣ ಇದ್ದರೆ ತೋರಿಸಲಿ” ಎಂದರು.

http://ಅಧಿಕಾರದಲ್ಲಿದ್ದಾಗ ತೋರಿದ ದರ್ಪ, ಅಹಂಕಾರದಿಂದ ಕಾಂಗ್ರೆಸ್‌ ದೂಳೀಪಟವಾಗುತ್ತಿದೆ : ನಳಿನ್‌ ಕುಮಾರ್‌ ಕಟೀಲ್‌ -Vishwanews24

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago