Featured

ರೈತರ ಸಾಲಮನ್ನದ ಬೆನ್ನಲ್ಲೇ, ಮತ್ತೊಂದು ಸಾಹಸಕ್ಕೆ ರೆಡಿಯಾದ ಕುಮಾರಸ್ವಾಮಿ,ನಿಮ್ಮದು ಸಾಲ ಮನ್ನ ಅಂತೆ ವಿದ್ಯಾರ್ಥಿಗಳೆ..!!!

ಬೆಂಗಳೂರು: ರಾಜ್ಯ ಸರ್ಕಾರ ರೈತರ ಸಾಲಮನ್ನಾ ಮಾಡಲು ಸಖತ್ ಸರ್ಕಸ್ ಮಾಡ್ತಾ ಇದೆ. ಈ ಮಧ್ಯೆ ಇನ್ನೊಂದು ಹೊಸ ನ್ಯೂಸ್ ಹೊರಬಿದ್ದಿದ್ದು, ರೈತರ ಸಾಲಮನ್ನಾ ಮಾಡಿದ ಬಳಿಕ ವಿದ್ಯಾರ್ಥಿಗಳ ಸಾಲಮನ್ನಾ ಮಾಡಲು ಸರ್ಕಾರ ನಿರ್ಧರಿಸಿದೆ.

ವಿದ್ಯಾರ್ಥಿಗಳು ವ್ಯಾಸಂಗಕ್ಕಾಗಿ ಮಾಡಿದ ಶೈಕ್ಷಣಿಕ ಸಾಲಮನ್ನಾ ಮಾಡಲು ತೆರೆಮರೆಯಲ್ಲಿ ಸಿದ್ಧತೆ ನಡೆಸಿದೆ ಎನ್ನಲಾಗಿದೆ.

ಆದ್ರೆ ಕೇವಲ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಸಾಲಮನ್ನಾ ಮಾಡಲು ಚಿಂತನೆ ನಡೆಸಿದೆ.

ಈ ಸಂಬಂಧ ಸಮಾಜ ಕಲ್ಯಾಣ ಇಲಾಖೆ, ಎಲ್ಲ ಜಿಲ್ಲೆಗಳ ಜಂಟಿ ಹಾಗೂ ಉಪನಿರ್ದೇಶಕರಿಗೆ ಪತ್ರ ಬರೆದಿದ್ದು, ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳು ವ್ಯಾಸಂಗಕ್ಕಾಗಿ ಪಡೆದಿರುವ ಸಾಲದ ಬಗ್ಗೆ ಮಾಹಿತಿ ಪಡೆಯಲು ಸೂಚನೆ ನೀಡಿದೆ.

ರಾಷ್ಟ್ರೀಕೃತ ಬ್ಯಾಂಕ್‌ಗಳನ್ನೊಳಗೊಂಡಂತೆ ಎಲ್ಲ ಬ್ಯಾಂಕ್‌ಗಳಿಂದ ಪಡೆದಿರುವ ಶೈಕ್ಷಣಿಕ ಸಾಲದ ಮಾಹಿತಿ ಪಡೆಯುವಂತೆ ಸೂಚಿಸಿದೆ.

ಅಲ್ಲದೇ ಸಮಾಜ ಕಲ್ಯಾಣ ಇಲಾಖೆ ಆಯುಕ್ತರು ಜಿಲ್ಲಾ ಉಪನಿರ್ದೇಶಕರಿಗೆ ವಿದ್ಯಾರ್ಥಿಗಳ ಹೆಸರು, ಕೋರ್ಸ್ ವಿವರ, ಬ್ಯಾಂಕ್ ಮತ್ತು ಸಾಲದ ಮೊತ್ತ, ಬಡ್ಡಿ ಮೊತ್ತ ಹಾಗೂ ಒಟ್ಟು ಮೊತ್ತದ ಮಾಹಿತಿ‌ ನೀಡುವಂತೆ ಸೂಚನೆ ನೀಡಿದೆ.

 

Vishwa News 24

Recent Posts

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

1 hour ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

2 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

2 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

2 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

2 hours ago

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago