ರೈತರ ಸಾಲಮನ್ನಾಕ್ಕೆ ಇನ್ನು 15 ದಿನ ಕಾಲಾಕಾಶ ನೀಡಿ ಎಂದು ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿದೇಶಕ್ಕೆ ತೆರಳಿದ್ದಾರೆ. ಅವರು ಇನ್ನೆರಡು ದಿನಗಳಲ್ಲಿ ವಾಪಸ್ ಬರಲಿದ್ದಾರೆ. ಬಳಿಕ ಅವರೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಯಾವ ರೈತರಿಗೂ ಅನನುಕೂಲವಾಗದಂತೆ ನೋಡಿಕೊಳ್ಳುತ್ತೇನೆ. ಎರಡು ಹಂತದಲ್ಲಿ ಸಾಲ ಮನ್ನಾ ಮಾಡುವ ಬಗ್ಗೆ ಚಿಂತನೆ ನಡೆಸುತ್ತಿದ್ದೇನೆ. ನಾವು ರೈತರಿಗೆ ನೀಡುವ ಹಣ ಪೋಲಾಗಬಾರದು. ಎಲ್ಲವನ್ನೂ ಪರಿಶೀಲನೆ ಮಾಡಿಯೇ ಬಿಡುಗಡೆ ಮಾಡುತ್ತೇನೆ. ಡಿಸೆಂಬರ್ ವರೆಗಿನ ಸಣ್ಣ ಮತ್ತು ಅತಿ ಸಣ್ಣ ಹಿಡುವಳಿ ರೈತರ ಸಾಲ ಮನ್ನ ಬಗ್ಗೆ ಯೋಚನೆ ಮಾಡುತ್ತಿದ್ದೇನೆ. ಇವರಲ್ಲಿ ಕೆಲವರು ಆದಾಯ ತೆರಿಗೆ ವ್ಯಾಪ್ತಿಯಲ್ಲಿ ಇದ್ದರೆ ಅಂಥವರ ಬಗ್ಗೆ ಏನು ಮಾಡಬೇಕು? ಎಂದು ಪ್ರಶ್ನಿಸಿದರು.
ಅಲ್ಲದೆ ರೈತರು ಅಲ್ಲದವರೂ ಸಾಲ ಮಾಡಿಕೊಂಡಿದ್ದಾರೆ. ಗೊಬ್ಬರದ ಅಂಗಡಿ ಇಟ್ಟುಕೊಂಡು ಕೃಷಿ ಹೆಸರಲ್ಲಿ ಐದಾರು ಕೋಟಿ ಸಾಲ ಪಡೆದಿರುತ್ತಾರೆ. ಕಾಫಿ ಪ್ಲಾಂಟರ್ ಸಾಲ ತೆಗೆದುಕೊಂಡಿರುತ್ತಾರೆ. ಅದನ್ನೆಲ್ಲ ಹೇಗೆ ಮನ್ನಾ ಮಾಡುವುದು ಎಂಬ ಬಗ್ಗೆ ಚರ್ಚೆ ನಡೆಸಬೇಕು ಎಂದು ತಿಳಿಸಿದರು. ನನ್ನ ಸರ್ಕಾರ ಆರ್ಥಿಕ ಶಿಸ್ತು ಮೀರಿ ಹೋಗೋದಿಲ್ಲ. ನಿಮ್ಮನ್ನೂ ಉಳಿಸಿ, ನಮ್ಮ ಸರ್ಕಾರವನ್ನೂ ಐದು ವರ್ಷ ಉಳಿಸುವ ಜವಾಬ್ದಾರಿ ನನ್ನದು ಎಂದರು.
ಇದಕ್ಕೂ ಮೊದಲು ಡಿಸಿಎಂ ಪರಮೇಶ್ವರ್ ಮಾತನಾಡಿ, ರೈತರ ಸಾಲಮನ್ನಾ ಅಧ್ಯಯನಕ್ಕೆ ಸಮಿತಿ ರಚನೆ ಮಾಡುವ ಅವಶ್ಯಕತೆ ಇದೆ. ಒಂದೇ ಬಾರಿ ಮಾಡುವುದೋ, ಹಂತಹಂತವಾಗಿ ಮಾಡುವುದೋ ಎಂದು ಅಧ್ಯಯನ ಮಾಡಬೇಕು. ಜೆಡಿಎಸ್ ಬಹುಮತದ ಸರ್ಕಾರ ರಚನೆ ಮಾಡಿದ್ದರೆ ಕುಮಾರಸ್ವಾಮಿ ಇಷ್ಟೊತ್ತಿಗೆ ಆಗಲೇ ಸಾಲ ಮನ್ನಾ ಮಾಡುತ್ತಿದ್ದರು. ಸಮ್ಮಿಶ್ರ ಸರ್ಕಾರ ಇರುವುದರಿಂದ ಚರ್ಚೆ ನಡೆಸಬೇಕಾಗುತ್ತದೆ. ಯಾರಿಗೂ ಈ ಬಗ್ಗೆ ಅನುಮಾನ ಬೇಡ. ಖಂಡಿತ ಮನ್ನಾ ಆಗುತ್ತದೆ ಎಂದು ಭರವಸೆ ನೀಡಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…