ರಾಜ್ಯ ನ್ಯೂಸ್

ರೈತರ ಸಾಲಮನ್ನಾಕ್ಕೆ 15 ದಿನ ಕಾಲಾವಕಾಶ ಕೇಳಿದ ಸಿಎಂ

ರೈತರ ಸಾಲಮನ್ನಾಕ್ಕೆ ಇನ್ನು 15 ದಿನ ಕಾಲಾಕಾಶ ನೀಡಿ ಎಂದು ಮುಖ್ಯಮಂತ್ರಿ ಎಚ್​. ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ವಿದೇಶಕ್ಕೆ ತೆರಳಿದ್ದಾರೆ. ಅವರು ಇನ್ನೆರಡು ದಿನಗಳಲ್ಲಿ ವಾಪಸ್​ ಬರಲಿದ್ದಾರೆ. ಬಳಿಕ ಅವರೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಯಾವ ರೈತರಿಗೂ ಅನನುಕೂಲವಾಗದಂತೆ ನೋಡಿಕೊಳ್ಳುತ್ತೇನೆ. ಎರಡು ಹಂತದಲ್ಲಿ ಸಾಲ ಮನ್ನಾ ಮಾಡುವ ಬಗ್ಗೆ ಚಿಂತನೆ ನಡೆಸುತ್ತಿದ್ದೇನೆ. ನಾವು ರೈತರಿಗೆ ನೀಡುವ ಹಣ ಪೋಲಾಗಬಾರದು. ಎಲ್ಲವನ್ನೂ ಪರಿಶೀಲನೆ ಮಾಡಿಯೇ ಬಿಡುಗಡೆ ಮಾಡುತ್ತೇನೆ. ಡಿಸೆಂಬರ್​ ವರೆಗಿನ ಸಣ್ಣ ಮತ್ತು ಅತಿ ಸಣ್ಣ ಹಿಡುವಳಿ ರೈತರ ಸಾಲ ಮನ್ನ ಬಗ್ಗೆ ಯೋಚನೆ ಮಾಡುತ್ತಿದ್ದೇನೆ. ಇವರಲ್ಲಿ ಕೆಲವರು ಆದಾಯ ತೆರಿಗೆ ವ್ಯಾಪ್ತಿಯಲ್ಲಿ ಇದ್ದರೆ ಅಂಥವರ ಬಗ್ಗೆ ಏನು ಮಾಡಬೇಕು? ಎಂದು ಪ್ರಶ್ನಿಸಿದರು.
ಅಲ್ಲದೆ ರೈತರು ಅಲ್ಲದವರೂ ಸಾಲ ಮಾಡಿಕೊಂಡಿದ್ದಾರೆ. ಗೊಬ್ಬರದ ಅಂಗಡಿ ಇಟ್ಟುಕೊಂಡು ಕೃಷಿ ಹೆಸರಲ್ಲಿ ಐದಾರು ಕೋಟಿ ಸಾಲ ಪಡೆದಿರುತ್ತಾರೆ. ಕಾಫಿ ಪ್ಲಾಂಟರ್ ಸಾಲ ತೆಗೆದುಕೊಂಡಿರುತ್ತಾರೆ. ಅದನ್ನೆಲ್ಲ ಹೇಗೆ ಮನ್ನಾ ಮಾಡುವುದು ಎಂಬ ಬಗ್ಗೆ ಚರ್ಚೆ ನಡೆಸಬೇಕು ಎಂದು ತಿಳಿಸಿದರು.  ನನ್ನ ಸರ್ಕಾರ ಆರ್ಥಿಕ ಶಿಸ್ತು ಮೀರಿ ಹೋಗೋದಿಲ್ಲ. ನಿಮ್ಮನ್ನೂ ಉಳಿಸಿ, ನಮ್ಮ ಸರ್ಕಾರವನ್ನೂ ಐದು ವರ್ಷ ಉಳಿಸುವ ಜವಾಬ್ದಾರಿ ನನ್ನದು ಎಂದರು.

ಇದಕ್ಕೂ ಮೊದಲು ಡಿಸಿಎಂ ಪರಮೇಶ್ವರ್​ ಮಾತನಾಡಿ, ರೈತರ ಸಾಲಮನ್ನಾ ಅಧ್ಯಯನಕ್ಕೆ ಸಮಿತಿ ರಚನೆ ಮಾಡುವ ಅವಶ್ಯಕತೆ ಇದೆ. ಒಂದೇ ಬಾರಿ ಮಾಡುವುದೋ, ಹಂತಹಂತವಾಗಿ ಮಾಡುವುದೋ ಎಂದು ಅಧ್ಯಯನ ಮಾಡಬೇಕು. ಜೆಡಿಎಸ್​ ಬಹುಮತದ ಸರ್ಕಾರ ರಚನೆ ಮಾಡಿದ್ದರೆ ಕುಮಾರಸ್ವಾಮಿ ಇಷ್ಟೊತ್ತಿಗೆ ಆಗಲೇ ಸಾಲ ಮನ್ನಾ ಮಾಡುತ್ತಿದ್ದರು. ಸಮ್ಮಿಶ್ರ ಸರ್ಕಾರ ಇರುವುದರಿಂದ ಚರ್ಚೆ ನಡೆಸಬೇಕಾಗುತ್ತದೆ. ಯಾರಿಗೂ ಈ ಬಗ್ಗೆ ಅನುಮಾನ ಬೇಡ. ಖಂಡಿತ ಮನ್ನಾ ಆಗುತ್ತದೆ ಎಂದು ಭರವಸೆ ನೀಡಿದರು.

 

Vishwa News 24

Recent Posts

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

1 hour ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

2 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

2 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

2 hours ago

ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ -; ಅಪಾರ ನಷ್ಟ – vishwanews24

ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ -; ಅಪಾರ ನಷ್ಟ ಮಂಗಳೂರು: ನಗರದ ಹಂಪನಕಟ್ಟೆಯಲ್ಲಿ ಶೂ ಅಂಗಡಿಯೊಂದಕ್ಕೆ…

2 hours ago

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

22 hours ago