Featured

ರೈತರ ಸಾಲಮನ್ನಾ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ : ಸಹಕಾರ ಸಚಿವ ಕೆಎನ್ ರಾಜಣ್ಣ – vishwanews24

ರೈತರ ಸಾಲಮನ್ನಾ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ : ಸಹಕಾರ ಸಚಿವ ಕೆಎನ್ ರಾಜಣ್ಣ

ಬೆಂಗಳೂರು: ರೈತರ ಸಾಲಮನ್ನಾ ಆಗುವ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರ ನಿರಾಸೆ ಮೂಡಿಸಿದೆ. ರೈತರ ಸಾಲಮನ್ನಾ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ  ತಿಳಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಸಿಟಿ ರವಿ ಪ್ರಶ್ನೆಗೆ ಉತ್ತರಿಸಿದ ಅವರು, ಸಾಲಮನ್ನಾ ಮಾಡುವ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟಪಡಿಸಿದರು.

ಸಿಟಿ ರವಿ ಮಾತನಾಡಿ, ಸಹಕಾರ ಸಂಘದಲ್ಲಿ ಸರಿಯಾಗಿ ಸಾಲ ಸೌಲಭ್ಯ ನೀಡುತ್ತಿಲ್ಲ. ಅಗತ್ಯವಾಗಿ ಸಾಲ ಬೇಕಾಗಿರುವವರಿಗೆ ಸಾಲ ಸಿಗುತ್ತಿಲ್ಲ. ತಮಗೆ ಬೇಕಾದವರಿಗೆ ಮಾತ್ರ ಸಾಲ ನೀಡುವ ವ್ಯವಸ್ಥೆ ಸಹಕಾರಿ ಬ್ಯಾಂಕುಗಳಲ್ಲಿ ಇವೆ. ಬಾಗಿಲು ಹಾಕಿಕೊಂಡು ಕಿಟಕಿಯಲ್ಲಿ ವ್ಯವಹಾರ ಮಾಡುವ ವ್ಯವಸ್ಥೆ ಸಹಕಾರಿ ಇಲಾಖೆಯಲ್ಲಿ ಇದೆ ಈ ಬಗ್ಗೆ ಸರ್ಕಾರ ಕ್ರಮವಹಿಸಬೇಕು. ರೈತರ ಸಾಲಮನ್ನಾ ಸರ್ಕಾರ ಮಾಡಬೇಕು. ರಾಜ್ಯದಲ್ಲಿ ಕಳೆದ ಒಂದು ವರ್ಷದಲ್ಲಿ 1 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೀಗಾಗಿ ಸರ್ಕಾರ ರೈತರ ನೆರವಿಗೆ ಬರಬೇಕು. 2023ರ ಭಾಷಣದಲ್ಲಿ ಈ ಸರ್ಕಾರ ರೈತರ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದರು. ಹೀಗಾಗಿ ರೈತರ ಸಾಲಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

ಇದಕ್ಕೆ ಸಚಿವ ರಾಜಣ್ಣ ಉತ್ತರ ನೀಡಿ, 2024-25ರ ಸಾಲಿನಲ್ಲಿ ಜೂನ್ ಅಂತ್ಯದವರೆಗೆ ಸಹಕಾರಿ ಸಂಘಗಳು ಹೊಸದಾಗಿ ಅರ್ಜಿ ಸಲ್ಲಿಸಿದ 9,797 ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 93.49 ಕೋಟಿ ರೂ. ಬೆಳೆ ಸಾಲ ನೀಡಿದೆ. 2,815 ರೈತರಿಗೆ 138.36 ಕೋಟಿ ರೂ. ಮಧ್ಯಮ ಸಾಲ, ದೀರ್ಘಾವಧಿ ಸಾಲ ನೀಡಲಾಗಿದೆ. ಕಾಂಗ್ರೆಸ್ ಅವಧಿಯಲ್ಲಿ ಹೆಚ್ಚು ಸಾಲಮನ್ನಾ ಮಾಡಿದೆ. ರಾಜಕೀಯಗೋಸ್ಕರ ರೈತರನ್ನು ಬಳಕೆ ಮಾಡೋದು ಬೇಡ. ಬಿಜೆಪಿ ಅವರು ಸಾಲಮನ್ನಾ ಮಾಡಿ ಎನ್ನುವ ಬದಲು ರಾಷ್ಟ್ರೀಯ ಬ್ಯಾಂಕ್ ಸಾಲಮನ್ನಾ ಕೇಂದ್ರ ಮಾಡಲಿ. ಅದನ್ನು ನೋಡಿಕೊಂಡು ನಾವು ಬೇಕಾದರೆ ಮಾಡುತ್ತೇವೆ. ಹೆಚ್ಚು ಸಾಲಮನ್ನಾ ಮಾಡಿರೋದು ಕಾಂಗ್ರೆಸ್ ಸರ್ಕಾರ. ಇದರಲ್ಲಿ ಬಿಜೆಪಿ ರಾಜಕೀಯ ಮಾಡೋದು ಬೇಡ. ಹಣಕಾಸು ಇತಿಮಿತಿಯಲ್ಲಿ ಸಾಲ ನೀಡುವ ವ್ಯವಸ್ಥೆ ಮಾಡುತ್ತೇವೆ ಎಂದು ತಿಳಿಸಿದರು.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

5 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

5 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

5 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

9 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

9 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

9 hours ago