Featured

ರೈತರ ಸಾಲಮನ್ನಾ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ : ಸಹಕಾರ ಸಚಿವ ಕೆಎನ್ ರಾಜಣ್ಣ – vishwanews24

ರೈತರ ಸಾಲಮನ್ನಾ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ : ಸಹಕಾರ ಸಚಿವ ಕೆಎನ್ ರಾಜಣ್ಣ

ಬೆಂಗಳೂರು: ರೈತರ ಸಾಲಮನ್ನಾ ಆಗುವ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರ ನಿರಾಸೆ ಮೂಡಿಸಿದೆ. ರೈತರ ಸಾಲಮನ್ನಾ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ  ತಿಳಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಸಿಟಿ ರವಿ ಪ್ರಶ್ನೆಗೆ ಉತ್ತರಿಸಿದ ಅವರು, ಸಾಲಮನ್ನಾ ಮಾಡುವ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟಪಡಿಸಿದರು.

ಸಿಟಿ ರವಿ ಮಾತನಾಡಿ, ಸಹಕಾರ ಸಂಘದಲ್ಲಿ ಸರಿಯಾಗಿ ಸಾಲ ಸೌಲಭ್ಯ ನೀಡುತ್ತಿಲ್ಲ. ಅಗತ್ಯವಾಗಿ ಸಾಲ ಬೇಕಾಗಿರುವವರಿಗೆ ಸಾಲ ಸಿಗುತ್ತಿಲ್ಲ. ತಮಗೆ ಬೇಕಾದವರಿಗೆ ಮಾತ್ರ ಸಾಲ ನೀಡುವ ವ್ಯವಸ್ಥೆ ಸಹಕಾರಿ ಬ್ಯಾಂಕುಗಳಲ್ಲಿ ಇವೆ. ಬಾಗಿಲು ಹಾಕಿಕೊಂಡು ಕಿಟಕಿಯಲ್ಲಿ ವ್ಯವಹಾರ ಮಾಡುವ ವ್ಯವಸ್ಥೆ ಸಹಕಾರಿ ಇಲಾಖೆಯಲ್ಲಿ ಇದೆ ಈ ಬಗ್ಗೆ ಸರ್ಕಾರ ಕ್ರಮವಹಿಸಬೇಕು. ರೈತರ ಸಾಲಮನ್ನಾ ಸರ್ಕಾರ ಮಾಡಬೇಕು. ರಾಜ್ಯದಲ್ಲಿ ಕಳೆದ ಒಂದು ವರ್ಷದಲ್ಲಿ 1 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೀಗಾಗಿ ಸರ್ಕಾರ ರೈತರ ನೆರವಿಗೆ ಬರಬೇಕು. 2023ರ ಭಾಷಣದಲ್ಲಿ ಈ ಸರ್ಕಾರ ರೈತರ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದರು. ಹೀಗಾಗಿ ರೈತರ ಸಾಲಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

ಇದಕ್ಕೆ ಸಚಿವ ರಾಜಣ್ಣ ಉತ್ತರ ನೀಡಿ, 2024-25ರ ಸಾಲಿನಲ್ಲಿ ಜೂನ್ ಅಂತ್ಯದವರೆಗೆ ಸಹಕಾರಿ ಸಂಘಗಳು ಹೊಸದಾಗಿ ಅರ್ಜಿ ಸಲ್ಲಿಸಿದ 9,797 ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 93.49 ಕೋಟಿ ರೂ. ಬೆಳೆ ಸಾಲ ನೀಡಿದೆ. 2,815 ರೈತರಿಗೆ 138.36 ಕೋಟಿ ರೂ. ಮಧ್ಯಮ ಸಾಲ, ದೀರ್ಘಾವಧಿ ಸಾಲ ನೀಡಲಾಗಿದೆ. ಕಾಂಗ್ರೆಸ್ ಅವಧಿಯಲ್ಲಿ ಹೆಚ್ಚು ಸಾಲಮನ್ನಾ ಮಾಡಿದೆ. ರಾಜಕೀಯಗೋಸ್ಕರ ರೈತರನ್ನು ಬಳಕೆ ಮಾಡೋದು ಬೇಡ. ಬಿಜೆಪಿ ಅವರು ಸಾಲಮನ್ನಾ ಮಾಡಿ ಎನ್ನುವ ಬದಲು ರಾಷ್ಟ್ರೀಯ ಬ್ಯಾಂಕ್ ಸಾಲಮನ್ನಾ ಕೇಂದ್ರ ಮಾಡಲಿ. ಅದನ್ನು ನೋಡಿಕೊಂಡು ನಾವು ಬೇಕಾದರೆ ಮಾಡುತ್ತೇವೆ. ಹೆಚ್ಚು ಸಾಲಮನ್ನಾ ಮಾಡಿರೋದು ಕಾಂಗ್ರೆಸ್ ಸರ್ಕಾರ. ಇದರಲ್ಲಿ ಬಿಜೆಪಿ ರಾಜಕೀಯ ಮಾಡೋದು ಬೇಡ. ಹಣಕಾಸು ಇತಿಮಿತಿಯಲ್ಲಿ ಸಾಲ ನೀಡುವ ವ್ಯವಸ್ಥೆ ಮಾಡುತ್ತೇವೆ ಎಂದು ತಿಳಿಸಿದರು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

4 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

4 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

4 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

4 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago