Featured

ರೈತರ ಹೆಸರಿನಲ್ಲಿ ಗಲಭೆ ನಡೆಸಿ, ನಮ್ಮ ಮುಖಕ್ಕೆ ಮಸಿ ಬಳಿಯಲು ಯತ್ನಿಸಿದ್ದು ಯಾರೆಂದು ತಿಳಿದಿದೆ : ಭಾರತೀಯ ಕಿಸಾನ್ ಒಕ್ಕೂಟದ ವಕ್ತಾರ ರಾಕೇಶ್ ಟಿಖಾಯತ್ -Vishwanews24

ರೈತರ ಹೆಸರಿನಲ್ಲಿ ಗಲಭೆ ನಡೆಸಿ, ನಮ್ಮ ಮುಖಕ್ಕೆ ಮಸಿ ಬಳಿಯಲು ಯತ್ನಿಸಿದ್ದು ಯಾರೆಂದು ತಿಳಿದಿದೆ : ಭಾರತೀಯ ಕಿಸಾನ್ ಒಕ್ಕೂಟದ ವಕ್ತಾರ ರಾಕೇಶ್ ಟಿಖಾಯತ್ -Vishwanews24

ನವದೆಹಲಿ:ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮಂಗಳವಾರ (ಜನವರಿ 26, 2021) ದೆಹಲಿಯಲ್ಲಿ ಪ್ರತಿಭಟನಾ ನಿರತ ರೈತರು ಟ್ರ್ಯಾಕ್ಟರ್ ರಾಲಿ ನಡೆಸುತ್ತಿದ್ದ ಸಂದರ್ಭದಲ್ಲಿ ರೈತರ ಹೆಸರಿನಲ್ಲಿ ಗಲಭೆ ನಡೆಸಿ, ನಮ್ಮ ಮುಖಕ್ಕೆ ಮಸಿ ಬಳಿಯಲು ಯತ್ನಿಸಿದ್ದು ಯಾರೆಂದು ತಿಳಿದಿದೆ ಎಂಬುದಾಗಿ ಭಾರತೀಯ ಕಿಸಾನ್ ಒಕ್ಕೂಟದ ವಕ್ತಾರ ರಾಕೇಶ್ ಟಿಖಾಯತ್ ಎಎನ್ ಐ ಜತೆ ಮಾತನಾಡುತ್ತ ತಿಳಿಸಿದ್ದಾರೆ.

ನಮ್ಮ ಪ್ರತಿಭಟನೆ ವೇಳೆ ನಡೆದ ಗಲಭೆಗೂ, ನಮಗೂ ಸಂಬಂಧ ಇಲ್ಲ. ನಮ್ಮ 41 ಸಂಘಟನೆಯ ಜನರು ಈ ಗಲಭೆಯಲ್ಲಿ ಶಾಮೀಲಾಗಿಲ್ಲ. ಈ ಕೃತ್ಯ ಎಸಗಿದವರು ರಾಜಕೀಯ ಪಕ್ಷದ ಕಾರ್ಯಕರ್ತರು. ಇದರ ಹಿಂದೆ ರಾಜಕೀಯ ಕೈವಾಡ ಎಂಬುದಾಗಿ ರಾಕೇಶ್ ಗಂಭೀರವಾಗಿ ಆರೋಪಿಸಿದ್ದಾರೆ.

ನಮ್ಮ ಹೋರಾಟದ ಹಕ್ಕನ್ನು ಕಿತ್ತುಕೊಳ್ಳಲು ರಾಜಕೀಯ ಪಕ್ಷಗಳು ಯತ್ನಿಸುತ್ತಿವೆ. ರೈತರ ಹೆಸರಿನಲ್ಲಿ ಗೂಂಡಾಗಿರಿ ನಡೆಸುವ ಮೂಲಕ ರೈತರ ಹೋರಾಟದ ದಿಕ್ಕುತಪ್ಪಿಸುವ ವ್ಯವಸ್ಥಿತ ಸಂಚು ನಡೆದಿರುವುದಾಗಿ ರಾಕೇಶ್ ದೂರಿದ್ದಾರೆ.

ಕೆಂಪುಕೋಟೆಯಲ್ಲಿ ಕಿಸಾನ್‌ ಯೂನಿಯನ್‌ ಧ್ವಜ ಹಾರಿಸಿದ ರೈತ -Vishwanews24

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

9 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

9 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

10 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

10 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

10 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

11 hours ago