ನವದೆಹಲಿ: ರೈತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ಮೂರು ವಿವಾಧಿತ ಕೃಷಿ ಕಾನೂನನ್ನು ಸರ್ಕಾರ ವಾಪಸ್ ಪಡೆದುಕೊಂಡಿದೆ. 355ದಿನಗಳ ಸುದೀರ್ಘವಾದ ರೈತರ ಹೋರಾಟಕ್ಕೆ ಫಲ ಸಿಕ್ಕಿದೆ.
ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಈ ವೇಳೆ ರೈತರ ಆರ್ಥಿಕ, ಸಾಮಾಜಿಕ ಸ್ಥಿತಿ ಸುಧಾರಿಸಲು ಪ್ರಯತ್ನ ಮಾಡಲಾಗುತ್ತಿದ್ದು, 3 ಕಾಯ್ದೆ ಜಾರಿಗೆ ತಂದಿದ್ದೆವು. ಸಣ್ಣ ರೈತರ ಒಳಿತಿಗಾಗಿಯೇ ಕೃಷಿ ಕಾಯ್ದೆ ಜಾರಿಗೆ ತಂದಿದ್ದೆವು. ಈ 3 ಕಾನೂನುಗಳು ಸಂಪೂರ್ಣವಾಗಿ ರೈತರ ಪರವಾಗಿದ್ದವು. ರೈತರ ಹಿತ ದೃಷ್ಟಿಯಲ್ಲಿಟ್ಟುಕೊಂಡೇ ಕಾಯ್ದೆ ಜಾರಿ ಮಾಡಲಾಗಿತ್ತು ಎಂದಿದ್ದಾರೆ.
ಯೋಜನೆ ಬಗ್ಗೆ ರೈತರಿಗೆ ತಿಳಿಸುವಲ್ಲಿ ಸಾಕಷ್ಟು ಯತ್ನಿಸಿದ್ದೇವೆ. ಆದರೆ ಕೆಲವು ರೈತರು ಕಾಯ್ದೆಯನ್ನು ಅವರ ಸಲಹೆ ಒಪ್ಪಿಕೊಂಡಿದ್ದರೂ ವಿರೋಧಿಸುತ್ತಿದ್ದಾರೆ. ರೈತರ ನಿರಂತರ ಹೋರಾಟದ ಹಿನ್ನೆಲೆಯಲ್ಲಿ ಇದೀಗ ಸರ್ಕಾರ ಮೂರು ಕೃಷಿ ಕಾಯ್ದೆ ವಾಪಸ್ ಪಡೆಯಲು ನಿರ್ಧರಿಸಲಾಗಿದೆ ಎಂದು ಪ್ರಧಾನಿ ಘೋಷಿಸಿದ್ದಾರೆ ಎಂದು ತಿಳಿಸಿದ್ದಾರೆ.
ರೈತರ ಸಮಸ್ಯೆ ಬಗೆಹರಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ದೇಶದಲ್ಲಿ 100ರಲ್ಲಿ 80 ಪ್ರತಿಶತ ರೈತರು ಸಣ್ಣ ಹಿಡುವಳಿ ರೈತರಾಗಿದ್ದು, 10 ಕೋಟಿಗಿಂತ ಹೆಚ್ಚು ಸಣ್ಣ ರೈತರಿದ್ದಾರೆ. ಅವರ ಸಮಸ್ಯೆಗಳನ್ನು ನಾನು ಅರಿತಿದ್ದೇನೆ. ಅದನ್ನು ಬಗೆಹರಿಸಲು ಪ್ರಯತ್ನ ಮಾಡಲಾಗುತ್ತಿದ್ದು, ಬೀಜ, ವಿಮೆ, ಮಾರುಕಟ್ಟೆ, ಉಳಿತಾಯಕ್ಕೆ ಯೋಜನೆಗಳಿಗಾಗಿ ರೈತರಿಗೆ ಫಸಲ್ ಬಿಮಾ, ಪೆನ್ಷನ್ ಯೋಜನೆ ಜಾರಿಗೆ ತಂದಿದ್ದೇವೆ ಎಂದು ತಿಳಿಸಿದ್ದಾರೆ.
ಕೃಷಿ ಮಾರುಕಟ್ಟೆ ಆಧುನೀಕರಣಕ್ಕೆ ಕೋಟ್ಯಂತರ ರೂ. ಖರ್ಚು ಮಾಡಲಾಗುತ್ತಿದೆ. ರೈತರು ಈಗ ಎಲ್ಲಿ ಬೇಕಾದರೂ ತಮ್ಮ ಬೆಳೆ ಮಾರಬಹುದು. ಕೃಷಿ ಬಜೆಟ್ ಮೊದಲಿಗಿಂತ 5 ಪಟ್ಟು ಹೆಚ್ಚಿಸಿದ್ದೇವೆ. ರೈತರಿಗೆ 22 ಕೋಟಿ ಸಾಯಿಲ್ ಹೆಲ್ತ್ ಕಾರ್ಡ್ ನೀಡಿದ್ದೇವೆ ಎಂದು ಪ್ರಧಾನಿ ಹೇಳಿದ್ದಾರೆ.
ಪಾಸ್ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ ನವದೆಹಲಿ: 14 ವರ್ಷಗಳಲ್ಲಿ ಇದೇ ಮೊದಲ…
ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ…
ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ ಮುಂಬೈ: ನನ್ನ ಮಗಳು ತಪ್ಪು…
ದರ್ಶನ್ ಪುತ್ರನಿದ್ದ ಕಾರು ಅಪಘಾತ : ವಿನೀಶ್ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…
ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ –…