ನವದೆಹಲಿ: ರೈತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ಮೂರು ವಿವಾಧಿತ ಕೃಷಿ ಕಾನೂನನ್ನು ಸರ್ಕಾರ ವಾಪಸ್ ಪಡೆದುಕೊಂಡಿದೆ. 355ದಿನಗಳ ಸುದೀರ್ಘವಾದ ರೈತರ ಹೋರಾಟಕ್ಕೆ ಫಲ ಸಿಕ್ಕಿದೆ.
ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಈ ವೇಳೆ ರೈತರ ಆರ್ಥಿಕ, ಸಾಮಾಜಿಕ ಸ್ಥಿತಿ ಸುಧಾರಿಸಲು ಪ್ರಯತ್ನ ಮಾಡಲಾಗುತ್ತಿದ್ದು, 3 ಕಾಯ್ದೆ ಜಾರಿಗೆ ತಂದಿದ್ದೆವು. ಸಣ್ಣ ರೈತರ ಒಳಿತಿಗಾಗಿಯೇ ಕೃಷಿ ಕಾಯ್ದೆ ಜಾರಿಗೆ ತಂದಿದ್ದೆವು. ಈ 3 ಕಾನೂನುಗಳು ಸಂಪೂರ್ಣವಾಗಿ ರೈತರ ಪರವಾಗಿದ್ದವು. ರೈತರ ಹಿತ ದೃಷ್ಟಿಯಲ್ಲಿಟ್ಟುಕೊಂಡೇ ಕಾಯ್ದೆ ಜಾರಿ ಮಾಡಲಾಗಿತ್ತು ಎಂದಿದ್ದಾರೆ.
ಯೋಜನೆ ಬಗ್ಗೆ ರೈತರಿಗೆ ತಿಳಿಸುವಲ್ಲಿ ಸಾಕಷ್ಟು ಯತ್ನಿಸಿದ್ದೇವೆ. ಆದರೆ ಕೆಲವು ರೈತರು ಕಾಯ್ದೆಯನ್ನು ಅವರ ಸಲಹೆ ಒಪ್ಪಿಕೊಂಡಿದ್ದರೂ ವಿರೋಧಿಸುತ್ತಿದ್ದಾರೆ. ರೈತರ ನಿರಂತರ ಹೋರಾಟದ ಹಿನ್ನೆಲೆಯಲ್ಲಿ ಇದೀಗ ಸರ್ಕಾರ ಮೂರು ಕೃಷಿ ಕಾಯ್ದೆ ವಾಪಸ್ ಪಡೆಯಲು ನಿರ್ಧರಿಸಲಾಗಿದೆ ಎಂದು ಪ್ರಧಾನಿ ಘೋಷಿಸಿದ್ದಾರೆ ಎಂದು ತಿಳಿಸಿದ್ದಾರೆ.
ರೈತರ ಸಮಸ್ಯೆ ಬಗೆಹರಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ದೇಶದಲ್ಲಿ 100ರಲ್ಲಿ 80 ಪ್ರತಿಶತ ರೈತರು ಸಣ್ಣ ಹಿಡುವಳಿ ರೈತರಾಗಿದ್ದು, 10 ಕೋಟಿಗಿಂತ ಹೆಚ್ಚು ಸಣ್ಣ ರೈತರಿದ್ದಾರೆ. ಅವರ ಸಮಸ್ಯೆಗಳನ್ನು ನಾನು ಅರಿತಿದ್ದೇನೆ. ಅದನ್ನು ಬಗೆಹರಿಸಲು ಪ್ರಯತ್ನ ಮಾಡಲಾಗುತ್ತಿದ್ದು, ಬೀಜ, ವಿಮೆ, ಮಾರುಕಟ್ಟೆ, ಉಳಿತಾಯಕ್ಕೆ ಯೋಜನೆಗಳಿಗಾಗಿ ರೈತರಿಗೆ ಫಸಲ್ ಬಿಮಾ, ಪೆನ್ಷನ್ ಯೋಜನೆ ಜಾರಿಗೆ ತಂದಿದ್ದೇವೆ ಎಂದು ತಿಳಿಸಿದ್ದಾರೆ.
ಕೃಷಿ ಮಾರುಕಟ್ಟೆ ಆಧುನೀಕರಣಕ್ಕೆ ಕೋಟ್ಯಂತರ ರೂ. ಖರ್ಚು ಮಾಡಲಾಗುತ್ತಿದೆ. ರೈತರು ಈಗ ಎಲ್ಲಿ ಬೇಕಾದರೂ ತಮ್ಮ ಬೆಳೆ ಮಾರಬಹುದು. ಕೃಷಿ ಬಜೆಟ್ ಮೊದಲಿಗಿಂತ 5 ಪಟ್ಟು ಹೆಚ್ಚಿಸಿದ್ದೇವೆ. ರೈತರಿಗೆ 22 ಕೋಟಿ ಸಾಯಿಲ್ ಹೆಲ್ತ್ ಕಾರ್ಡ್ ನೀಡಿದ್ದೇವೆ ಎಂದು ಪ್ರಧಾನಿ ಹೇಳಿದ್ದಾರೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…