ಬೆಂಗಳೂರು: ರೈತರ ಹೋರಾಟಕ್ಕೆ ಹೆದರಿ ಕೇಂದ್ರ ಸರ್ಕಾರ ವಿವಾದಿತ ಕೃಷಿ ಕಾಯ್ದೆಯನ್ನು ರದ್ದು ಮಾಡಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದರು.
ಈ ಕುರಿತಾಗಿ ಮಾತನಾಡಿದ ಅವರು, ರಾಹುಲ್ ಗಾಂಧಿ ಕೃಷಿ ಕಾಯ್ದೆ ರದ್ದು ಮಾಡಲಾಗುತ್ತದೆ ಎಂದು ಹೇಳಿದ್ದರು. ಅವರು ಹೇಳಿದಂತೆ ಆಗಿದೆ ಎಂದರು. ರೈತ ಹೋರಾಟಕ್ಕೆ ಮಣಿದು ಕೃಷಿ ಕಾಯ್ದೆಯನ್ನು ಕೇಂದ್ರ ಸರ್ಕಾರ ವಾಪಸ್ ಪಡೆದುಕೊಂಡಿದೆ. ಇದು ರೈತರಿಗೆ ಹಾಗೂ ಪ್ರಜಾಪ್ರಭುತ್ವಕ್ಕೆ ಸಂದ ಜಯ. ರೈತರು ಒಂದು ವರ್ಷದಿಂದ ಹೋರಾಟ ಮಾಡಿದ್ದಾರೆ. ಸ್ವಾತಂತ್ರ್ಯ ಪೂರ್ವದಲ್ಲಿ ಇಂತಹ ಹೋರಾಟ ನಡೆದಿರಲಿಲ್ಲ ಎಂದು ಹೇಳಿದರು.
ಹೋರಾಟದಲ್ಲಿ ನೂರಾರು ಜನ ರೈತರು ಪ್ರಾಣ, ಆಸ್ತಿ ಪಾಸ್ತಿ ಕಳೆದುಕೊಂಡಿದ್ದಾರೆ. ರೈತರ ಹೋರಾಟ ಹತ್ತಿಕ್ಕಲು ಕೇಂದ್ರ ಸರ್ಕಾರ ಕೇಂದ್ರ ಸಚಿವರ ಪುತ್ರನ ಕಾರನ್ನು ರೈತರ ಮೇಲೆ ಹರಿಸಿ ನಾಲ್ವರು ರೈತರ ಸಾವಿಗೆ ಕಾರಣವಾಗಿತ್ತು. ಆದರೆ ರೈತರು ಹೆದರದೆ ಸ್ವಾತಂತ್ರ್ಯ ಹೋರಾಟ ಮಾದರಿಯಲ್ಲಿ ಹೋರಾಟ ಮಾಡಿದ್ದಾರೆ. ಈ ಮೂಲಕ ಪರಿವರ್ತನೆ ತಂದಿದ್ದಾರೆ ಎಂದರು.
ಕಾಯ್ದೆ ಹಿಂಪಡೆಯುತ್ತಾರೆ ಎಂದು ರಾಹುಲ್ ಗಾಂಧಿ ಹೇಳಿದ್ದರು. ಅದರಂತೆ ಕೇಂದ್ರ ಈ ಕಾಯಿದೆಯನ್ನು ಹಿಂಪಡೆದಿದೆ. ಮುಂದಿನ ದಿನಗಳಲ್ಲಿ ಇದು ಒಂದು ಎಚ್ಚರಿಕೆ ಗಂಟೆ. ರೈತರಿಗೆ ಹೆದರಿ ಕಾಯಿದೆ ಹಿಂಪಡೆದಿದ್ದಾರೆ ಎಂದು ಈಶ್ವರ್ ಖಂಡ್ರೆ ಹೇಳಿದ್ದಾರೆ.
ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…
ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…
ಕರ್ನಾಟಕದಲ್ಲಿ ಹೆಚ್ಚುತ್ತಿರುವ H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…
ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…