ಬೆಂಗಳೂರು: ರೈತರ ಹೋರಾಟಕ್ಕೆ ಹೆದರಿ ಕೇಂದ್ರ ಸರ್ಕಾರ ವಿವಾದಿತ ಕೃಷಿ ಕಾಯ್ದೆಯನ್ನು ರದ್ದು ಮಾಡಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದರು.
ಈ ಕುರಿತಾಗಿ ಮಾತನಾಡಿದ ಅವರು, ರಾಹುಲ್ ಗಾಂಧಿ ಕೃಷಿ ಕಾಯ್ದೆ ರದ್ದು ಮಾಡಲಾಗುತ್ತದೆ ಎಂದು ಹೇಳಿದ್ದರು. ಅವರು ಹೇಳಿದಂತೆ ಆಗಿದೆ ಎಂದರು. ರೈತ ಹೋರಾಟಕ್ಕೆ ಮಣಿದು ಕೃಷಿ ಕಾಯ್ದೆಯನ್ನು ಕೇಂದ್ರ ಸರ್ಕಾರ ವಾಪಸ್ ಪಡೆದುಕೊಂಡಿದೆ. ಇದು ರೈತರಿಗೆ ಹಾಗೂ ಪ್ರಜಾಪ್ರಭುತ್ವಕ್ಕೆ ಸಂದ ಜಯ. ರೈತರು ಒಂದು ವರ್ಷದಿಂದ ಹೋರಾಟ ಮಾಡಿದ್ದಾರೆ. ಸ್ವಾತಂತ್ರ್ಯ ಪೂರ್ವದಲ್ಲಿ ಇಂತಹ ಹೋರಾಟ ನಡೆದಿರಲಿಲ್ಲ ಎಂದು ಹೇಳಿದರು.
ಹೋರಾಟದಲ್ಲಿ ನೂರಾರು ಜನ ರೈತರು ಪ್ರಾಣ, ಆಸ್ತಿ ಪಾಸ್ತಿ ಕಳೆದುಕೊಂಡಿದ್ದಾರೆ. ರೈತರ ಹೋರಾಟ ಹತ್ತಿಕ್ಕಲು ಕೇಂದ್ರ ಸರ್ಕಾರ ಕೇಂದ್ರ ಸಚಿವರ ಪುತ್ರನ ಕಾರನ್ನು ರೈತರ ಮೇಲೆ ಹರಿಸಿ ನಾಲ್ವರು ರೈತರ ಸಾವಿಗೆ ಕಾರಣವಾಗಿತ್ತು. ಆದರೆ ರೈತರು ಹೆದರದೆ ಸ್ವಾತಂತ್ರ್ಯ ಹೋರಾಟ ಮಾದರಿಯಲ್ಲಿ ಹೋರಾಟ ಮಾಡಿದ್ದಾರೆ. ಈ ಮೂಲಕ ಪರಿವರ್ತನೆ ತಂದಿದ್ದಾರೆ ಎಂದರು.
ಕಾಯ್ದೆ ಹಿಂಪಡೆಯುತ್ತಾರೆ ಎಂದು ರಾಹುಲ್ ಗಾಂಧಿ ಹೇಳಿದ್ದರು. ಅದರಂತೆ ಕೇಂದ್ರ ಈ ಕಾಯಿದೆಯನ್ನು ಹಿಂಪಡೆದಿದೆ. ಮುಂದಿನ ದಿನಗಳಲ್ಲಿ ಇದು ಒಂದು ಎಚ್ಚರಿಕೆ ಗಂಟೆ. ರೈತರಿಗೆ ಹೆದರಿ ಕಾಯಿದೆ ಹಿಂಪಡೆದಿದ್ದಾರೆ ಎಂದು ಈಶ್ವರ್ ಖಂಡ್ರೆ ಹೇಳಿದ್ದಾರೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…