ಮಂಡ್ಯ: ಸಿನಿಮಾದಲ್ಲಿ ನಾನು ಮಾಡಿದ ಪಾತ್ರದಂತೆ ರಾಜಕೀಯದಲ್ಲೂ ನನಗೆ ಅಭಿಮನ್ಯು ಪಾತ್ರ ಮಾಡಿಸಿ ಬಿಟ್ಟಿದ್ದಾರೆ ಎಂದು ಎದುರಾಳಿಗಳ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ದೊಡ್ಡರಸಿನಕೆರೆಯಲ್ಲಿ ವಿಧಾನಪರಿಷತ್ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ರೈತ ಸಂಘ, ಕಾಂಗ್ರೆಸ್, ಬಿಜೆಪಿ ಎಲ್ಲಾ ಸೇರಿ ಸಂಚು ಮಾಡಿ ನನ್ನನ್ನು ಸೋಲಿಸಿದರು. ಈ ಮೂಲಕ ಕುಮಾರಣ್ಣನ ನಾಯಕತ್ವದ ಮೇಲೆ ಪ್ರಶ್ನೆ ತರುವಂತೆ ಮಾಡಿದರು. ನಾನು ಆಕಸ್ಮಿಕವಾಗಿ ರಾಜಕೀಯಕ್ಕೆ ಬಂದವನು. ನನಗೆ ರಾಜಕೀಯದಲ್ಲಿ ತಂದೆಯ ಹೆಸರಿನಲ್ಲಿ ಸ್ಥಾನಮಾನ ಬೇಕೆಂಬ ಹುಚ್ಚು ಇಲ್ಲ. ಜೆಡಿಎಸ್ನ ಎಲ್ಲ ಶಾಸಕರು, ಸಂಸದರು ಮತ್ತು ಪಕ್ಷದ ಕಾರ್ಯಕರ್ತರ ಮಾತಿನ ಮೇರೆಗೆ ಚುನಾವಣೆಗೆ ನಿಂತಿದ್ದೆ ನನಗೆ ಸೋಲಾಗಿತ್ತು. ಆ ದುಖಃವನ್ನು ಹೋಗಲಾಡಿಸಲು ಮತ್ತೊಂದು ಅವಕಾಶ ಬಂದಿದೆ. ಎಂಎಲ್ಸಿ ಚುನಾವಣೆಯಲ್ಲಿ ಅಪ್ಪಾಜಿಗೌಡ ಅವರನ್ನು ಗೆಲ್ಲಿಸುವ ಹೊಣೆ ನನ್ನ ಮೇಲೆ ಇದೆ. ಎಲ್ಲರೂ ಸಹಕರಿಸಿ ಅಪ್ಪಾಜಿಗೌಡರನ್ನು ಗೆಲ್ಲಿಸೋಣ ಎಂದು ಕರೆ ನೀಡಿದರು.
ಈ ವಿಧಾನಪರಿಷತ್ ಚುನಾವಣೆ 2023ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಆಗಬೇಕು. ಕುರುಕ್ಷೇತ್ರ ಸಿನಿಮಾದಲ್ಲಿ ನಾನಗೆ ಅಭಿಮನ್ಯು ಪಾತ್ರ ಮಾಡಿ ಅಭ್ಯಸವಿದೆ. ಇದೀಗ ರಾಜಕೀಯದಲ್ಲೂ ನನಗೆ ಅಭಿಮನ್ಯು ಪಾತ್ರ ಮಾಡಿಸಿ ಬಿಟ್ಟಿದ್ದಾರೆ. ಅಪ್ಪಾಜಿ ಗೌಡರಂತಹ ಒಳ್ಳೆಯ ಅಭ್ಯರ್ಥಿಯನ್ನು ಈ ಬಾರಿ ಗೆಲ್ಲಿಸಿ ಎಂದು ಕಾರ್ಯಕರ್ತರಲ್ಲಿ ಮನವಿಮಾಡಿಕೊಂಡರು.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…