ಮಂಡ್ಯ: ಸಿನಿಮಾದಲ್ಲಿ ನಾನು ಮಾಡಿದ ಪಾತ್ರದಂತೆ ರಾಜಕೀಯದಲ್ಲೂ ನನಗೆ ಅಭಿಮನ್ಯು ಪಾತ್ರ ಮಾಡಿಸಿ ಬಿಟ್ಟಿದ್ದಾರೆ ಎಂದು ಎದುರಾಳಿಗಳ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ದೊಡ್ಡರಸಿನಕೆರೆಯಲ್ಲಿ ವಿಧಾನಪರಿಷತ್ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ರೈತ ಸಂಘ, ಕಾಂಗ್ರೆಸ್, ಬಿಜೆಪಿ ಎಲ್ಲಾ ಸೇರಿ ಸಂಚು ಮಾಡಿ ನನ್ನನ್ನು ಸೋಲಿಸಿದರು. ಈ ಮೂಲಕ ಕುಮಾರಣ್ಣನ ನಾಯಕತ್ವದ ಮೇಲೆ ಪ್ರಶ್ನೆ ತರುವಂತೆ ಮಾಡಿದರು. ನಾನು ಆಕಸ್ಮಿಕವಾಗಿ ರಾಜಕೀಯಕ್ಕೆ ಬಂದವನು. ನನಗೆ ರಾಜಕೀಯದಲ್ಲಿ ತಂದೆಯ ಹೆಸರಿನಲ್ಲಿ ಸ್ಥಾನಮಾನ ಬೇಕೆಂಬ ಹುಚ್ಚು ಇಲ್ಲ. ಜೆಡಿಎಸ್ನ ಎಲ್ಲ ಶಾಸಕರು, ಸಂಸದರು ಮತ್ತು ಪಕ್ಷದ ಕಾರ್ಯಕರ್ತರ ಮಾತಿನ ಮೇರೆಗೆ ಚುನಾವಣೆಗೆ ನಿಂತಿದ್ದೆ ನನಗೆ ಸೋಲಾಗಿತ್ತು. ಆ ದುಖಃವನ್ನು ಹೋಗಲಾಡಿಸಲು ಮತ್ತೊಂದು ಅವಕಾಶ ಬಂದಿದೆ. ಎಂಎಲ್ಸಿ ಚುನಾವಣೆಯಲ್ಲಿ ಅಪ್ಪಾಜಿಗೌಡ ಅವರನ್ನು ಗೆಲ್ಲಿಸುವ ಹೊಣೆ ನನ್ನ ಮೇಲೆ ಇದೆ. ಎಲ್ಲರೂ ಸಹಕರಿಸಿ ಅಪ್ಪಾಜಿಗೌಡರನ್ನು ಗೆಲ್ಲಿಸೋಣ ಎಂದು ಕರೆ ನೀಡಿದರು.
ಈ ವಿಧಾನಪರಿಷತ್ ಚುನಾವಣೆ 2023ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಆಗಬೇಕು. ಕುರುಕ್ಷೇತ್ರ ಸಿನಿಮಾದಲ್ಲಿ ನಾನಗೆ ಅಭಿಮನ್ಯು ಪಾತ್ರ ಮಾಡಿ ಅಭ್ಯಸವಿದೆ. ಇದೀಗ ರಾಜಕೀಯದಲ್ಲೂ ನನಗೆ ಅಭಿಮನ್ಯು ಪಾತ್ರ ಮಾಡಿಸಿ ಬಿಟ್ಟಿದ್ದಾರೆ. ಅಪ್ಪಾಜಿ ಗೌಡರಂತಹ ಒಳ್ಳೆಯ ಅಭ್ಯರ್ಥಿಯನ್ನು ಈ ಬಾರಿ ಗೆಲ್ಲಿಸಿ ಎಂದು ಕಾರ್ಯಕರ್ತರಲ್ಲಿ ಮನವಿಮಾಡಿಕೊಂಡರು.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…