Featured

ರೈತ ಸಮುದಾಯಕ್ಕೆ ಮಹತ್ವದ ಮಾಹಿತಿ : `ಮೊಬೈಲ್ ಆಪ್’ ನಲ್ಲಿ ಬೆಳೆ ಸಮೀಕ್ಷೆ ವಿವರ ಅಪ್ಲೋಡ್ ಮಾಡುವಂತೆ ಸೂಚನೆ – Vishwanews24

ರೈತ ಸಮುದಾಯಕ್ಕೆ ಮಹತ್ವದ ಮಾಹಿತಿ : `ಮೊಬೈಲ್ ಆಪ್’ ನಲ್ಲಿ ಬೆಳೆ ಸಮೀಕ್ಷೆ ವಿವರ ಅಪ್ಲೋಡ್ ಮಾಡುವಂತೆ ಸೂಚನೆ

ಬೆಂಗಳೂರು : ರೈತರಿಂದಲೇ ತಮ್ಮ ಜಮೀನುಗಳಲ್ಲಿ 2022ರ ಮುಂಗಾರು ಬೆಳೆ ಸಮೀಕ್ಷೆಯನ್ನು ಕೈಗೊಳ್ಳಲು ಕೃಷಿ ಇಲಾಖೆಯು ಮೊಬೈಲ್ ಆಯಪ್ ಅವಕಾಶ ಕಲ್ಪಿಸಿದ್ದು ಜಿಲ್ಲೆಯ ರೈತರು ತಮ್ಮ ಜಮೀನಿನ ಬೆಳೆ ವಿವರಗಳನ್ನು ಆಪ್‌ಲೋಡ್ ಮಾಡಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಜಿ.ಎಸ್.ಜಯಸ್ವಾಮಿ ಅವರು ತಿಳಿಸಿದ್ದಾರೆ.

ಮೊಬೈಲ್ ಅಪ್‌ನಲ್ಲಿ ಬೆಳೆ ಸಮೀಕ್ಷೆ ಕೈಗೊಳ್ಳುವ ವಿಧಾನ: ಗೂಗಲ್ ಪ್ಲೇ-ಸ್ಟೋರ್ ನಿಂದ Kharif Farmer Crop – 2022-23 ಡೌನ್‌ಲೋಡ್ ಮಾಡಿಕೊಂಡು, ಆಧಾರ್ ಮೂಲಕ e-KYC ಮಾಡಿ(OTP ನಮೂದಿಸಿ ಆಪ್ ಸಕ್ರಿಯಗೊಳಿಸಿ). ಮೊಬೈಲ್‌ ಸಂಖ್ಯೆ ನಮೂದಿಸಿ ಆಪ್ ಸಕ್ರಿಯಗೊಳಿಸಿ. FRUITS ನಲ್ಲಿರುವಂತೆ ರೈತರ ವಿವರ ಮತ್ತು ಜಮೀನಿನ ವಿವರ ಸ್ವಯಂ ಡೌನ್‌ಲೋಡ್ ಆಗುವುದು. ಬೆಳೆ ಸಮೀಕ್ಷೆ ಮಾಡಲು ಸರ್ವೇ ನಂ. ಆಯ್ಕೆ ಮಾಡಿ.

ರಾಜ್ಯದಲ್ಲಿ ಒಟ್ಟು 3484 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿ: ಆರಗ ಜ್ಞಾನೇಂದ್ರ – Vishwanews24

ಬೆಳೆ ಹೆಸರು ಮತ್ತು ವಿವರ ನಮೂದಿಸಿ, ಛಾಯಾಚಿತ್ರ ತೆಗೆದು ಮಾಹಿತಿ ಸೇರಿಸಿ ತಮ್ಮ ಜಮೀನಿನಲ್ಲಿ ಬೆಳೆದಿರುವ ಎಲ್ಲಾ ಬೆಳೆಗಳ ವಿವರಗಳನ್ನು ಆಯಾ ಬೆಳೆಗಳ ವಿಸ್ತೀರ್ಣಕ್ಕೆ ಅನುಗುಣವಾಗಿ ಮಾಹಿತಿಯನ್ನು ಸೇರಿಸಿ ಒಂದಾದನಂತರ ಒಂದರಂತೆ ಎಲ್ಲ ಸರ್ವೇ ನಂ. ಮಾಹಿತಿಯನ್ನು ಸೇರಿಸಬಹುದು. ಸರ್ವೇ ನಂ. ಬಿಟ್ಟುಹೋಗಿದ್ದಲ್ಲಿ ಆಪ್ ಮೂಲಕವೇ ಸೇರಿಸಬಹುದಾಗಿದೆ. ಬೆಳೆ ಸಮೀಕ್ಷೆ ವರದಿಯಲ್ಲಿ ಬೆಳೆ ವಿವರ ಅಪ್ಲೋಡ್ ಆಗಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಿ.

ಆಧಾರ್ ಮೂಲಕ e-KYC ಮಾಡಲು ಸಾಧ್ಯವಾಗದಿದ್ದಲ್ಲಿ, ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರ, ಬ್ಯಾಂಕ್, ಅಂಚೆ ಕಚೇರಿ, ಆಟಲ್ ಜನಸ್ನೇಹಿ ಕೇಂದ್ರಕ್ಕೆ ತೆರಳಿ ಆಧಾರ್‌ಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಅಪೇಟ್ ಮಾಡಿಸಿ, FRUITS ವಿವರ ಡೌನ್‌ಲೋಡ್ ಆಗದಿದ್ದಲ್ಲಿ ಆಧಾರ್, ಪಹಣಿ, ಬ್ಯಾಂಕ್‌ ಖಾತೆ ಮಾಹಿತಿಯೊಂದಿಗೆ ಸಮೀಪದ ರೈತ ಸಂಪರ್ಕ ಕೇಂದ್ರ/ ತೋಟಗಾರಿಕೆ ಇಲಾಖೆ/ ಕಂದಾಯ ಇಲಾಖೆಯನ್ನು ಸಂಪರ್ಕಿಸಿ ನೊಂದಾಯಿಸಿಕೊಳ್ಳಿ.

ದುಬೈನಲ್ಲಿ ಗೋಲ್ಡನ್ ವೀಸಾ ಪಡೆದ ಕನ್ನಡದ ಮೊದಲ ನಟ ಕಿಚ್ಚ ಸುದೀಪ್ – Vishwanews24

ಸರ್ವೇ ನಂ, ಸೇರಿಸಲು ಸಮಸ್ಯೆ ಇದ್ದಲ್ಲಿ ಸಮೀಪದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಬೆಳೆ ಸಮೀಕ್ಷೆ ಸಹಾಯವಾಣಿ ಸಂಖ್ಯೆ : 844 844 7715 ಅನ್ನು ಸಂಪರ್ಕಿಸಿ ಅಥವಾ ಕೃಷಿ / ಕಂದಾಯ/ ತೋಟಗಾರಿಕೆ/ ರೇಷ್ಮೆ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರಾದ ಜಿ.ಎಸ್.ಜಯಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ – vishwanews24

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ…

1 hour ago

15 ವರ್ಷದೊಳಗಿನ ಮಕ್ಕಳಿಗೆ ಹೊಸ ಪಾಸ್‌ಪೋರ್ಟ್ ನಿಯಮ ಜಾರಿ – vishwanews24

ಪಾಸ್‌ಪೋರ್ಟ್ ನಿಯಮದಲ್ಲಿ ಬದಲಾವಣೆ : 15 ವರ್ಷದೊಳಗಿನ ಮಕ್ಕಳಿಗೆ ಹೊಸ ನೀತಿ, ಅರ್ಜಿ ಶುಲ್ಕ ಪರಿಷ್ಕರಣೆ ನವದೆಹಲಿ: ವಿದೇಶಾಂಗ ಸಚಿವಾಲಯವು…

2 hours ago

ಉಡುಪಿ: ಹುಲಿ ಕುಣಿತಕ್ಕೆ ಮನಸೋತ ಯತ್ನಾಳ್ ; ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ – vishwanews24

ಉಡುಪಿ: ಹುಲಿ ಕುಣಿತಕ್ಕೆ ಮನಸೋತ ಯತ್ನಾಳ್ ; ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಉಡುಪಿ: ಹುಲಿ ಕುಣಿತಕ್ಕೆ ಮನಸೋತ ಶಾಸಕ ಬಸನಗೌಡ ಪಾಟೀಲ್…

2 hours ago

ಮಂಗಳೂರು: ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ  – vishwanews24

ಮಂಗಳೂರು: ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ  ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳೂರಲ್ಲಿ ನಡೆಯಲಿರುವ ಸಚಿವ…

2 hours ago

ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತ ಮೊಬೈಲ್ ನೆಟ್‌ವರ್ಕ್ ಸಮಸ್ಯೆ; ತಾಂತ್ರಿಕ ಪರಿಹಾರಕ್ಕೆ ಸರ್ಕಾರ ಕ್ರಮ: ಪ್ರಿಯಾಂಕ್ ಖರ್ಗೆ – vishwanews24

ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತ ಮೊಬೈಲ್ ನೆಟ್‌ವರ್ಕ್ ಸಮಸ್ಯೆ; ತಾಂತ್ರಿಕ ಪರಿಹಾರಕ್ಕೆ ಸರ್ಕಾರ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು…

2 hours ago

ಉಡುಪಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸರ್ಕಾರದ ಚಿಂತನೆ : ಡಿಸಿಎಂ ಡಾ.ಜಿ.ಪರಮೇಶ್ವರ್ – vishwanews24

ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗದ ಅಭಿವೃದ್ಧಿ, ಪ್ರವಾಸೋದ್ಯಮಕ್ಕೆ ಆದ್ಯತೆ : ಡಿಸಿಎಂ ಡಾ.ಜಿ.ಪರಮೇಶ್ವರ್ ಉಡುಪಿ : ಉಡುಪಿ ಜಿಲ್ಲೆಯ…

2 hours ago