Featured

ರೈತ ಸಮುದಾಯಕ್ಕೆ  ಸಿಹಿಸುದ್ದಿ : 33 ಲಕ್ಷ ರೈತರಿಗೆ ಸಾಲ ನೀಡಲು ನಿರ್ಧಾರ : ಸಚಿವ ಎಸ್.ಟಿ. ಸೋಮಶೇಖರ್ – Vishwanews24

ರೈತ ಸಮುದಾಯಕ್ಕೆ  ಸಿಹಿಸುದ್ದಿ : 33 ಲಕ್ಷ ರೈತರಿಗೆ ಸಾಲ ನೀಡಲು ನಿರ್ಧಾರ : ಸಚಿವ ಎಸ್.ಟಿ. ಸೋಮಶೇಖರ್

ಮಡಿಕೇರಿ : ರಾಜ್ಯದ 33 ಲಕ್ಷ ಹೊಸ ರೈತರಿಗೆ ಸಾಲ ನೀಡಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಅವರು ಬಜೆಟಿನಲ್ಲಿ ಪ್ರಕಟಿಸಿದ್ದಾರೆ. ಸ್ವಸಹಾಯ ಗುಂಪುಗಳಿಗೆ ಹಾಗೂ ಇತರರಿಗೆ ಸಾಲ ನೀಡಲಾಗುತ್ತದೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ತಿಳಿಸಿದ್ದಾರೆ.

ಕುಶಾಲನಗರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ರೈತ ಸಹಕಾರ ಭವನದಲ್ಲಿ ಸೋಮವಾರ ನಡೆದ ‘ಕುಶಾಲನಗರ ಸಹಕಾರ ಸಂಘದ ಶತಮಾನೋತ್ಸವ’ ಸಮಾರಂಭ ಹಾಗೂ ನೂತನ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಮಾದರಿಯಲ್ಲಿ ಕೆಲವು ಬದಲಾವಣೆಗಳೊಂದಿಗೆ ಸುಲಭ ವ್ಯವಸ್ಥೆಯಲ್ಲಿ ಆರೋಗ್ಯ ವಿಮಾ ಯೋಜನೆಯನ್ನು ಜಾರಿಗೆ ತರಲು ಯೋಚಿಸಲಾಗಿದೆ ಎಂದು ಸಹಕಾರ ಸಚಿವರು ನುಡಿದರು. ರಾಜ್ಯದಲ್ಲಿ ಸುಮಾರು 9 ಲಕ್ಷ ಮಹಿಳಾ ಹಾಲು ಉತ್ಪಾದಕರು ಸೇರಿದಂತೆ ಒಟ್ಟು 26 ಲಕ್ಷ ಹಾಲು ಉತ್ಪಾದಕರಿಗೆ ಸುಗಮವಾಗಿ ಸಾಲ ಸೌಲಭ್ಯ ದೊರೆಯುವಂತಾಗಲು ಅಗತ್ಯ ಕ್ರಮವಹಿಸಲಾಗಿದೆ ಎಂದರು.

ರಾಜ್ಯದಲ್ಲಿ 6 ಸಾವಿರ ಕೋಟಿ ರೂ. ಗೂ ಹೆಚ್ಚು ಸಾಲ ಮನ್ನಾ ಮಾಡಲಾಗಿದೆ. ಇನ್ನೂ 31 ಸಾವಿರ ರೈತರ ಸಾಲ ಮನ್ನಾಕ್ಕೆ ಬಾಕಿ ಇದ್ದು, ಈ ಸಂಬಂಧ ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗಿದೆ ಎಂದು ಸಹಕಾರ ಸಚಿವರು ಹೇಳಿದರು. ರಾಜ್ಯದಲ್ಲಿ 21 ಡಿಸಿಸಿ ಬ್ಯಾಂಕ್‍ಗಳು ಇದ್ದು, 5,477 ಪ್ಯಾಕ್ಸ್ ಸಹಕಾರ ಸಂಘಗಳು ಇವೆ. ಎಲ್ಲಾ ಸಹಕಾರ ಸಂಘಗಳು ಉತ್ತಮವಾಗಿ ನಡೆಯುತ್ತಿದ್ದು, ಶೇ.99 ರಷ್ಟು ಸಾಲವನ್ನು ಮರುಪಾವತಿ ಮಾಡಲಾಗುತ್ತಿದೆ ಎಂದರು.

33 ಲಕ್ಷ ಹೊಸ ರೈತರಿಗೆ ಸಾಲ ನೀಡಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಅವರು ಬಜೆಟಿನಲ್ಲಿ ಪ್ರಕಟಿಸಿದ್ದಾರೆ. ಸ್ವಸಹಾಯ ಗುಂಪುಗಳಿಗೆ ಹಾಗೂ ಇತರರಿಗೆ ಸಾಲ ನೀಡಲಾಗುತ್ತದೆ ಎಂದು ಸಹಕಾರ ಸಚಿವರು ಹೇಳಿದರು.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

4 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

4 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

5 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

20 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

20 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

20 hours ago