Featured

ರೈತ ಹೋರಾಟಕ್ಕೆ ತನ್ನ ಬೆಂಬಲವನ್ನು ವ್ಯಕ್ತಪಡಿಸುತ್ತದೆ ಮತ್ತು ರೈತರ ಬೇಡಿಕೆಗಳ ಪರವಾಗಿ ನಿಲ್ಲುತ್ತದೆ : ಪಾಪುಲರ್ ಫ್ರಂಟ್ ಫ್ರಂಟ್ ಆಫ್ ಇಂಡಿಯಾ -Vishwanews24

ರೈತ ಹೋರಾಟಕ್ಕೆ ತನ್ನ ಬೆಂಬಲವನ್ನು ವ್ಯಕ್ತಪಡಿಸುತ್ತದೆ ಮತ್ತು ರೈತರ ಬೇಡಿಕೆಗಳ ಪರವಾಗಿ ನಿಲ್ಲುತ್ತದೆ : ಪಾಪುಲರ್ ಫ್ರಂಟ್ ಫ್ರಂಟ್ ಆಫ್ ಇಂಡಿಯಾ -Vishwanews24

ಹೊಸ ಕೃಷಿ ಮಸೂದೆಗಳ ವಿರುದ್ಧ ರೈತ ಸಂಘಟನೆಗಳು ಹಮ್ಮಿಕೊಂಡಿರುವ ದಿಲ್ಲಿ ಚಲೊ ಜಾಥಾವನ್ನುಪಾಪುಲರ್ ಫ್ರಂಟ್ ಆಫ್ ಇಂಡಿಯಾ ಬೆಂಬಲಿಸುವುದಾಗಿ ಇಂದು ಬಿಡುಗಡೆಗೊಳಿಸಿರುವ ಪತ್ರಿಕಾ ಪಕಟನೆಯಲ್ಲಿ ಸಂಘಟನೆಯ ರಾಷ್ಟ್ರೀಯ ಚೆಯರ್ ಮನ್ ಒ.ಎಂ.ಎ ಸಲಾಂ ತಿಳಿಸಿದ್ಯಾರೆ. ಫ್ಯಾಶಿಸ್ಟ್ ಪಡೆಗಳಿಂದ ಬೆದರಿಕೆಗೊಳಗಾಗಿರುವ ಸಂವಿಧಾನವನ್ನು ರಕ್ಷಿಸಲು ಮುಂದೆ ಬರುವಂತೆ ಅವರು ಜನರಿಗೆ ಕರೆ ನೀಡಿದ್ದಾರೆ.

ಹೊಸ ಮಸೂದೆಗಳ ಮೂಲಕ ಮೋದಿ ಸರಕಾರ ಭಾರತೀಯ ಕೃಷಿಕರ ಪರಿಸ್ಥಿತಿಯನ್ನು ಶೋಚನೀಯಗೊಳಿಸಿದ ಮತ್ತು ಬಡವರ ವಿರೋಧಿ ಹಾಗೂ ಜನವಿರೋಧಿ ಬಂಡವಾಳಶಾಹಿ ಮುಖವನ್ನು ಹೊರಗೆಡಹಿದೆ. ಸರಕಾರವು ರೈತರ ವ್ಯಥೆಗೆ ಸರಕಾರ ಕಿವಿಗೊಡದೇ ಇದ್ದರೆ ಅದು ಬೇಗನೇ ರಾಷ್ಟ್ರದ ವ್ಯಥೆಯಾಗಿ ಬದಲಾಗಲಿದೆ. ಈ ಶಾಂತಿಯುತ ಮತ್ತು ಪ್ರಜಾಸತ್ತಾತ್ಮಕ ಹೋರಾಟವನ್ನು ಬೆಂಬಲಿಸುವುದು ದೇಶದ ಪ್ರತಿಯೋರ್ವ ನಾಗರಿಕನ ಕರ್ತವ್ಯವಾಗಿದೆ. ಬಿಜೆಪಿ ಆಡಳಿತದ ಹರಿಯಾಣದಲ್ಲಿ ಪೊಲೀಸರು ಹಿಂಸಾತ್ಮಕ ಕ್ರಮಗಳ ಮೂಲಕ ಮತ್ತು ನಾಯಕರನ್ನು ಬಂಧಿಸುವ ಮೂಲಕ ಅವರ ಜಾಥಾವನ್ನು ತಡೆಯಲು ಪ್ರಯತ್ನಿಸುತ್ತಿದಾರೆ. ಕಠಿಣ ಪದಗಳ ಮೂಲಕ ಇದನ್ನು ಖಂಡಿಸಬೇಕಾಗಿದೆ. ಈ ಹೋರಾಟಕ್ಕೆ ಪಾಪ್ಯುಲರ್ ಫ್ರಂಟ್ ತನ್ನ ಬೆಂಬಲವನ್ನು ವ್ಯಕ್ತಪಡಿಸುತ್ತದೆ ಮತ್ತು ರೈತರ ಬೇಡಿಕೆಗಳ ಪರವಾಗಿ ನಿಲ್ಲುತ್ತದೆ ಎಂದು ಅವರು ಹೇಳಿದ್ದಾರೆ.

ಅತ್ಯಂತ ಕಠಿಣ ಪರಿಸ್ತಿತಿಯಲ್ಲಿ ದೇಶವು ಇಂದು ಸಂವಿಧಾನ ದಿನವನ್ನು ಆಚರಿಸುತ್ತಿದೆ. ಸಂವಿಧಾನವು ಪರೋಕ್ಷವಾಗಿ ಮತ್ತು ಪ್ರತ್ಯಕ್ಷವಾಗಿ ದಾಳಿಗೊಳಗಾಗುತ್ತಿದೆ. ಬಲಪಂಥೀಯ ಶಕ್ತಿಗಳು ಸಂವಿಧಾನದ ಬದಲಾಗಿ ಮನುಸ್ಮತಿಯನ್ನು ತರಲಾಗುವುದೆಂದು ಮುಕ್ತವಾಗಿ ಹೇಳುತ್ತಿದ್ದರೆ ಜನರ ಮೂಲಭೂತ ಹಕ್ಕುಗಳನ್ನು ಕಸಿಯುವುದಕ್ಕಾಗಿ ಮತ್ತು ಸಂವಿಧಾನದ ಮೂಲ ಅಡಿಪಾಯಗಳನ್ನು ದುರ್ಬಲಗೊಳಿಸುವುದಕ್ಕಾಗಿ ಅತ್ಯಂತ ಅಪಾಯಕಾರಿಯಾಗಿ ಹೊಸ ಕರಾಳ ಕಾನೂನುಗಳನ್ನು ತರಲಾಗುತ್ತಿದೆ. ಸಮಾಜದ ಅವಕಾಶ ವಂಚಿತ ಮತ್ತು ಅಧಿಕಾರ ಶೂನ್ಯ ವರ್ಗದ ಅಮಾಯಕ ಜನರು ಈಗಾಗಲೇ ಇವುಗಳ ಪರಿಣಾಮಗಳನ್ನು ಎದುರಿಸಲು ಪ್ರಾರಂಭಿಸಿದ್ದಾರೆ. ತಮ್ಮ ರಾಜಕೀಯ ನಿಲುವುಗಳಿಗಾಗಿ ಮತ್ತು ಸಲಾಕಾರದ ವಿರುದ್ಯದ ಅಭಿಪ್ರಾಯಗಳಿಗಾಗಿ ಅಮಾಯಕರನ್ನು ಜೈಲಿಗೆ ತಳ್ಳಲಾಗುತ್ತಿದೆ. ತಮ್ಮ ಎಲ್ಲಾ ಭಿನ್ನತೆಯ ಹೊರತಾಗಿಯೂ ಸಂವಿಧಾನವನ್ನು ರಕ್ಷಿಸುವುದಕ್ಕಾಗಿ ದೇಶದ ನಾಗರಿಕರು ಒಂದಾಗಿ ಹೋರಾಟ ಮಾಡುವ ಸಮಯ ಬಂದಿದೆ ಎಂದು ಅವರು ಹೇಳಿದ್ದಾರೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

5 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

6 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

6 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

6 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

6 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

7 hours ago