Featured

ರೈತ ಹೋರಾಟಕ್ಕೆ ತನ್ನ ಬೆಂಬಲವನ್ನು ವ್ಯಕ್ತಪಡಿಸುತ್ತದೆ ಮತ್ತು ರೈತರ ಬೇಡಿಕೆಗಳ ಪರವಾಗಿ ನಿಲ್ಲುತ್ತದೆ : ಪಾಪುಲರ್ ಫ್ರಂಟ್ ಫ್ರಂಟ್ ಆಫ್ ಇಂಡಿಯಾ -Vishwanews24

ರೈತ ಹೋರಾಟಕ್ಕೆ ತನ್ನ ಬೆಂಬಲವನ್ನು ವ್ಯಕ್ತಪಡಿಸುತ್ತದೆ ಮತ್ತು ರೈತರ ಬೇಡಿಕೆಗಳ ಪರವಾಗಿ ನಿಲ್ಲುತ್ತದೆ : ಪಾಪುಲರ್ ಫ್ರಂಟ್ ಫ್ರಂಟ್ ಆಫ್ ಇಂಡಿಯಾ -Vishwanews24

ಹೊಸ ಕೃಷಿ ಮಸೂದೆಗಳ ವಿರುದ್ಧ ರೈತ ಸಂಘಟನೆಗಳು ಹಮ್ಮಿಕೊಂಡಿರುವ ದಿಲ್ಲಿ ಚಲೊ ಜಾಥಾವನ್ನುಪಾಪುಲರ್ ಫ್ರಂಟ್ ಆಫ್ ಇಂಡಿಯಾ ಬೆಂಬಲಿಸುವುದಾಗಿ ಇಂದು ಬಿಡುಗಡೆಗೊಳಿಸಿರುವ ಪತ್ರಿಕಾ ಪಕಟನೆಯಲ್ಲಿ ಸಂಘಟನೆಯ ರಾಷ್ಟ್ರೀಯ ಚೆಯರ್ ಮನ್ ಒ.ಎಂ.ಎ ಸಲಾಂ ತಿಳಿಸಿದ್ಯಾರೆ. ಫ್ಯಾಶಿಸ್ಟ್ ಪಡೆಗಳಿಂದ ಬೆದರಿಕೆಗೊಳಗಾಗಿರುವ ಸಂವಿಧಾನವನ್ನು ರಕ್ಷಿಸಲು ಮುಂದೆ ಬರುವಂತೆ ಅವರು ಜನರಿಗೆ ಕರೆ ನೀಡಿದ್ದಾರೆ.

ಹೊಸ ಮಸೂದೆಗಳ ಮೂಲಕ ಮೋದಿ ಸರಕಾರ ಭಾರತೀಯ ಕೃಷಿಕರ ಪರಿಸ್ಥಿತಿಯನ್ನು ಶೋಚನೀಯಗೊಳಿಸಿದ ಮತ್ತು ಬಡವರ ವಿರೋಧಿ ಹಾಗೂ ಜನವಿರೋಧಿ ಬಂಡವಾಳಶಾಹಿ ಮುಖವನ್ನು ಹೊರಗೆಡಹಿದೆ. ಸರಕಾರವು ರೈತರ ವ್ಯಥೆಗೆ ಸರಕಾರ ಕಿವಿಗೊಡದೇ ಇದ್ದರೆ ಅದು ಬೇಗನೇ ರಾಷ್ಟ್ರದ ವ್ಯಥೆಯಾಗಿ ಬದಲಾಗಲಿದೆ. ಈ ಶಾಂತಿಯುತ ಮತ್ತು ಪ್ರಜಾಸತ್ತಾತ್ಮಕ ಹೋರಾಟವನ್ನು ಬೆಂಬಲಿಸುವುದು ದೇಶದ ಪ್ರತಿಯೋರ್ವ ನಾಗರಿಕನ ಕರ್ತವ್ಯವಾಗಿದೆ. ಬಿಜೆಪಿ ಆಡಳಿತದ ಹರಿಯಾಣದಲ್ಲಿ ಪೊಲೀಸರು ಹಿಂಸಾತ್ಮಕ ಕ್ರಮಗಳ ಮೂಲಕ ಮತ್ತು ನಾಯಕರನ್ನು ಬಂಧಿಸುವ ಮೂಲಕ ಅವರ ಜಾಥಾವನ್ನು ತಡೆಯಲು ಪ್ರಯತ್ನಿಸುತ್ತಿದಾರೆ. ಕಠಿಣ ಪದಗಳ ಮೂಲಕ ಇದನ್ನು ಖಂಡಿಸಬೇಕಾಗಿದೆ. ಈ ಹೋರಾಟಕ್ಕೆ ಪಾಪ್ಯುಲರ್ ಫ್ರಂಟ್ ತನ್ನ ಬೆಂಬಲವನ್ನು ವ್ಯಕ್ತಪಡಿಸುತ್ತದೆ ಮತ್ತು ರೈತರ ಬೇಡಿಕೆಗಳ ಪರವಾಗಿ ನಿಲ್ಲುತ್ತದೆ ಎಂದು ಅವರು ಹೇಳಿದ್ದಾರೆ.

ಅತ್ಯಂತ ಕಠಿಣ ಪರಿಸ್ತಿತಿಯಲ್ಲಿ ದೇಶವು ಇಂದು ಸಂವಿಧಾನ ದಿನವನ್ನು ಆಚರಿಸುತ್ತಿದೆ. ಸಂವಿಧಾನವು ಪರೋಕ್ಷವಾಗಿ ಮತ್ತು ಪ್ರತ್ಯಕ್ಷವಾಗಿ ದಾಳಿಗೊಳಗಾಗುತ್ತಿದೆ. ಬಲಪಂಥೀಯ ಶಕ್ತಿಗಳು ಸಂವಿಧಾನದ ಬದಲಾಗಿ ಮನುಸ್ಮತಿಯನ್ನು ತರಲಾಗುವುದೆಂದು ಮುಕ್ತವಾಗಿ ಹೇಳುತ್ತಿದ್ದರೆ ಜನರ ಮೂಲಭೂತ ಹಕ್ಕುಗಳನ್ನು ಕಸಿಯುವುದಕ್ಕಾಗಿ ಮತ್ತು ಸಂವಿಧಾನದ ಮೂಲ ಅಡಿಪಾಯಗಳನ್ನು ದುರ್ಬಲಗೊಳಿಸುವುದಕ್ಕಾಗಿ ಅತ್ಯಂತ ಅಪಾಯಕಾರಿಯಾಗಿ ಹೊಸ ಕರಾಳ ಕಾನೂನುಗಳನ್ನು ತರಲಾಗುತ್ತಿದೆ. ಸಮಾಜದ ಅವಕಾಶ ವಂಚಿತ ಮತ್ತು ಅಧಿಕಾರ ಶೂನ್ಯ ವರ್ಗದ ಅಮಾಯಕ ಜನರು ಈಗಾಗಲೇ ಇವುಗಳ ಪರಿಣಾಮಗಳನ್ನು ಎದುರಿಸಲು ಪ್ರಾರಂಭಿಸಿದ್ದಾರೆ. ತಮ್ಮ ರಾಜಕೀಯ ನಿಲುವುಗಳಿಗಾಗಿ ಮತ್ತು ಸಲಾಕಾರದ ವಿರುದ್ಯದ ಅಭಿಪ್ರಾಯಗಳಿಗಾಗಿ ಅಮಾಯಕರನ್ನು ಜೈಲಿಗೆ ತಳ್ಳಲಾಗುತ್ತಿದೆ. ತಮ್ಮ ಎಲ್ಲಾ ಭಿನ್ನತೆಯ ಹೊರತಾಗಿಯೂ ಸಂವಿಧಾನವನ್ನು ರಕ್ಷಿಸುವುದಕ್ಕಾಗಿ ದೇಶದ ನಾಗರಿಕರು ಒಂದಾಗಿ ಹೋರಾಟ ಮಾಡುವ ಸಮಯ ಬಂದಿದೆ ಎಂದು ಅವರು ಹೇಳಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

18 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

18 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago