ಕಾಪು, : ಉದ್ಯಾವರದ ಬೊಳ್ಜೆ ಪಾಪನಾಶಿನಿ ಹೊಳೆಯ ರೈಲ್ವೆ ಸೇತುವೆ ಬಳಿ ಮಲ್ಲಾರಿನ ವ್ಯಕ್ತಿಯೊಬ್ಬರ ಸಂಶಯಾಸ್ಪದವಾಗಿ ಮೃತಪಟ್ಟ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಲ್ಲಾರು ಗ್ರಾಮದ ಕನ್ನಡ ಶಾಲೆ ಹತ್ತಿರ ನಿವಾಸಿ ಉಬೇದುಲ್ಲಾ ಯಾನೆ ಮೊಹಮ್ಮದ್ ಖಾಸಿಂ(59) ಎಂಬವರ ಸಾವಿನ ಕುರಿತು ಸಂಶಯ ವ್ಯಕ್ತಪಡಿಸಿದ ಮೃತರ ಪುತ್ರಿ ತನಿಖೆಗೆ ಆಗ್ರಹಿಸಿ ಠಾಣೆಗೆ ದೂರು ನೀಡಿದ್ದಾರೆ.
ಗ್ಯಾರೇಜ್ ನಲ್ಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಉಬೇದುಲ್ಲಾ, ಆ.23ರಂದು ಮನೆಯಿಂದ ಬೈಕಿನಲ್ಲಿ ಉಡುಪಿಗೆ ತೆರಳಿದ್ದರು. ಸಂಜೆ 7:30ರ ಸುಮಾರಿಗೆ ಮಗಳು ಕರೆ ಮಾಡಿದಾಗ ಮನೆಗೆ ಈಗ ಬರುವುದಾಗಿ ಹೇಳಿದ್ದರು. ಬಳಿಕ ರಾತ್ರಿ 8 ಗಂಟೆಗೆ ಕರೆ ಮಾಡಿದಾಗ ಅವರ ಮೊಬೈಲ್ ಸ್ವಿಚ್ಆಫ್ ಆಗಿತ್ತು.
ಆ.24ರಂದು ಬೆಳಿಗ್ಗೆ ಅವರ ಮೃತದೇಹವು ಉದ್ಯಾವರದ ಬೊಳ್ಜೆ ಪಾಪನಾಶಿನಿ ಹೊಳೆಯ ರೈಲ್ವೆ ಸೇತುವೆ ಬಳಿ ಪತ್ತೆಯಾಗಿದ್ದು, ಮೃತದೇಹದ ಬಲಬದಿ ಹಣೆಯ ಸಮೀಪ ತರಚಿದ ಗಾಯ ಕಂಡುಬಂದಿದೆ ಎಂದು ದೂರಲಾಗಿದೆ. ಇವರು ಆ.23ರಂದು ರಾತ್ರಿ ವೇಳೆ ಮೃತಪಟ್ಟಿರುವ ಸಾಧ್ಯತೆ ಇದ್ದು ಮೃತರ ಸಾವಿನಲ್ಲಿ ಸಂಶಯವಿರುವುದಾಗಿ ಮಗಳು ಆಫ್ರೀನ್ ಬಾನು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…