ಕಾಪು, : ಉದ್ಯಾವರದ ಬೊಳ್ಜೆ ಪಾಪನಾಶಿನಿ ಹೊಳೆಯ ರೈಲ್ವೆ ಸೇತುವೆ ಬಳಿ ಮಲ್ಲಾರಿನ ವ್ಯಕ್ತಿಯೊಬ್ಬರ ಸಂಶಯಾಸ್ಪದವಾಗಿ ಮೃತಪಟ್ಟ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಲ್ಲಾರು ಗ್ರಾಮದ ಕನ್ನಡ ಶಾಲೆ ಹತ್ತಿರ ನಿವಾಸಿ ಉಬೇದುಲ್ಲಾ ಯಾನೆ ಮೊಹಮ್ಮದ್ ಖಾಸಿಂ(59) ಎಂಬವರ ಸಾವಿನ ಕುರಿತು ಸಂಶಯ ವ್ಯಕ್ತಪಡಿಸಿದ ಮೃತರ ಪುತ್ರಿ ತನಿಖೆಗೆ ಆಗ್ರಹಿಸಿ ಠಾಣೆಗೆ ದೂರು ನೀಡಿದ್ದಾರೆ.
ಗ್ಯಾರೇಜ್ ನಲ್ಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಉಬೇದುಲ್ಲಾ, ಆ.23ರಂದು ಮನೆಯಿಂದ ಬೈಕಿನಲ್ಲಿ ಉಡುಪಿಗೆ ತೆರಳಿದ್ದರು. ಸಂಜೆ 7:30ರ ಸುಮಾರಿಗೆ ಮಗಳು ಕರೆ ಮಾಡಿದಾಗ ಮನೆಗೆ ಈಗ ಬರುವುದಾಗಿ ಹೇಳಿದ್ದರು. ಬಳಿಕ ರಾತ್ರಿ 8 ಗಂಟೆಗೆ ಕರೆ ಮಾಡಿದಾಗ ಅವರ ಮೊಬೈಲ್ ಸ್ವಿಚ್ಆಫ್ ಆಗಿತ್ತು.
ಆ.24ರಂದು ಬೆಳಿಗ್ಗೆ ಅವರ ಮೃತದೇಹವು ಉದ್ಯಾವರದ ಬೊಳ್ಜೆ ಪಾಪನಾಶಿನಿ ಹೊಳೆಯ ರೈಲ್ವೆ ಸೇತುವೆ ಬಳಿ ಪತ್ತೆಯಾಗಿದ್ದು, ಮೃತದೇಹದ ಬಲಬದಿ ಹಣೆಯ ಸಮೀಪ ತರಚಿದ ಗಾಯ ಕಂಡುಬಂದಿದೆ ಎಂದು ದೂರಲಾಗಿದೆ. ಇವರು ಆ.23ರಂದು ರಾತ್ರಿ ವೇಳೆ ಮೃತಪಟ್ಟಿರುವ ಸಾಧ್ಯತೆ ಇದ್ದು ಮೃತರ ಸಾವಿನಲ್ಲಿ ಸಂಶಯವಿರುವುದಾಗಿ ಮಗಳು ಆಫ್ರೀನ್ ಬಾನು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…