ಬೆಂಗಳೂರು: ಭಾರಿ ನಿರೀಕ್ಷೆ ಹೊಂದಿದ್ದ ಮತ್ತು ಬಹು ಬೇಡಿಕೆಯ ಬೆಂಗಳೂರು–ಮುಂಬೈ ನಡುವಿನ ವಂದೇ ಭಾರತ್ ಸ್ಲೀಪರ್ ರೈಲು ಸೇವೆ ಆರಂಭಕ್ಕೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಆಗಸ್ಟ್ 1ರಿಂದ ಈ ರೈಲಿನ ಸಂಚಾರ ಆರಂಭವಾಗಲಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಈ ಯೋಜನೆಗೆ ಏಪ್ರಿಲ್ 16ರಂದು ಅನುಮೋದನೆ ದೊರಕಿತ್ತು. ಆ ಮೂಲಕ ಬೆಂಗಳೂರು-ಮುಂಬೈ ನಡುವಿನ ರೈಲು ಪ್ರಯಾಣ ಇನ್ನಷ್ಟು ಆರಾಮದಾಯಕವಾಗಲಿದೆ.
ಈ ಸ್ಲೀಪರ್ ರೈಲು ಕೆಎಸ್ಆರ್ ಬೆಂಗಳೂರು ರೈಲು ನಿಲ್ದಾಣದಿಂದ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಸ್ (CSMT)ವರೆಗೆ ಸಂಚರಿಸಲಿದ್ದು, ಸೊಲ್ಲಾಪುರ ಮತ್ತು ಕಲಬುರಗಿ ಮಾರ್ಗವಾಗಿ ತೆರಳಲಿದೆ. ಸಂಜೆ ವೇಳೆಗೆ ಹೊರಡುವ ರೈಲು ಮರುದಿನ ಬೆಳಗ್ಗೆ ಗಮ್ಯಸ್ಥಾನ ತಲುಪುವಂತೆ ವೇಳಾಪಟ್ಟಿ ಇರಲಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:
ವಂದೇ ಭಾರತ್ ಸ್ಲೀಪರ್ ಸೇವೆಯಿಂದ ಪ್ರಯಾಣದ ಈ ಸಮಯ ಸುಮಾರು 15 ಗಂಟೆಗೆ ಇಳಿಕೆಯಾಗುವ ನಿರೀಕ್ಷೆಯಿದೆ. ಈ ರೈಲು 16 ಬೋಗಿಗಳನ್ನು ಹೊಂದಿದ್ದು, ದೀರ್ಘ ದೂರ ಪ್ರಯಾಣಕ್ಕೆಂದೇ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಗರಿಷ್ಠ 180 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮರ್ಥ್ಯ ವಂದೇ ಭಾರತ್ ಸ್ಲೀಪರ್ ರೈಲಿಗಿದೆ. ಪ್ರಯಾಣಿಕರಿಗೆ ಮಲಗಲು ಉತ್ತಮ ವ್ಯವಸ್ಥೆ, ಸ್ವಚ್ಛ ಬೋಗಿಗಳು ಹಾಗೂ ಸುಧಾರಿತ ಸೌಲಭ್ಯಗಳು ಲಭ್ಯವಾಗಲಿವೆ. ಈ ರೈಲನ್ನು ಇಂಟಿಗ್ರಲ್ ಕೋಚ್ ಫ್ಯಾಕ್ಟರಿಯ ತಂತ್ರಜ್ಞಾನ ಬಳಸಿ BEML ಸಂಸ್ಥೆ ಅಭಿವೃದ್ಧಿಪಡಿಸಿದೆ. ಕಿತ್ತಳೆ ಮತ್ತು ಬೂದು ಬಣ್ಣದ ವಿನ್ಯಾಸ ಹೊಂದಿರುವ ಈ ಸ್ಲೀಪರ್ ರೈಲು ರಾತ್ರಿ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಇದು ದೇಶದ ಎರಡನೇ ವಂದೇ ಭಾರತ್ ಸ್ಲೀಪರ್ ರೈಲು ಆಗಿದ್ದು, ಮೊದಲ ರೈಲು 2026ರ ಜನವರಿಯಲ್ಲಿ ಹೌರಾ (ಕೋಲ್ಕತ್ತಾ) ಮತ್ತು ಕಾಮಾಖ್ಯ ಮಾರ್ಗದಲ್ಲಿ ಆರಂಭಗೊಂಡಿತ್ತು ಎಂದು ಬೆಂಗಳೂರು ನೌ ವರದಿ ಮಾಡಿದೆ.
ಇದನ್ನೂ ಓದಿ:
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…