ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ  : ‘IPS’ ಅಧಿಕಾರಿ ಡಿ. ರೂಪಾ ವಿರುದ್ಧದ ನಿರ್ಬಂಧಕಾಜ್ಞೆ ತೆರವುಗೊಳಿಸಿದ ಹೈಕೋರ್ಟ್  – Vishwanews24

Featured, ರಾಜ್ಯ ನ್ಯೂಸ್

ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ  : ‘IPS’ ಅಧಿಕಾರಿ ಡಿ. ರೂಪಾ ವಿರುದ್ಧದ ನಿರ್ಬಂಧಕಾಜ್ಞೆ ತೆರವುಗೊಳಿಸಿದ ಹೈಕೋರ್ಟ್ 

ಬೆಂಗಳೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ದ ಐಪಿಎಸ್ ಅಧಿಕಾರಿ ಡಿ.ರೂಪ ನಡುವಿನ ಸಮರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಭಂಧಕಾಜ್ಞೆ ಆದೇಶವನ್ನ ಹೈಕೋರ್ಟ್ ತೆರವುಗೊಳಿಸಿ ಆದೇಶ ಹೊರಡಿಸಿದೆ.

ಐಎಎಸ್ ರೋಹಿಣಿ ಸಿಂಧೂರಿ ವಿರುದ್ದ ಐಪಿಎಸ್ ಅಧಿಕಾರಿ ಡಿ.ರೂಪ ಯಾವುದೇ ಮಾನಹಾನಿಕರ ಹೇಳಿಕೆ ನೀಡದಂತೆ ಹೊರಡಿಸಿದ್ದ ನಿರ್ಭಂಧಕಾಜ್ಞೆ ಆದೇಶವನ್ನ ಹೈಕೋರ್ಟ್ ತೆರವುಗೊಳಿಸಿದ್ದು, ಈ ಮೂಲಕ ರೋಹಿಣಿಗೆ ಮತ್ತೆ ಸಂಕಷ್ಟ ಎದುರಾಗಿದೆ.

ನಿರ್ಬಂಧಕಾಜ್ಞೆ ತೆರವಿನಿಂದಾಗಿ ತಮ್ಮ ವಿರುದ್ಧ ಮತ್ತೆ ಯಾವ ಆರೋಪಗಳು ಬರುತ್ತವೆ ಎಂಬ ಆತಂಕ ರೋಹಿಣಿ ಸಿಂಧೂರಿಯಲ್ಲಿದೆ.

ನಾನು ವರುಣಾ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ : ಸಚಿವ ವಿ. ಸೋಮಣ್ಣ ಸ್ಪಷ್ಟನೆ  – Vishwanews24

ಐಪಿಎಸ್ ಅಧಿಕಾರಿ ಡಿ.ರೂಪ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಶ್ರೀನಿವಾಸ ಹರೀಶ್ ಕುಮಾರ್ ಅವರಿದ್ದ ನ್ಯಾಯಪೀಠವು ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ನಿರ್ಬಂಧಕಾಜ್ಞೆ ಆದೇಶವನ್ನು ತೆರವುಗೊಳಿಸಿ ಇಂದು ಆದೇಶ ಹೊರಡಿಸಿದೆ.ರೂಪಾ ಅವರು ನನ್ನ ಖಾಸಗಿ ಮೊಬೈಲ್ ನಂಬರ್ , ಫೋಟೋ, ವಿಳಾಸವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಇದರಿಂದ ಅಪರಿಚಿತರು ನನಗೆ ಕರೆ ಮಾಡಿ ತೊಂದರೆ ನೀಡುತ್ತಿದ್ದಾರೆ.ಇದರಿಂದ ನನ್ನ ವೈಯಕ್ತಿಕ ವಿಚಾರಕ್ಕೆ ಧಕ್ಕೆಯಾಗುತ್ತಿದೆ. ಆದ್ದರಿಂದ . ಡಿ ರೂಪಾ ವಿರುದ್ಧ ‘ ನಿರ್ಬಂಧಕಾಜ್ಞೆ’ ವಿಧಿಸುವಂತೆ ರೋಹಿಣಿ ಸಿಂಧೂರಿ ಕೋರ್ಟ್ ಮೆಟ್ಟಿಲೇರಿದ್ದರು.

ಕಾಪು: ಸೊರಕೆಯವರು ತನ್ನ ಆಡಳಿತ ಅವಧಿಯಲ್ಲಿ ಕಾಪು ಕ್ಷೇತ್ರವನ್ನು ಅಭಿವೃದ್ಧಿಯ ತುತ್ತತುದಿಗೆ ತಂದು ನಿಲ್ಲಿಸಿದ್ದರು : ಡಾ.ದೇವಿ ಪ್ರಸಾದ್ ಶೆಟ್ಟಿ – Vishwanews24

Leave a Reply