ಬೆಂಗಳೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ದ ಐಪಿಎಸ್ ಅಧಿಕಾರಿ ಡಿ.ರೂಪ ನಡುವಿನ ಸಮರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಭಂಧಕಾಜ್ಞೆ ಆದೇಶವನ್ನ ಹೈಕೋರ್ಟ್ ತೆರವುಗೊಳಿಸಿ ಆದೇಶ ಹೊರಡಿಸಿದೆ.
ಐಎಎಸ್ ರೋಹಿಣಿ ಸಿಂಧೂರಿ ವಿರುದ್ದ ಐಪಿಎಸ್ ಅಧಿಕಾರಿ ಡಿ.ರೂಪ ಯಾವುದೇ ಮಾನಹಾನಿಕರ ಹೇಳಿಕೆ ನೀಡದಂತೆ ಹೊರಡಿಸಿದ್ದ ನಿರ್ಭಂಧಕಾಜ್ಞೆ ಆದೇಶವನ್ನ ಹೈಕೋರ್ಟ್ ತೆರವುಗೊಳಿಸಿದ್ದು, ಈ ಮೂಲಕ ರೋಹಿಣಿಗೆ ಮತ್ತೆ ಸಂಕಷ್ಟ ಎದುರಾಗಿದೆ.
ನಿರ್ಬಂಧಕಾಜ್ಞೆ ತೆರವಿನಿಂದಾಗಿ ತಮ್ಮ ವಿರುದ್ಧ ಮತ್ತೆ ಯಾವ ಆರೋಪಗಳು ಬರುತ್ತವೆ ಎಂಬ ಆತಂಕ ರೋಹಿಣಿ ಸಿಂಧೂರಿಯಲ್ಲಿದೆ.
ಐಪಿಎಸ್ ಅಧಿಕಾರಿ ಡಿ.ರೂಪ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಶ್ರೀನಿವಾಸ ಹರೀಶ್ ಕುಮಾರ್ ಅವರಿದ್ದ ನ್ಯಾಯಪೀಠವು ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ನಿರ್ಬಂಧಕಾಜ್ಞೆ ಆದೇಶವನ್ನು ತೆರವುಗೊಳಿಸಿ ಇಂದು ಆದೇಶ ಹೊರಡಿಸಿದೆ.ರೂಪಾ ಅವರು ನನ್ನ ಖಾಸಗಿ ಮೊಬೈಲ್ ನಂಬರ್ , ಫೋಟೋ, ವಿಳಾಸವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಇದರಿಂದ ಅಪರಿಚಿತರು ನನಗೆ ಕರೆ ಮಾಡಿ ತೊಂದರೆ ನೀಡುತ್ತಿದ್ದಾರೆ.ಇದರಿಂದ ನನ್ನ ವೈಯಕ್ತಿಕ ವಿಚಾರಕ್ಕೆ ಧಕ್ಕೆಯಾಗುತ್ತಿದೆ. ಆದ್ದರಿಂದ . ಡಿ ರೂಪಾ ವಿರುದ್ಧ ‘ ನಿರ್ಬಂಧಕಾಜ್ಞೆ’ ವಿಧಿಸುವಂತೆ ರೋಹಿಣಿ ಸಿಂಧೂರಿ ಕೋರ್ಟ್ ಮೆಟ್ಟಿಲೇರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…