ಬೆಂಗಳೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ದ ಐಪಿಎಸ್ ಅಧಿಕಾರಿ ಡಿ.ರೂಪ ನಡುವಿನ ಸಮರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಭಂಧಕಾಜ್ಞೆ ಆದೇಶವನ್ನ ಹೈಕೋರ್ಟ್ ತೆರವುಗೊಳಿಸಿ ಆದೇಶ ಹೊರಡಿಸಿದೆ.
ಐಎಎಸ್ ರೋಹಿಣಿ ಸಿಂಧೂರಿ ವಿರುದ್ದ ಐಪಿಎಸ್ ಅಧಿಕಾರಿ ಡಿ.ರೂಪ ಯಾವುದೇ ಮಾನಹಾನಿಕರ ಹೇಳಿಕೆ ನೀಡದಂತೆ ಹೊರಡಿಸಿದ್ದ ನಿರ್ಭಂಧಕಾಜ್ಞೆ ಆದೇಶವನ್ನ ಹೈಕೋರ್ಟ್ ತೆರವುಗೊಳಿಸಿದ್ದು, ಈ ಮೂಲಕ ರೋಹಿಣಿಗೆ ಮತ್ತೆ ಸಂಕಷ್ಟ ಎದುರಾಗಿದೆ.
ನಿರ್ಬಂಧಕಾಜ್ಞೆ ತೆರವಿನಿಂದಾಗಿ ತಮ್ಮ ವಿರುದ್ಧ ಮತ್ತೆ ಯಾವ ಆರೋಪಗಳು ಬರುತ್ತವೆ ಎಂಬ ಆತಂಕ ರೋಹಿಣಿ ಸಿಂಧೂರಿಯಲ್ಲಿದೆ.
ಐಪಿಎಸ್ ಅಧಿಕಾರಿ ಡಿ.ರೂಪ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಶ್ರೀನಿವಾಸ ಹರೀಶ್ ಕುಮಾರ್ ಅವರಿದ್ದ ನ್ಯಾಯಪೀಠವು ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ನಿರ್ಬಂಧಕಾಜ್ಞೆ ಆದೇಶವನ್ನು ತೆರವುಗೊಳಿಸಿ ಇಂದು ಆದೇಶ ಹೊರಡಿಸಿದೆ.ರೂಪಾ ಅವರು ನನ್ನ ಖಾಸಗಿ ಮೊಬೈಲ್ ನಂಬರ್ , ಫೋಟೋ, ವಿಳಾಸವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಇದರಿಂದ ಅಪರಿಚಿತರು ನನಗೆ ಕರೆ ಮಾಡಿ ತೊಂದರೆ ನೀಡುತ್ತಿದ್ದಾರೆ.ಇದರಿಂದ ನನ್ನ ವೈಯಕ್ತಿಕ ವಿಚಾರಕ್ಕೆ ಧಕ್ಕೆಯಾಗುತ್ತಿದೆ. ಆದ್ದರಿಂದ . ಡಿ ರೂಪಾ ವಿರುದ್ಧ ‘ ನಿರ್ಬಂಧಕಾಜ್ಞೆ’ ವಿಧಿಸುವಂತೆ ರೋಹಿಣಿ ಸಿಂಧೂರಿ ಕೋರ್ಟ್ ಮೆಟ್ಟಿಲೇರಿದ್ದರು.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…