Featured

ರೌಡಿ ಲಕ್ಷ್ಮಣ್ ಕೊಲೆ ಪ್ರಕರಣದಲ್ಲಿ ಜೆಡಿಎಸ್ ನಾಯಕಿಯ ಪುತ್ರಿ ಅರೆಸ್ಟ್ – Vishwanews24

ಬೆಂಗಳೂರು: ಹಾಡ ಹಗಲೇ ನಡೆದ ಶ್ರೀಮಂತ ರೌಡಿ ಶೀಟರ್ ಲಕ್ಷ್ಮಣ ಬರ್ಬರ ಕೊಲೆ ಪ್ರಕರಣದಲ್ಲಿ ಸುಂದರಿಯೊಬ್ಬಳ ಕೈವಾಡವಿರುವುದು ಸಿಸಿಬಿ ಪೊಲೀಸರ ತನಿಖೆಯಲ್ಲಿ ಸಾಬೀತಾಗಿದೆ.
ಲಕ್ಷ್ಮಣ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಜೆಡಿಎಸ್ ನಾಯಕಿಯ ಪುತ್ರಿ ವರ್ಷಿಣಿ ಸೇರಿದಂತೆ ಸೇರಿದಂತೆ ಆರು ಮಂದಿಯನ್ನು ಬಂಧಿಸಿದ್ದು,  ಕೋರ್ಟ್ ಗೆ ಹಾಜರುಪಡಿಸಿದ್ದಾರೆ.

ಆರೋಪಿಗಳ ವಿಚಾರಣೆ ನಡೆಸಿದ 1ನೇ ಎಸಿಎಂಎಂ ಕೋರ್ಟ್, ಆರು ಆರೋಪಿಗಳನ್ನು ಹತ್ತು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದೆ.ಮಾರ್ಚ್ 7ರಂದು ಮಹಾಲಕ್ಷ್ಮಿ ಲೇಔಟ್ ನಲ್ಲಿ ಹಾಡಹಗಲೇ ರೌಡಿ ಲಕ್ಷ್ಮಣನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ದೇವರಾಜ್, ಹೇಮಂತ್, ಕ್ಯಾಟ್ ರಾಜ, ರೂಪೇಶ್ ಚೇತನ್ ಹಾಗೂ ವರ್ಷಿಣಿಯನ್ನು ಕಳೆದ ರಾತ್ರಿ ಬಂಧಿಸಿದ್ದರು.ಲಕ್ಷ್ಮಣ ಕೊಲೆಯ ಹಿಂದೆ ವರ್ಷಿಣಿ ಕೈವಾಡ ಇದ್ದಿರುವುದನ್ನು ಪೊಲೀಸರು ತನಿಖೆ ವೇಳೆ ಪತ್ತೆಹಚ್ಚಿದ್ದಾರೆ.

ಈ ವರ್ಷಿಣಿ ರೌಡಿಶೀಟರ್ ಮೋಟೆ ಹರೀಶ್ ಮಗಳು ಎಂದು ತಿಳಿದುಬಂದಿದ್ದು, ವರ್ಷಿಣಿ ತಾಯಿ ಪದ್ಮ ಸ್ಥಳೀಯ ಜೆಡಿಎಸ್ ಘಟಕದ ಅಧ್ಯಕ್ಷೆಯಾಗಿದ್ದಾರೆ.ವರ್ಷಿಣಿ ರೂಪೇಶ್ ಜೊತೆಗೆ ಪ್ರೀತಿಸುತ್ತಿದ್ದಳು. ಆದರೆ ಆಕೆಯ ತಾಯಿ ಆತನನ್ನು ದೂರ ಮಾಡಿದ್ದಳು. ಅದಕ್ಕೆ ಲಕ್ಷ್ಮಣ ಸಹಾಯ ಕೋರಿದ್ದಳು. ಈ ರೂಪೇಶ್ ಸಣ್ಣ ಪುಟ್ಟ ಕಳ್ಳತನ ಪ್ರಕರಣ ಮಾಡಿಕೊಂಡು ರೌಡಿ ಶೀಟರ್ ಲಕ್ಷ್ಮಣ ಗ್ಯಾಂಗ್ ನಲ್ಲಿದ್ದ ಹುಡುಗನಾಗಿದ್ದ.
ವರ್ಷಿಣಿಯನ್ನು ರೂಪೇಶ್ ನಿಂದ ದೂರ ಮಾಡಿದ ಮೇಲೆ ಲಕ್ಷ್ಮಣ ಆಕೆಯೊಂದಿಗೆ ಹತ್ತಿರವಾಗಲು ಪ್ರಯತ್ನಿಸುತ್ತಿದ್ದ. ಆಕೆ ಆತನನ್ನು ನಂಬಿಸಿ ಬಲೆಗೆ ಹಾಕಿ ರೂಪೇಶ್ ಹಾಗೂ ತಂಡದವರಿಂದ ಆತನನ್ನು ಮುಗಿಸಲು ಸಂಚು ರೂಪಿಸಿದ್ದಳು.

ಎಂಬಿಬಿಎಸ್ ಓದಿ ಎಂಎಸ್ ಓದಲು ಲಂಡನ್ ಗೆ ಹೋಗಿದ್ದ ವರ್ಷಿಣಿ ರೌಡಿ ಲಕ್ಷ್ಮಣ್ ಗೆ ಬರಲು ಹೇಳಿ ಆ ಮಾಹಿತಿಯನ್ನು ರೂಪೇಶ್ ಗೆ ನೀಡಿ ಮಟಾಷ್ ಮಾಡಿಸಿದ್ದಾಳೆ. ಲಂಡನ್ ನಲ್ಲಿಯೇ ಇದ್ದು ಪ್ರಿಯತಮನ ಸಹಾಯದಿಂದ ಕೊಲೆ ಮಾಡಿಸಿದ್ದಾಳೆ.
ಇದೀಗ ವರ್ಷಿಣಿ ಹಾಗೂ ಆಕೆಯ ಪ್ರಿಯತಮ ರೂಪೇಶ್ ಸೇರಿ, ಕೊಲೆ ಪ್ರಮುಖ ಆರೋಪಿಗಳಾದ ಕ್ಯಾಟ್ ರಾಜಾ, ದೇವರಾಜ್, ಹೇಮಂತ್, ಚೇತನ್ ಸೇರಿ ಹಲವರನ್ನು ಬಂ‍‍ಧಿಸಿ ವಿಚಾರಣೆ ನಡೆಸಲಾಗುತ್ತಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

10 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

11 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

11 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

11 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

12 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

12 hours ago