Featured

ರೌಡಿ ಲಕ್ಷ್ಮಣ್ ಕೊಲೆ ಪ್ರಕರಣದಲ್ಲಿ ಜೆಡಿಎಸ್ ನಾಯಕಿಯ ಪುತ್ರಿ ಅರೆಸ್ಟ್ – Vishwanews24

ಬೆಂಗಳೂರು: ಹಾಡ ಹಗಲೇ ನಡೆದ ಶ್ರೀಮಂತ ರೌಡಿ ಶೀಟರ್ ಲಕ್ಷ್ಮಣ ಬರ್ಬರ ಕೊಲೆ ಪ್ರಕರಣದಲ್ಲಿ ಸುಂದರಿಯೊಬ್ಬಳ ಕೈವಾಡವಿರುವುದು ಸಿಸಿಬಿ ಪೊಲೀಸರ ತನಿಖೆಯಲ್ಲಿ ಸಾಬೀತಾಗಿದೆ.
ಲಕ್ಷ್ಮಣ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಜೆಡಿಎಸ್ ನಾಯಕಿಯ ಪುತ್ರಿ ವರ್ಷಿಣಿ ಸೇರಿದಂತೆ ಸೇರಿದಂತೆ ಆರು ಮಂದಿಯನ್ನು ಬಂಧಿಸಿದ್ದು,  ಕೋರ್ಟ್ ಗೆ ಹಾಜರುಪಡಿಸಿದ್ದಾರೆ.

ಆರೋಪಿಗಳ ವಿಚಾರಣೆ ನಡೆಸಿದ 1ನೇ ಎಸಿಎಂಎಂ ಕೋರ್ಟ್, ಆರು ಆರೋಪಿಗಳನ್ನು ಹತ್ತು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದೆ.ಮಾರ್ಚ್ 7ರಂದು ಮಹಾಲಕ್ಷ್ಮಿ ಲೇಔಟ್ ನಲ್ಲಿ ಹಾಡಹಗಲೇ ರೌಡಿ ಲಕ್ಷ್ಮಣನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ದೇವರಾಜ್, ಹೇಮಂತ್, ಕ್ಯಾಟ್ ರಾಜ, ರೂಪೇಶ್ ಚೇತನ್ ಹಾಗೂ ವರ್ಷಿಣಿಯನ್ನು ಕಳೆದ ರಾತ್ರಿ ಬಂಧಿಸಿದ್ದರು.ಲಕ್ಷ್ಮಣ ಕೊಲೆಯ ಹಿಂದೆ ವರ್ಷಿಣಿ ಕೈವಾಡ ಇದ್ದಿರುವುದನ್ನು ಪೊಲೀಸರು ತನಿಖೆ ವೇಳೆ ಪತ್ತೆಹಚ್ಚಿದ್ದಾರೆ.

ಈ ವರ್ಷಿಣಿ ರೌಡಿಶೀಟರ್ ಮೋಟೆ ಹರೀಶ್ ಮಗಳು ಎಂದು ತಿಳಿದುಬಂದಿದ್ದು, ವರ್ಷಿಣಿ ತಾಯಿ ಪದ್ಮ ಸ್ಥಳೀಯ ಜೆಡಿಎಸ್ ಘಟಕದ ಅಧ್ಯಕ್ಷೆಯಾಗಿದ್ದಾರೆ.ವರ್ಷಿಣಿ ರೂಪೇಶ್ ಜೊತೆಗೆ ಪ್ರೀತಿಸುತ್ತಿದ್ದಳು. ಆದರೆ ಆಕೆಯ ತಾಯಿ ಆತನನ್ನು ದೂರ ಮಾಡಿದ್ದಳು. ಅದಕ್ಕೆ ಲಕ್ಷ್ಮಣ ಸಹಾಯ ಕೋರಿದ್ದಳು. ಈ ರೂಪೇಶ್ ಸಣ್ಣ ಪುಟ್ಟ ಕಳ್ಳತನ ಪ್ರಕರಣ ಮಾಡಿಕೊಂಡು ರೌಡಿ ಶೀಟರ್ ಲಕ್ಷ್ಮಣ ಗ್ಯಾಂಗ್ ನಲ್ಲಿದ್ದ ಹುಡುಗನಾಗಿದ್ದ.
ವರ್ಷಿಣಿಯನ್ನು ರೂಪೇಶ್ ನಿಂದ ದೂರ ಮಾಡಿದ ಮೇಲೆ ಲಕ್ಷ್ಮಣ ಆಕೆಯೊಂದಿಗೆ ಹತ್ತಿರವಾಗಲು ಪ್ರಯತ್ನಿಸುತ್ತಿದ್ದ. ಆಕೆ ಆತನನ್ನು ನಂಬಿಸಿ ಬಲೆಗೆ ಹಾಕಿ ರೂಪೇಶ್ ಹಾಗೂ ತಂಡದವರಿಂದ ಆತನನ್ನು ಮುಗಿಸಲು ಸಂಚು ರೂಪಿಸಿದ್ದಳು.

ಎಂಬಿಬಿಎಸ್ ಓದಿ ಎಂಎಸ್ ಓದಲು ಲಂಡನ್ ಗೆ ಹೋಗಿದ್ದ ವರ್ಷಿಣಿ ರೌಡಿ ಲಕ್ಷ್ಮಣ್ ಗೆ ಬರಲು ಹೇಳಿ ಆ ಮಾಹಿತಿಯನ್ನು ರೂಪೇಶ್ ಗೆ ನೀಡಿ ಮಟಾಷ್ ಮಾಡಿಸಿದ್ದಾಳೆ. ಲಂಡನ್ ನಲ್ಲಿಯೇ ಇದ್ದು ಪ್ರಿಯತಮನ ಸಹಾಯದಿಂದ ಕೊಲೆ ಮಾಡಿಸಿದ್ದಾಳೆ.
ಇದೀಗ ವರ್ಷಿಣಿ ಹಾಗೂ ಆಕೆಯ ಪ್ರಿಯತಮ ರೂಪೇಶ್ ಸೇರಿ, ಕೊಲೆ ಪ್ರಮುಖ ಆರೋಪಿಗಳಾದ ಕ್ಯಾಟ್ ರಾಜಾ, ದೇವರಾಜ್, ಹೇಮಂತ್, ಚೇತನ್ ಸೇರಿ ಹಲವರನ್ನು ಬಂ‍‍ಧಿಸಿ ವಿಚಾರಣೆ ನಡೆಸಲಾಗುತ್ತಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago