ಮಂಗಳೂರು : ಲಂಚ ಪಡೆದು ಮೀತಿ ಮೀರಿ ಆದಾಯ ಸಂಪಾದನೆ ಮಾಡಿದ ಮಂಗಳೂರು ಮಹಾನಗರಪಾಲಿಕೆ ಅಧಿಕಾರಿಯ ಆರೋಪ ಸಾಭೀತಾಗಿದ್ದು 3ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯ ಅಪರಾಧಿಗೆ 5 ವರ್ಷ ಸಜೆ ಮತ್ತು 35 ಲಕ್ಷ ರೂ. ದಂಡ ವಿಧಿಸಿದೆ.
ಮಂಗಳೂರು ಮನಪಾ ಸಹಾಯಕ ನಗರ ಯೋಜನಾಧಿಕಾರಿ ಎಸ್.ಇ. ಮಂಜುನಾಥ ಸ್ವಾಮಿ (50) ಶಿಕ್ಷೆಗೊಳಗಾದ ಅಪರಾಧಿ. ಮಂಜುನಾಥ ಸ್ವಾಮಿ ಆದಾಯಕ್ಕಿಂತ ಹೆಚ್ಚು ಸಂಪಾದನೆ ಮಾಡಿದ್ದಾರೆಂಬ ಆಪಾದನೆ ಹಿನ್ನಲೆಯಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸರು 2007 ರಲ್ಲಿ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು.
ಈ ಬಗ್ಗೆ 3 ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ. ಜಕಾತಿ ಸಮಗ್ರ ವಿಚಾರಣೆ ನಡೆಸಿ ಅಪರಾಧ ಸಾಬೀತುಪಡಿಸಿ ಅಂತಿಮ ತೀರ್ಪು ನೀಡಿದ್ದಾರೆ. ಅಪರಾಧಿಗೆ 5 ವರ್ಷ ಸಾದಾ ಸಜೆ ಹಾಗೂ 35 ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡ ಕಟ್ಟಲು ವಿಫಲವಾದಲ್ಲಿ ಮತ್ತೆ 1 ವರ್ಷಗಳ ಸಾದಾ ಸಜೆ ಅನುಭವಿಸಬೇಕಾಗಿದೆ. ಲೋಕಾಯುಕ್ತ ಇನ್ಸ್ಪೆಕ್ಟರ್ ಆಗಿದ್ದ ಪ್ರಸನ್ನ ವಿ.ರಾಜು ದೂರು ನೀಡಿದ್ದು, ಲೋಕಾಯುಕ್ತ ಡಿವೈಎಸ್ಪಿ ಆಗಿದ್ದ ಸದಾನಂದ ವರ್ಣೇಕರ್ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…