ಮಂಗಳೂರು : ಲಂಚ ಪಡೆದು ಮೀತಿ ಮೀರಿ ಆದಾಯ ಸಂಪಾದನೆ ಮಾಡಿದ ಮಂಗಳೂರು ಮಹಾನಗರಪಾಲಿಕೆ ಅಧಿಕಾರಿಯ ಆರೋಪ ಸಾಭೀತಾಗಿದ್ದು 3ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯ ಅಪರಾಧಿಗೆ 5 ವರ್ಷ ಸಜೆ ಮತ್ತು 35 ಲಕ್ಷ ರೂ. ದಂಡ ವಿಧಿಸಿದೆ.
ಮಂಗಳೂರು ಮನಪಾ ಸಹಾಯಕ ನಗರ ಯೋಜನಾಧಿಕಾರಿ ಎಸ್.ಇ. ಮಂಜುನಾಥ ಸ್ವಾಮಿ (50) ಶಿಕ್ಷೆಗೊಳಗಾದ ಅಪರಾಧಿ. ಮಂಜುನಾಥ ಸ್ವಾಮಿ ಆದಾಯಕ್ಕಿಂತ ಹೆಚ್ಚು ಸಂಪಾದನೆ ಮಾಡಿದ್ದಾರೆಂಬ ಆಪಾದನೆ ಹಿನ್ನಲೆಯಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸರು 2007 ರಲ್ಲಿ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು.
ಈ ಬಗ್ಗೆ 3 ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ. ಜಕಾತಿ ಸಮಗ್ರ ವಿಚಾರಣೆ ನಡೆಸಿ ಅಪರಾಧ ಸಾಬೀತುಪಡಿಸಿ ಅಂತಿಮ ತೀರ್ಪು ನೀಡಿದ್ದಾರೆ. ಅಪರಾಧಿಗೆ 5 ವರ್ಷ ಸಾದಾ ಸಜೆ ಹಾಗೂ 35 ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡ ಕಟ್ಟಲು ವಿಫಲವಾದಲ್ಲಿ ಮತ್ತೆ 1 ವರ್ಷಗಳ ಸಾದಾ ಸಜೆ ಅನುಭವಿಸಬೇಕಾಗಿದೆ. ಲೋಕಾಯುಕ್ತ ಇನ್ಸ್ಪೆಕ್ಟರ್ ಆಗಿದ್ದ ಪ್ರಸನ್ನ ವಿ.ರಾಜು ದೂರು ನೀಡಿದ್ದು, ಲೋಕಾಯುಕ್ತ ಡಿವೈಎಸ್ಪಿ ಆಗಿದ್ದ ಸದಾನಂದ ವರ್ಣೇಕರ್ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…