Featured

ಲಂಚ ಪ್ರಕರಣ: ಮುಲ್ಕಿ ಕಂದಾಯ ನಿರೀಕ್ಷಕನ ಜಾಮೀನು ಅರ್ಜಿ ವಜಾ – vishwanews24

ಲಂಚ ಪ್ರಕರಣ: ಮುಲ್ಕಿ ಕಂದಾಯ ನಿರೀಕ್ಷಕನ ಜಾಮೀನು ಅರ್ಜಿ ವಜಾ

ಮಂಗಳೂರು: ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದು ನ್ಯಾಯಾಂಗ ಬಂಧನದಲ್ಲಿರುವ ಮೂಲ್ಕಿ ಕಂದಾಯ ನಿರೀಕ್ಷಕ ಜಿ.ಎಸ್.ದಿನೇಶ್ ಅವರ ಜಾಮೀನು ಅರ್ಜಿಯನ್ನು ಮಂಗಳೂರು ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ ವಜಾಗೊಳಿಸಿದೆ.

ನ್ಯಾಯಾಧೀಶೆ ಸಂಧ್ಯಾ ಎಸ್ ಅರ್ಜಿಯನ್ನು ವಜಾಗೊಳಿಸಿ, ನ್ಯಾಯಾಂಗ ಬಂಧನವನ್ನು ವಿಸ್ತರಿಸಿದ್ದಾರೆ.2024ರ ಡಿಸೆಂಬರ್ 19ರಂದು 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಿನೇಶ್ ಅವರನ್ನು ಬಂಧಿಸಿದ್ದರು. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಲೋಕಾಯುಕ್ತ ಸಂಸ್ಥೆಯ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ರವೀಂದ್ರ ಮುನ್ನಿಪ್ಪಾಡಿ ರವರು ವಾದಿಸಿದರು. ಆರೋಪಿತ ಅಧಿಕಾರಿಗೆ ನ್ಯಾಯಾಂಗ ಬಂಧನ ಮುಂದುವರಿದಿದೆ ಎಂಬುದಾಗಿ ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರಾದ ನಟರಾಜ ಎಂ.ಎ ರವರು ತಿಳಿಸಿದರು.

ಒಂದು ವರ್ಷಕ್ಕಿಂತ ಹೆಚ್ಚು ಕಾಲ ವಿಲೇವಾರಿಯಾಗದ ಕಡತವು ಲೋಕಾಯುಕ್ತ ಟ್ರ್ಯಾಪ್ ಕೇಸ್ ನಂತರ ಕೇವಲ 210 ರೂಪಾಯಿ ಗೆ ವಾರಸುದಾರರ ಹೆಸರನ್ನು ಸೇರಿಸುವ ವಿಷಯವನ್ನು ಪರಿಹರಿಸಿದ್ದಕ್ಕಾಗಿ ದೂರುದಾರರು ಲೋಕಾಯುಕ್ತರನ್ನು ಶ್ಲಾಘಿಸಿದರು. ನ್ಯಾಯಾಲಯದ ತೀರ್ಪಿನ ನಂತರ ಆರೋಪಿಯು ನ್ಯಾಯಾಂಗ ಬಂಧನದಲ್ಲಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

7 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

7 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

7 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

7 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago